‘ವಿಷಯ ತಿಳಿದೊಡನೆ, ವಾಪಸ್ ಕರೆಸಿಕೊಳ್ಳಲು ಅವಶ್ಯವಿರುವ ಕ್ರಮ ಕೈಗೊಳ್ಳಿ ಎಂದು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕಾರ್ಮಿಕ ಇಲಾಖೆಯ ಆಯುಕ್ತರು ಲಾವೋಸ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಡನೆ ಸಂವಹನ ನಡೆಸಿದ್ದು, ಕಾರ್ಮಿಕರನ್ನು ಭಾರತಕ್ಕೆ ಮರಳಿ ಕಳಿಸಿಕೊಡಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ರಾಯಭಾರ ಕಚೇರಿ ತಿಳಿಸಿದೆ’ ಎಂದು ಮುಖ್ಯಮಂತ್ರಿ ಕಚೇರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.