<figcaption>""</figcaption>.<p><strong>ನವದೆಹಲಿ:</strong>ಕೋವಿಡ್–19 ವಿರುದ್ಧದ ಹೋರಾಟಕ್ಕೆ ನಿಧಿ ಸಂಗ್ರಹಿಸುವ ಉದ್ದೇಶದಿಂದ ರಾಷ್ಟ್ರಪತಿ, ಪ್ರಧಾನಿ, ಉಪರಾಷ್ಟ್ರಪತಿ, ಎಲ್ಲಾ ರಾಜ್ಯಪಾಲರು ಮತ್ತು ಎಲ್ಲಾ ಸಂಸದರ ವೇತನದಲ್ಲಿ ಶೇ 30ರಷ್ಟು ಕಡಿತವಾಗಲಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.</p>.<p>ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಸೋಮವಾರ ವಿಡಿಯೊ ಸಂವಾದದ ಮೂಲಕ ನಡೆದ ಸಂಪುಟ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಇದಕ್ಕಾಗಿ ‘ಸಂಸತ್ ಸದಸ್ಯರ ವೇತನ, ಭತ್ಯೆಗಳು ಮತ್ತು ಪಿಂಚಣಿ ಕಾಯ್ದೆ–1954ಕ್ಕೆ’ ತಿದ್ದುಪಡಿ ತರುವ ಸುಗ್ರೀವಾಜ್ಞೆಯನ್ನು ಜಾರಿಗೆ ತರಲಾಗಿದೆ.2020ರ ಏಪ್ರಿಲ್ 1ರಿಂದ ಇದು ಅನ್ವಯವಾಗಲಿದೆ.</p>.<p>ಕೋವಿಡ್–19 ವಿರುದ್ಧದ ಹೋರಾಟಕ್ಕೆ ದೊಡ್ಡ ಮೊತ್ತದ ಹಣ ಅಗತ್ಯವಿದೆ. ಇದಕ್ಕಾಗಿ ಸಂಸತ್ ಸದಸ್ಯರ ವೇತನದಲ್ಲಿ ಕಡಿತ ಮಾಡಲಾಗುತ್ತಿದೆ. ಇದರಿಂದ ನಿಧಿ ಸಂಗ್ರಹಕ್ಕೆ ಅನುಕೂಲವಾಗಲಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಮಾಹಿತಿ ನೀಡಿದ್ದಾರೆ.</p>.<p>* 2020ರ ಏಪ್ರಿಲ್ 1ರಿಂದ ಒಂದು ವರ್ಷದವರೆಗೆ ವೇತನ ಕಡಿತ ಜಾರಿಯಲ್ಲಿ ಇರಲಿದೆ</p>.<p>* ಸಂಸದರ ಭತ್ಯೆಗಳು ಮತ್ತು ಪಿಂಚಣಿಯಲ್ಲಿ ಯಾವುದೇ ಕಡಿತ ಇರುವುದಿಲ್ಲ</p>.<p>* ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರ ವಾರ್ಷಿಕ ‘ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ’ಯನ್ನು (ಎಂಪಿಎಲ್ಎಡಿಎಸ್) ಎರಡು ಆರ್ಥಿಕ ವರ್ಷಗಳಮಟ್ಟಿಗೆ ಸ್ಥಗಿತಗೊಳಿಸಲಾಗುತ್ತಿದೆ</p>.<p>* ಎಂಪಿಎಲ್ಎಡಿ ನಿಧಿಯನ್ನು 2020–21 ಮತ್ತು 2021–22ನೇ ಸಾಲಿನ ಆರ್ಥಿಕ ಅವಧಿಯಲ್ಲಿ ನೀಡಲಾಗುವುದಿಲ್ಲ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<p><strong>ನವದೆಹಲಿ:</strong>ಕೋವಿಡ್–19 ವಿರುದ್ಧದ ಹೋರಾಟಕ್ಕೆ ನಿಧಿ ಸಂಗ್ರಹಿಸುವ ಉದ್ದೇಶದಿಂದ ರಾಷ್ಟ್ರಪತಿ, ಪ್ರಧಾನಿ, ಉಪರಾಷ್ಟ್ರಪತಿ, ಎಲ್ಲಾ ರಾಜ್ಯಪಾಲರು ಮತ್ತು ಎಲ್ಲಾ ಸಂಸದರ ವೇತನದಲ್ಲಿ ಶೇ 30ರಷ್ಟು ಕಡಿತವಾಗಲಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.</p>.<p>ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಸೋಮವಾರ ವಿಡಿಯೊ ಸಂವಾದದ ಮೂಲಕ ನಡೆದ ಸಂಪುಟ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಇದಕ್ಕಾಗಿ ‘ಸಂಸತ್ ಸದಸ್ಯರ ವೇತನ, ಭತ್ಯೆಗಳು ಮತ್ತು ಪಿಂಚಣಿ ಕಾಯ್ದೆ–1954ಕ್ಕೆ’ ತಿದ್ದುಪಡಿ ತರುವ ಸುಗ್ರೀವಾಜ್ಞೆಯನ್ನು ಜಾರಿಗೆ ತರಲಾಗಿದೆ.2020ರ ಏಪ್ರಿಲ್ 1ರಿಂದ ಇದು ಅನ್ವಯವಾಗಲಿದೆ.</p>.<p>ಕೋವಿಡ್–19 ವಿರುದ್ಧದ ಹೋರಾಟಕ್ಕೆ ದೊಡ್ಡ ಮೊತ್ತದ ಹಣ ಅಗತ್ಯವಿದೆ. ಇದಕ್ಕಾಗಿ ಸಂಸತ್ ಸದಸ್ಯರ ವೇತನದಲ್ಲಿ ಕಡಿತ ಮಾಡಲಾಗುತ್ತಿದೆ. ಇದರಿಂದ ನಿಧಿ ಸಂಗ್ರಹಕ್ಕೆ ಅನುಕೂಲವಾಗಲಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಮಾಹಿತಿ ನೀಡಿದ್ದಾರೆ.</p>.<p>* 2020ರ ಏಪ್ರಿಲ್ 1ರಿಂದ ಒಂದು ವರ್ಷದವರೆಗೆ ವೇತನ ಕಡಿತ ಜಾರಿಯಲ್ಲಿ ಇರಲಿದೆ</p>.<p>* ಸಂಸದರ ಭತ್ಯೆಗಳು ಮತ್ತು ಪಿಂಚಣಿಯಲ್ಲಿ ಯಾವುದೇ ಕಡಿತ ಇರುವುದಿಲ್ಲ</p>.<p>* ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರ ವಾರ್ಷಿಕ ‘ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ’ಯನ್ನು (ಎಂಪಿಎಲ್ಎಡಿಎಸ್) ಎರಡು ಆರ್ಥಿಕ ವರ್ಷಗಳಮಟ್ಟಿಗೆ ಸ್ಥಗಿತಗೊಳಿಸಲಾಗುತ್ತಿದೆ</p>.<p>* ಎಂಪಿಎಲ್ಎಡಿ ನಿಧಿಯನ್ನು 2020–21 ಮತ್ತು 2021–22ನೇ ಸಾಲಿನ ಆರ್ಥಿಕ ಅವಧಿಯಲ್ಲಿ ನೀಡಲಾಗುವುದಿಲ್ಲ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>