ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಛತ್ತೀಸಗಢ: 35 ನಕ್ಸಲರ ಶರಣಾಗತಿ

Published 5 ಮೇ 2024, 14:07 IST
Last Updated 5 ಮೇ 2024, 14:07 IST
ಅಕ್ಷರ ಗಾತ್ರ

ದಾಂತೇವಾಡ: ಛತ್ತೀಸಗಢದ ದಾಂತೇವಾಡ ಜಿಲ್ಲೆಯಲ್ಲಿ ಭಾನುವಾರ ಒಟ್ಟು 35 ನಕ್ಸಲರು ಶರಣಾಗಿದ್ದಾರೆ. ಶರಣಾದ ನಕ್ಸಲರ ಪೈಕಿ ಮೂವರ ಪತ್ತೆಗೆ ಸುಳಿವು ನೀಡಿದವರಿಗೆ ತಲಾ ₹3 ಲಕ್ಷ ಹಾಗೂ ಮಹಿಳೆಯೊಬ್ಬರ ಬಗ್ಗೆ ಸುಳಿವು ನೀಡಿದವರಿಗೆ ₹1 ಲಕ್ಷ ಬಹುಮಾನ ಘೋಷಿಸಲಾಗಿತ್ತು ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. 

ಶರಣಾದವರಲ್ಲಿ 16 ವರ್ಷದ ಬಾಲಕಿ ಮತ್ತು 18 ವರ್ಷದ ಬಾಲಕನೂ ಸೇರಿದ್ದಾನೆ. ಶರಣಾದ ನಕ್ಸಲರಿಗೆ ಸರ್ಕಾರದ ಶರಣಾಗತಿ ಮತ್ತು ಪುನರ್‌ ವಸತಿ ನೀತಿಯ ಪ್ರಕಾರ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ತಿಳಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT