<p class="title"><strong>ಶ್ರೀನಗರ</strong>: ಪಾಕಿಸ್ತಾನ ಮೂಲದ ಜೈಷ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಮೂವರು ಭಯೋತ್ಪಾದಕರನ್ನು ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹೊಡೆದುರುಳಿಸಿವೆ.</p>.<p class="title">ಉತ್ತರ ಕಾಶ್ಮೀರದ ಕ್ರೀರಿ ಪ್ರದೇಶದಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ಉಗ್ರರ ವಿರುದ್ಧ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ಮೃತಪಟ್ಟಿದ್ದಾರೆ ಎಂದು ಐಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ.</p>.<p class="title">ಎನ್ಕೌಂಟರ್ನಲ್ಲಿ ಹತರಾದ ಭಯೋತ್ಪಾದಕರು ಶ್ರೀನಗರಕ್ಕೆ ಬಂದು ಭಯೋತ್ಪಾದನಾ ಕೃತ್ಯವೆಸಗುತ್ತಿದ್ದರು. ಹೀಗಾಗಿ ಈ ಮೂವರ ಹತ್ಯೆಯು ಬಹುದೊಡ್ಡ ಯಶಸ್ವಿ ಕಾರ್ಯಾಚರಣೆಯಾಗಿದೆ. ಗುಲ್ಮಾರ್ಗ್ ಗುಡ್ಡಗಾಡು ಪ್ರದೇಶದಲ್ಲಿ ಕಳೆದ 3-4 ತಿಂಗಳಿಂದ ಉಗ್ರರು ಚಟುವಟಿಕೆಗಳು ಸಕ್ರಿಯವಾಗಿವೆ. ಅಲ್ಲದೆ, ಉಗ್ರರನ್ನು ಸದೆಬಡೆಯುವ ಯತ್ನಗಳು ಮುಂದುವರಿದಿದೆ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಶ್ರೀನಗರ</strong>: ಪಾಕಿಸ್ತಾನ ಮೂಲದ ಜೈಷ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಮೂವರು ಭಯೋತ್ಪಾದಕರನ್ನು ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹೊಡೆದುರುಳಿಸಿವೆ.</p>.<p class="title">ಉತ್ತರ ಕಾಶ್ಮೀರದ ಕ್ರೀರಿ ಪ್ರದೇಶದಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ಉಗ್ರರ ವಿರುದ್ಧ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ಮೃತಪಟ್ಟಿದ್ದಾರೆ ಎಂದು ಐಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ.</p>.<p class="title">ಎನ್ಕೌಂಟರ್ನಲ್ಲಿ ಹತರಾದ ಭಯೋತ್ಪಾದಕರು ಶ್ರೀನಗರಕ್ಕೆ ಬಂದು ಭಯೋತ್ಪಾದನಾ ಕೃತ್ಯವೆಸಗುತ್ತಿದ್ದರು. ಹೀಗಾಗಿ ಈ ಮೂವರ ಹತ್ಯೆಯು ಬಹುದೊಡ್ಡ ಯಶಸ್ವಿ ಕಾರ್ಯಾಚರಣೆಯಾಗಿದೆ. ಗುಲ್ಮಾರ್ಗ್ ಗುಡ್ಡಗಾಡು ಪ್ರದೇಶದಲ್ಲಿ ಕಳೆದ 3-4 ತಿಂಗಳಿಂದ ಉಗ್ರರು ಚಟುವಟಿಕೆಗಳು ಸಕ್ರಿಯವಾಗಿವೆ. ಅಲ್ಲದೆ, ಉಗ್ರರನ್ನು ಸದೆಬಡೆಯುವ ಯತ್ನಗಳು ಮುಂದುವರಿದಿದೆ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>