ಚೆನ್ನೈನ ಪ್ರಾದೇಶಿಕ ಹವಾಮಾನ ಕೇಂದ್ರ ಮೂರು ಡಾಪ್ಲರ್ಗಳು ಸೇರಿದಂತೆ ಅತ್ಯಾಧುನಿಕ ಸಾಧನಗಳನ್ನು ಹೊಂದಿದೆ. ಡಿಸೆಂಬರ್ 17ರಂದು ರಾಜ್ಯದ ನಾಲ್ಕು ಜಿಲ್ಲೆಗಳಾದ ತೆಂಕಾಶಿ, ಕನ್ಯಾಕುಮಾರಿ, ತಿರುನಲ್ವೇಲಿ ಹಾಗೂ ತೂತುಕುಡಿಯಲ್ಲಿ ಭಾರೀ ಮಳೆಯಾಗಲಿದೆ ಎಂದು ಡಿಸೆಂಬರ್ 12 ರಂದು ಮುನ್ಸೂಚನೆ ನೀಡಿತ್ತು ಎಂದು ಸೀತಾರಾಮನ್ ಹೇಳಿದರು.
ಇತ್ತ ತಮಿಳುನಾಡಿನಲ್ಲಿ ಭಾರಿ ಮಳೆ ಅನಾಹುತ ಸಂಭವಿಸಿದಾಗ, ಮುಖ್ಯಮಂತ್ರಿ ಎಂ. ಕೆ ಸ್ಟಾಲಿನ್ ದೆಹಲಿಯಲ್ಲಿ ಇಂಡಿಯಾ ಮೈತ್ರಿಕೂಟದಲ್ಲಿದ್ದರು ಎಂದು ಟೀಕಿಸಿದ್ದಾರೆ.