<p><strong>ರಾಯಪುರ:</strong> ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇತ್ತೀಚೆಗೆ ಅಮೆರಿಕದಲ್ಲಿ ಸಿಖ್ಖರ ಕುರಿತು ನೀಡಿದ ಹೇಳಿಕೆಯ ವಿರುದ್ಧ ಛತ್ತೀಸಗಢದಲ್ಲಿ ಬಿಜೆಪಿ ನಾಯಕರು ಮೂರು ಪ್ರತ್ಯೇಕ ಎಫ್ಐಆರ್ ದಾಖಲಿಸಿದ್ದಾರೆ.</p><p>ರಾಯಪುರ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಒಂದು, ಬಿಲಾಸ್ಪುರ ಜಿಲ್ಲಾ ಸಿವಿಲ್ ಲೈನ್ಸ್ ಠಾಣೆಯಲ್ಲಿ ಗುರುವಾರ ಎರಡು ಪ್ರಕರಣಗಳು ದಾಖಲಾಗಿವೆ. ದುರ್ಗ್ ಜಿಲ್ಲೆಯ ಕೋಟ್ವಾಲಿ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಒಂದು ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.</p><p>ಬಿಜೆಪಿ ನಾಯಕರು ನೀಡಿದ ದೂರಿನ ಮೇರೆಗೆ ರಾಹುಲ್ ಗಾಂಧಿ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 299 ಮತ್ತು 302ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ ಎಂದರು.</p><p>ಛತ್ತೀಸಗಢ ರಾಜ್ಯ ಬಿಜೆಪಿ ವಕ್ತಾರ ಅಮರ್ಜೀತ್ ಸಿಂಗ್ ಛಾಬ್ರಾ, ‘ರಾಹುಲ್ ಹೇಳಿಕೆಯೂ ಸಿಖ್ ಸಮುದಾಯದ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ’ ಎಂದು ಆರೋಪಿಸಿ ರಾಯಪುರದಲ್ಲಿ ದೂರು ದಾಖಲಿಸಿದರು.</p><p>‘ಭಾರತದಲ್ಲಿ ಸಿಖ್ಖರಿಗೆ ಪಗಡಿ ಅಥವಾ ಕಡಾ ಧರಿಸಲು ಹಾಗೂ ಗುರುದ್ವಾರಕ್ಕೆ ಹೋಗಲು ಅನುಮತಿ ನೀಡುತ್ತಾರೆಯೇ’ ಎಂದು ರಾಹುಲ್ ಗಾಂಧಿ ಅಮೆರಿಕದಲ್ಲಿ ಹೇಳಿಕೆ ನೀಡಿರುವುದಾಗಿ ವಿವರಿಸಿದ್ದಾರೆ.</p><p>‘ಭಾರತ ಸೇರಿದಂತೆ ಇಡೀ ಪ್ರಪಂಚ ದಲ್ಲೇ ಸಿಖ್ ಸಮುದಾಯದವರು ಪಗಡಿ ಮತ್ತು ಕಡಾ ಧರಿಸಿ ಗುರುದ್ವಾರ ಪ್ರವೇಶಿಸುತ್ತಾರೆ. ಪ್ರಧಾನಿ ಕೂಡ ಪಗಡಿ ಮತ್ತು ಕಡಾ ಧರಿಸಿಯೇ ಗುರುದ್ವಾರಕ್ಕೆ ಭೇಟಿ ನೀಡುತ್ತಾರೆ’ ಎಂದು ಅಮರ್ಜೀತ್ ಸಿಂಗ್ ಛಾಬ್ರಾ ಹೇಳಿದ್ದಾರೆ.</p><p>ರಾಹುಲ್ ಹೇಳಿಕೆಯು ಶಾಂತಿಪ್ರಿಯ ಸಿಖ್ ಸಮುದಾಯದ ಭಾವನೆಗಳಿಗೆ ನೋವುಂಟು ಮಾಡುವುದಾಗಿದೆ. ಇದು ಸಮಾಜದ ಇತರ ಧರ್ಮಗಳೊಂದಿಗೆ ತಾರತಮ್ಯ ಮತ್ತು ದ್ವೇಷವನ್ನು ಉಂಟು ಮಾಡುತ್ತದೆ ಎಂದು ಆರೋಪಿಸಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಪುರ:</strong> ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇತ್ತೀಚೆಗೆ ಅಮೆರಿಕದಲ್ಲಿ ಸಿಖ್ಖರ ಕುರಿತು ನೀಡಿದ ಹೇಳಿಕೆಯ ವಿರುದ್ಧ ಛತ್ತೀಸಗಢದಲ್ಲಿ ಬಿಜೆಪಿ ನಾಯಕರು ಮೂರು ಪ್ರತ್ಯೇಕ ಎಫ್ಐಆರ್ ದಾಖಲಿಸಿದ್ದಾರೆ.</p><p>ರಾಯಪುರ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಒಂದು, ಬಿಲಾಸ್ಪುರ ಜಿಲ್ಲಾ ಸಿವಿಲ್ ಲೈನ್ಸ್ ಠಾಣೆಯಲ್ಲಿ ಗುರುವಾರ ಎರಡು ಪ್ರಕರಣಗಳು ದಾಖಲಾಗಿವೆ. ದುರ್ಗ್ ಜಿಲ್ಲೆಯ ಕೋಟ್ವಾಲಿ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಒಂದು ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.</p><p>ಬಿಜೆಪಿ ನಾಯಕರು ನೀಡಿದ ದೂರಿನ ಮೇರೆಗೆ ರಾಹುಲ್ ಗಾಂಧಿ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 299 ಮತ್ತು 302ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ ಎಂದರು.</p><p>ಛತ್ತೀಸಗಢ ರಾಜ್ಯ ಬಿಜೆಪಿ ವಕ್ತಾರ ಅಮರ್ಜೀತ್ ಸಿಂಗ್ ಛಾಬ್ರಾ, ‘ರಾಹುಲ್ ಹೇಳಿಕೆಯೂ ಸಿಖ್ ಸಮುದಾಯದ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ’ ಎಂದು ಆರೋಪಿಸಿ ರಾಯಪುರದಲ್ಲಿ ದೂರು ದಾಖಲಿಸಿದರು.</p><p>‘ಭಾರತದಲ್ಲಿ ಸಿಖ್ಖರಿಗೆ ಪಗಡಿ ಅಥವಾ ಕಡಾ ಧರಿಸಲು ಹಾಗೂ ಗುರುದ್ವಾರಕ್ಕೆ ಹೋಗಲು ಅನುಮತಿ ನೀಡುತ್ತಾರೆಯೇ’ ಎಂದು ರಾಹುಲ್ ಗಾಂಧಿ ಅಮೆರಿಕದಲ್ಲಿ ಹೇಳಿಕೆ ನೀಡಿರುವುದಾಗಿ ವಿವರಿಸಿದ್ದಾರೆ.</p><p>‘ಭಾರತ ಸೇರಿದಂತೆ ಇಡೀ ಪ್ರಪಂಚ ದಲ್ಲೇ ಸಿಖ್ ಸಮುದಾಯದವರು ಪಗಡಿ ಮತ್ತು ಕಡಾ ಧರಿಸಿ ಗುರುದ್ವಾರ ಪ್ರವೇಶಿಸುತ್ತಾರೆ. ಪ್ರಧಾನಿ ಕೂಡ ಪಗಡಿ ಮತ್ತು ಕಡಾ ಧರಿಸಿಯೇ ಗುರುದ್ವಾರಕ್ಕೆ ಭೇಟಿ ನೀಡುತ್ತಾರೆ’ ಎಂದು ಅಮರ್ಜೀತ್ ಸಿಂಗ್ ಛಾಬ್ರಾ ಹೇಳಿದ್ದಾರೆ.</p><p>ರಾಹುಲ್ ಹೇಳಿಕೆಯು ಶಾಂತಿಪ್ರಿಯ ಸಿಖ್ ಸಮುದಾಯದ ಭಾವನೆಗಳಿಗೆ ನೋವುಂಟು ಮಾಡುವುದಾಗಿದೆ. ಇದು ಸಮಾಜದ ಇತರ ಧರ್ಮಗಳೊಂದಿಗೆ ತಾರತಮ್ಯ ಮತ್ತು ದ್ವೇಷವನ್ನು ಉಂಟು ಮಾಡುತ್ತದೆ ಎಂದು ಆರೋಪಿಸಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>