<p>ನವದೆಹಲಿ (ಪಿಟಿಐ/ಐಎಎನ್ಎಸ್): ಮುಂಬರುವ ಲೋಕಸಭಾ ಚುನಾವಣೆಯ ‘ಉಪಾಂತ್ಯ ಪಂದ್ಯ’ ಎಂದೇ ಬಣ್ಣಿಸಲಾಗುತ್ತಿರುವ ಐದು ರಾಜ್ಯಗಳ ಚುನಾವಣೆಯಲ್ಲಿ ಮಿಜೋರಾಂ ಮತ್ತು ದೆಹಲಿ ಹೊರತುಪಡಿಸಿ ಉಳಿದ ಮೂರು ರಾಜ್ಯಗಳ ಫಲಿತಾಂಶವು ಸ್ಪಷ್ಟವಾಗಿ ಬಿಜೆಪಿ ಪರವಾಗಿರುವ ಸಾಧ್ಯತೆ ಇದೆ ಎಂದು ಮತಗಟ್ಟೆ ಸಮೀಪ ಸಮೀಕ್ಷೆಗಳು ಬಹುತೇಕವಾಗಿ ಅಂದಾಜಿಸಿವೆ.<br /> <br /> ಛತ್ತೀಸಗಡ ಮತ್ತು ಮಧ್ಯಪ್ರದೇಶಗಳಲ್ಲಿ ಬಿಜೆಪಿ ಅಧಿಕಾರ ಉಳಿಸಿಕೊಳ್ಳಲಿದ್ದು, ಕೈತಪ್ಪಿದ್ದ ರಾಜಸ್ತಾನ ವಿಧಾನಸಭೆಯನ್ನು ಈ ಸಾರಿ ಬಿಜೆಪಿ ವಶಪಡಿಸಿಕೊಳ್ಳುವ ಸಾಧ್ಯತೆ ಇದೆ.<br /> <br /> ದೆಹಲಿ ವಿಧಾನಸಭೆಯು ಅತಂತ್ರವಾಗುವಂತಹ ಫಲಿತಾಂಶ ಹೊರಬೀಳುವ ಸಾಧ್ಯತೆ ಇದ್ದರೂ, ಬಿಜೆಪಿಯು ಮುನ್ನಡೆ ಸಾಧಿಸಲಿದೆ ಎಂದು ಮತಗಟ್ಟೆ ಸಮೀಪದ ವಿವಿಧ ಸಮೀಕ್ಷೆಗಳಿಂದ ತಿಳಿದು ಬಂದಿದೆ.<br /> <br /> 40 ಸದಸ್ಯ ಬಲಹೊಂದಿರುವ ಈಶಾನ್ಯ ಭಾಗದ ಮಿಜೋರಾಂ ವಿಧಾನಸಭೆಯಲ್ಲೂ ಅತಂತ್ರ ಸ್ಥಿತಿ ನಿರ್ಮಾಣವಾಗಬಹುದು ಎಂದೂ ಸಮೀಕ್ಷೆಗಳು ಅಂದಾಜಿಸಿವೆ.<br /> <br /> <strong>ಕಾಂಗ್ರೆಸ್ನಲ್ಲಿ ಆತಂಕ:</strong> ದೆಹಲಿಯಲ್ಲಿ ಬುಧವಾರ ನಡೆದ ಮತದಾನದ ನಂತರ ಬಿತ್ತರವಾದ ಈ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಮತಗಟ್ಟೆ ಸಮೀಪ ಸಮೀಕ್ಷೆಗಳು ಕಾಂಗ್ರೆಸ್ನಲ್ಲಿ ಆತಂಕ ಮೂಡಿಸಿದೆ ಎನ್ನಲಾಗಿದೆ.<br /> <br /> ಮಿಜೋರಾಂನಲ್ಲಿ ಕಾಂಗ್ರಸ್ಗೆ 19 ಸ್ಥಾನಗಳು, ಎಂಎನ್ಎಫ್ಎಂಪಿಸಿ ಮೈತ್ರಿಕೂಟಕ್ಕೆ 14 ಮತ್ತು ಜೆಡ್ಎನ್ಪಿಗೆ ಐದು ಸ್ಥಾನಗಳು ದೊರಕಬಹುದು ಎಂದು ‘ಟೈಮ್ಸ್ ನೌ ಸಿ–ವೋಟರ್’ ಸಮೀಕ್ಷೆ ಹೇಳಿದೆ.<br /> <br /> <strong>ದೆಹಲಿ– ಎಎಪಿಗೆ 18 ಸ್ಥಾನ?</strong><br /> ಇದೇ ಮೊದಲ ಬಾರಿಗೆ ದೆಹಲಿ ವಿಧಾನಸಭಾ ಚುನಾವಣೆಯ ಕಣಕ್ಕೆ ಇಳಿದಿರುವ ಆಮ್ ಆದ್ಮಿ ಪಕ್ಷವು (ಎಎಪಿ), ಫಲಿತಾಂಶವನ್ನು ತಲೆಕೆಳಗು ಮಾಡುವ ಎಲ್ಲ ಸಾಧ್ಯತೆಗಳು ಗೋಚರಿಸಿವೆ. 70 ಸದಸ್ಯ ಬಲದ ದೆಹಲಿ ವಿಧಾನಸಭೆಯಲ್ಲಿ 18 ಸ್ಥಾನಗಳನ್ನು ಈ ಪಕ್ಷ ತನ್ನ ತೆಕ್ಕೆಗೆ ಹಾಕಿಕೊಳ್ಳಬಹುದು ಎಂದು ಒಂದು ಸಮೀಕ್ಷೆ ಹೇಳಿದೆ.<br /> <br /> </p>.<p><br /> <br /> <br /> <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ (ಪಿಟಿಐ/ಐಎಎನ್ಎಸ್): ಮುಂಬರುವ ಲೋಕಸಭಾ ಚುನಾವಣೆಯ ‘ಉಪಾಂತ್ಯ ಪಂದ್ಯ’ ಎಂದೇ ಬಣ್ಣಿಸಲಾಗುತ್ತಿರುವ ಐದು ರಾಜ್ಯಗಳ ಚುನಾವಣೆಯಲ್ಲಿ ಮಿಜೋರಾಂ ಮತ್ತು ದೆಹಲಿ ಹೊರತುಪಡಿಸಿ ಉಳಿದ ಮೂರು ರಾಜ್ಯಗಳ ಫಲಿತಾಂಶವು ಸ್ಪಷ್ಟವಾಗಿ ಬಿಜೆಪಿ ಪರವಾಗಿರುವ ಸಾಧ್ಯತೆ ಇದೆ ಎಂದು ಮತಗಟ್ಟೆ ಸಮೀಪ ಸಮೀಕ್ಷೆಗಳು ಬಹುತೇಕವಾಗಿ ಅಂದಾಜಿಸಿವೆ.<br /> <br /> ಛತ್ತೀಸಗಡ ಮತ್ತು ಮಧ್ಯಪ್ರದೇಶಗಳಲ್ಲಿ ಬಿಜೆಪಿ ಅಧಿಕಾರ ಉಳಿಸಿಕೊಳ್ಳಲಿದ್ದು, ಕೈತಪ್ಪಿದ್ದ ರಾಜಸ್ತಾನ ವಿಧಾನಸಭೆಯನ್ನು ಈ ಸಾರಿ ಬಿಜೆಪಿ ವಶಪಡಿಸಿಕೊಳ್ಳುವ ಸಾಧ್ಯತೆ ಇದೆ.<br /> <br /> ದೆಹಲಿ ವಿಧಾನಸಭೆಯು ಅತಂತ್ರವಾಗುವಂತಹ ಫಲಿತಾಂಶ ಹೊರಬೀಳುವ ಸಾಧ್ಯತೆ ಇದ್ದರೂ, ಬಿಜೆಪಿಯು ಮುನ್ನಡೆ ಸಾಧಿಸಲಿದೆ ಎಂದು ಮತಗಟ್ಟೆ ಸಮೀಪದ ವಿವಿಧ ಸಮೀಕ್ಷೆಗಳಿಂದ ತಿಳಿದು ಬಂದಿದೆ.<br /> <br /> 40 ಸದಸ್ಯ ಬಲಹೊಂದಿರುವ ಈಶಾನ್ಯ ಭಾಗದ ಮಿಜೋರಾಂ ವಿಧಾನಸಭೆಯಲ್ಲೂ ಅತಂತ್ರ ಸ್ಥಿತಿ ನಿರ್ಮಾಣವಾಗಬಹುದು ಎಂದೂ ಸಮೀಕ್ಷೆಗಳು ಅಂದಾಜಿಸಿವೆ.<br /> <br /> <strong>ಕಾಂಗ್ರೆಸ್ನಲ್ಲಿ ಆತಂಕ:</strong> ದೆಹಲಿಯಲ್ಲಿ ಬುಧವಾರ ನಡೆದ ಮತದಾನದ ನಂತರ ಬಿತ್ತರವಾದ ಈ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಮತಗಟ್ಟೆ ಸಮೀಪ ಸಮೀಕ್ಷೆಗಳು ಕಾಂಗ್ರೆಸ್ನಲ್ಲಿ ಆತಂಕ ಮೂಡಿಸಿದೆ ಎನ್ನಲಾಗಿದೆ.<br /> <br /> ಮಿಜೋರಾಂನಲ್ಲಿ ಕಾಂಗ್ರಸ್ಗೆ 19 ಸ್ಥಾನಗಳು, ಎಂಎನ್ಎಫ್ಎಂಪಿಸಿ ಮೈತ್ರಿಕೂಟಕ್ಕೆ 14 ಮತ್ತು ಜೆಡ್ಎನ್ಪಿಗೆ ಐದು ಸ್ಥಾನಗಳು ದೊರಕಬಹುದು ಎಂದು ‘ಟೈಮ್ಸ್ ನೌ ಸಿ–ವೋಟರ್’ ಸಮೀಕ್ಷೆ ಹೇಳಿದೆ.<br /> <br /> <strong>ದೆಹಲಿ– ಎಎಪಿಗೆ 18 ಸ್ಥಾನ?</strong><br /> ಇದೇ ಮೊದಲ ಬಾರಿಗೆ ದೆಹಲಿ ವಿಧಾನಸಭಾ ಚುನಾವಣೆಯ ಕಣಕ್ಕೆ ಇಳಿದಿರುವ ಆಮ್ ಆದ್ಮಿ ಪಕ್ಷವು (ಎಎಪಿ), ಫಲಿತಾಂಶವನ್ನು ತಲೆಕೆಳಗು ಮಾಡುವ ಎಲ್ಲ ಸಾಧ್ಯತೆಗಳು ಗೋಚರಿಸಿವೆ. 70 ಸದಸ್ಯ ಬಲದ ದೆಹಲಿ ವಿಧಾನಸಭೆಯಲ್ಲಿ 18 ಸ್ಥಾನಗಳನ್ನು ಈ ಪಕ್ಷ ತನ್ನ ತೆಕ್ಕೆಗೆ ಹಾಕಿಕೊಳ್ಳಬಹುದು ಎಂದು ಒಂದು ಸಮೀಕ್ಷೆ ಹೇಳಿದೆ.<br /> <br /> </p>.<p><br /> <br /> <br /> <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>