ವಿಧಾನಸಭೆಯಲ್ಲಿ ಈ ಬಗ್ಗೆ ನಡೆದ ಚರ್ಚೆಗೆ ಉತ್ತರಿಸಿದ ಅವರು, ‘ನಮಗೆ ವಿಭಿನ್ನ ರೀತಿಯ ಮೂರು ರಾಜಧಾನಿಗಳು ಅಗತ್ಯ. ಈಗಿನ ಅಮರಾವತಿಯನ್ನು ಶಾಸಕಾಂಗ ರಾಜಧಾನಿಯನ್ನಾಗಿ, ವಿಶಾಖಪಟ್ಟಣವನ್ನು ಕಾರ್ಯಾಂಗ ರಾಜಧಾನಿಯನ್ನಾಗಿ ಹಾಗೂ ಕರ್ನೂಲ್ ಅನ್ನು ನ್ಯಾಯಾಂಗ ರಾಜಧಾನಿಯನ್ನಾಗಿ ಮಾಡುವ ಉದ್ದೇಶ ಇದೆ. ಈ ಬಗ್ಗೆ ಗಂಭೀರ ಚಿಂತನೆ ನಡೆಸುವುದು ಅಗತ್ಯವಿದೆ’ ಎಂದರು.