ಅಯೋಧ್ಯೆಗೆ ರವಾನಿಸುವ ಮೊದಲು ಜಟಾಯು ಪ್ರತಿಮೆಯ ಬೇರೆ ಬೇರೆ ಭಾಗಗಳನ್ನು ಜೋಡಿಸಿ, ಬೆಸುಗೆ ಹಾಕಲಾಯಿತು ಎಂದು ಅನಿಲ್ ತಿಳಿಸಿದರು. ಪ್ರಾಣಪ್ರತಿಷ್ಠಾಪನೆ ಕಾರ್ಯದಲ್ಲಿ ಪಾಲ್ಗೊಂಡ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಕುಬೇರ ಟೀಲಾಕ್ಕೆ ಭೇಟಿ ನೀಡಿ, ಶಿವನಿಗೆ ಅಲ್ಲಿ ಪ್ರಾರ್ಥನೆ ಸಲ್ಲಿಸಿದ್ದರು. ಜಟಾಯುವಿನ ಕರ್ತವ್ಯ ಪ್ರಜ್ಞೆಯು ಸಮರ್ಥ ಹಾಗೂ ದಿವ್ಯ ಭಾರತಕ್ಕೆ ಅಡಿಗಲ್ಲು ಇದ್ದಂತೆ ಎಂದು ಹೇಳಿದ್ದರು.