<p><strong>ಸಂಬಲ್ಪುರ</strong>: ಒಡಿಶಾದ ಸಂಬಲ್ಪುರ ನಗರದ ಮಣಪ್ಪುರಂ ಫೈನಾನ್ಸ್ ಶಾಖೆಯೊಂದರಲ್ಲಿ ದರೋಡೆಕೋರರು ಬರೋಬ್ಬರಿ 30 ಕೆ.ಜಿ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.</p><p>ನಗರದ ಮಣಪ್ಪುರಂ ಫೈನಾನ್ಸ್ ಶಾಖೆಯಲ್ಲಿ ಈ ಘಟನೆ ನಡೆದಿದೆ.</p><p>'ಸುಮಾರು ಹತ್ತು ಮಂದಿ ದರೋಡೆಕೋರರು ಹೆಲ್ಮೆಟ್ ಮತ್ತು ಮುಖವಾಡಗಳನ್ನು ಧರಿಸಿ ಏಕಾಏಕಿ ಶಾಖೆಗೆ ನುಗ್ಗಿ ಸಿಬ್ಬಂದಿಗೆ ಬಂದೂಕು ತೋರಿಸಿ ಬೆದರಿಕೆ ಹಾಕಿದ್ದಾರೆ. ಇದೇ ವೇಳೆ ಶಾಖೆಯ ವ್ಯವಸ್ಥಾಪಕರು ಸೇರಿದಂತೆ ಹಲವರನ್ನು ಕಟ್ಟಿ ಹಾಕಿ 30 ಕೆ.ಜಿ ಚಿನ್ನಾಭರಣ ಮತ್ತು ₹4 ಲಕ್ಷ ಹಣವನ್ನು ದೋಚಿ ಪರಾರಿಯಾಗಿದ್ದಾರೆ' ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.ತಮಿಳುನಾಡು ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ: ಆರು ಕಾರ್ಮಿಕರ ಸಾವು.ಧ್ವನಿವರ್ಧಕದಲ್ಲಿ ಮಾಹಿತಿ: ಅಂಗವಿಕಲರ ಒಳಗೊಳ್ಳುವಿಕೆಯತ್ತ ಮಹತ್ವದ ಹೆಜ್ಜೆ. <p>ಈ ಸಂಬಂಧ ಶಾಖೆಯ ಅಧಿಕಾರಿಗಳು ನೀಡಿದ ದೂರನ್ನು ಆಧರಿಸಿ ಭಾರತೀಯ ನ್ಯಾಯಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.</p><p>ಘಟನೆ ನಡೆದ ಸ್ಥಳ ಮತ್ತು ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮರಾಗಳನ್ನು ಪರಿಶೀಲಿಸುತ್ತಿದ್ದು, ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಆರಂಭಿಸಲಾಗಿದೆ. ಕಂಪನಿಯ ಉದ್ಯೋಗಿಗಳನ್ನೂ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. </p><p>‘ಯಾವುದೇ ಸಿಬ್ಬಂದಿ ಅಥವಾ ಗ್ರಾಹಕರು ಗಾಯಗೊಂಡಿಲ್ಲ. ಕಂಪನಿಯ ಗ್ರಾಹಕರು ಆತಂಕ ಪಡುವ ಅಗತ್ಯತೆ ಇಲ್ಲ. ಕಂಪನಿಯು ನಿಮ್ಮ ಸ್ವತ್ತುಗಳಿಗೆ ಜವಾಬ್ದಾರಿಯಾಗಿದ್ದು, ನಷ್ಟವನ್ನು ತುಂಬಿಕೊಡಲಿದೆ ಎಂದು ಮಣಪ್ಪುರಂ ಫೈನಾನ್ಸ್ ಪ್ರಕಟಣೆಯಲ್ಲಿ ತಿಳಿಸಿದೆ.</p>.ಮಣಿಪುರ | ಎಸ್ಪಿ ಕಚೇರಿ ಮೇಲೆ ದಾಳಿ: ಬಿಗುವಿನ ವಾತಾವರಣ, ಭದ್ರತೆ ಹೆಚ್ಚಳ.VIDEO | ಬಂಡಿಪುರ–ಬಿಳಿಗಿರಿ–ಮಲೆ ಮಹದೇಶ್ವರ ಕಾಡನ್ನು ನುಂಗುತ್ತಿರುವ ಲಂಟಾನಾ! .ಲೈಂಗಿಕ ದೌರ್ಜನ್ಯ: ಆರೋಗ್ಯ ಇಲಾಖೆ ಅಧೀಕ್ಷಕ ಬಂಧನ.ಚುನಾವಣಾ ತಕರಾರು ಅರ್ಜಿ: ರಾಜೇಗೌಡ ಅರ್ಜಿ ಪರಿಗಣನೆಗೆ ಸುಪ್ರೀಂ ಕೋರ್ಟ್ ನಕಾರ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂಬಲ್ಪುರ</strong>: ಒಡಿಶಾದ ಸಂಬಲ್ಪುರ ನಗರದ ಮಣಪ್ಪುರಂ ಫೈನಾನ್ಸ್ ಶಾಖೆಯೊಂದರಲ್ಲಿ ದರೋಡೆಕೋರರು ಬರೋಬ್ಬರಿ 30 ಕೆ.ಜಿ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.</p><p>ನಗರದ ಮಣಪ್ಪುರಂ ಫೈನಾನ್ಸ್ ಶಾಖೆಯಲ್ಲಿ ಈ ಘಟನೆ ನಡೆದಿದೆ.</p><p>'ಸುಮಾರು ಹತ್ತು ಮಂದಿ ದರೋಡೆಕೋರರು ಹೆಲ್ಮೆಟ್ ಮತ್ತು ಮುಖವಾಡಗಳನ್ನು ಧರಿಸಿ ಏಕಾಏಕಿ ಶಾಖೆಗೆ ನುಗ್ಗಿ ಸಿಬ್ಬಂದಿಗೆ ಬಂದೂಕು ತೋರಿಸಿ ಬೆದರಿಕೆ ಹಾಕಿದ್ದಾರೆ. ಇದೇ ವೇಳೆ ಶಾಖೆಯ ವ್ಯವಸ್ಥಾಪಕರು ಸೇರಿದಂತೆ ಹಲವರನ್ನು ಕಟ್ಟಿ ಹಾಕಿ 30 ಕೆ.ಜಿ ಚಿನ್ನಾಭರಣ ಮತ್ತು ₹4 ಲಕ್ಷ ಹಣವನ್ನು ದೋಚಿ ಪರಾರಿಯಾಗಿದ್ದಾರೆ' ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.ತಮಿಳುನಾಡು ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ: ಆರು ಕಾರ್ಮಿಕರ ಸಾವು.ಧ್ವನಿವರ್ಧಕದಲ್ಲಿ ಮಾಹಿತಿ: ಅಂಗವಿಕಲರ ಒಳಗೊಳ್ಳುವಿಕೆಯತ್ತ ಮಹತ್ವದ ಹೆಜ್ಜೆ. <p>ಈ ಸಂಬಂಧ ಶಾಖೆಯ ಅಧಿಕಾರಿಗಳು ನೀಡಿದ ದೂರನ್ನು ಆಧರಿಸಿ ಭಾರತೀಯ ನ್ಯಾಯಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.</p><p>ಘಟನೆ ನಡೆದ ಸ್ಥಳ ಮತ್ತು ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮರಾಗಳನ್ನು ಪರಿಶೀಲಿಸುತ್ತಿದ್ದು, ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಆರಂಭಿಸಲಾಗಿದೆ. ಕಂಪನಿಯ ಉದ್ಯೋಗಿಗಳನ್ನೂ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. </p><p>‘ಯಾವುದೇ ಸಿಬ್ಬಂದಿ ಅಥವಾ ಗ್ರಾಹಕರು ಗಾಯಗೊಂಡಿಲ್ಲ. ಕಂಪನಿಯ ಗ್ರಾಹಕರು ಆತಂಕ ಪಡುವ ಅಗತ್ಯತೆ ಇಲ್ಲ. ಕಂಪನಿಯು ನಿಮ್ಮ ಸ್ವತ್ತುಗಳಿಗೆ ಜವಾಬ್ದಾರಿಯಾಗಿದ್ದು, ನಷ್ಟವನ್ನು ತುಂಬಿಕೊಡಲಿದೆ ಎಂದು ಮಣಪ್ಪುರಂ ಫೈನಾನ್ಸ್ ಪ್ರಕಟಣೆಯಲ್ಲಿ ತಿಳಿಸಿದೆ.</p>.ಮಣಿಪುರ | ಎಸ್ಪಿ ಕಚೇರಿ ಮೇಲೆ ದಾಳಿ: ಬಿಗುವಿನ ವಾತಾವರಣ, ಭದ್ರತೆ ಹೆಚ್ಚಳ.VIDEO | ಬಂಡಿಪುರ–ಬಿಳಿಗಿರಿ–ಮಲೆ ಮಹದೇಶ್ವರ ಕಾಡನ್ನು ನುಂಗುತ್ತಿರುವ ಲಂಟಾನಾ! .ಲೈಂಗಿಕ ದೌರ್ಜನ್ಯ: ಆರೋಗ್ಯ ಇಲಾಖೆ ಅಧೀಕ್ಷಕ ಬಂಧನ.ಚುನಾವಣಾ ತಕರಾರು ಅರ್ಜಿ: ರಾಜೇಗೌಡ ಅರ್ಜಿ ಪರಿಗಣನೆಗೆ ಸುಪ್ರೀಂ ಕೋರ್ಟ್ ನಕಾರ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>