ಈ ಬಗ್ಗೆ ಮಾಹಿತಿ ನೀಡಿದ ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ವಿಜಯ್ ಸಾಖರೆ, ‘ರಮೇಶ್, ಆರುಮುಗನ್ ಹಾಗೂ ಸರವಣನ್ ಬಂಧಿತ ಆರೋಪಿಗಳಾಗಿದ್ದು, ಇವರು ನವೆಂಬರ್ನಲ್ಲಿ ಹತ್ಯೆಗೀಡಾದ ಆರ್ಎಸ್ಎಸ್ ಕಾರ್ಯಕರ್ತ ಸಂಜಿತ್ ಅವರ ಸ್ನೇಹಿತರು. ಸಂಜಿತ್ ಕೊಲೆಗೆ ಸೇಡು ತೀರಿಸಿಕೊಳ್ಳಲು, ಈ ಮೂವರು ಪಿಎಫ್ಐ ನಾಯಕ ಸುಬೈರ್ನನ್ನು ಹತ್ಯೆ ಮಾಡಿದ್ದಾರೆ ಎಂದು ಶಂಕಿಸಲಾಗಿದೆ. ಆದರೆ, ಸಂಜಿತ್ ಕೊಲೆ ಪ್ರಕರಣದಲ್ಲಿ ಸುಬೈರ್ನ ಪಾತ್ರವಿದೆ ಎಂಬುದು ಖಚಿತವಾಗಿಲ್ಲ’ ಎಂದು ಹೇಳಿದರು.