<p><strong>ನವದೆಹಲಿ</strong>: ‘ನೂತನ ಕ್ರಿಮಿನಲ್ ಕಾನೂನುಗಳು ಪ್ರಜಾಪ್ರಭುತ್ವ ವಿರೋಧಿಯಾಗಿವೆ. ಕೂಡಲೇ ಮಧ್ಯಪ್ರವೇಶಿಸಿ, ಅವುಗಳ ಅನುಷ್ಠಾನ ತಡೆಯಬೇಕು’ ಒಂದು 3,895 ನಾಗರಿಕರು ‘ಇಂಡಿಯಾ’ ಒಕ್ಕೂಟ ಹಾಗೂ ಎನ್ಡಿಎ ಅಂಗಪಕ್ಷಗಳ ಮುಖಂಡನ್ನು ಒತ್ತಾಯಿಸಿದ್ದಾರೆ.</p>.<p>ಈ ಬೇಡಿಕೆಯುಳ್ಳ ಮನವಿ ಪತ್ರವನ್ನು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಹಾಗೂ ಆರ್ಎಲ್ಡಿ ಮುಖ್ಯಸ್ಥ ಜಯಂತ ಚೌಧರಿ ಅವರಿಗೆ ಬರೆಯಲಾಗಿದ್ದು, ಅದರ ಪ್ರತಿಗಳನ್ನು ವಿವಿಧ ಪಕ್ಷಗಳಿಗೆ ಕಳುಹಿಸಲಾಗಿದೆ.</p>.<p>ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ, ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಸೇರಿದಂತೆ ಹಲವು ಪಕ್ಷಗಳ ಮುಖಂಡರಿಗೂ ಈ ಪತ್ರವನ್ನು ಕಳುಹಿಸಲಾಗಿದೆ.</p>.<p>ತುಷಾರ್ ಗಾಂಧಿ, ತನಿಕಾ ಸರ್ಕಾರ್, ಹೆನ್ರಿ ಟಿಫಾಗ್ನೆ, ಮೇಜರ್ ಜನರಲ್ (ನಿವೃತ್ತ) ಸುಧೀರ್ ವೊಂಬತ್ಕೆರೆ, ತೀಸ್ತಾ ಸೆಟಲ್ವಾಡ್, ಕವಿತಾ ಶ್ರೀವಾಸ್ತವ ಹಾಗೂ ಶಬನಮ್ ಹಷ್ಮಿ ಈ ಪತ್ರಕ್ಕೆ ಸಹಿ ಹಾಕಿರುವ ಪ್ರಮುಖರು.</p>.<p>ಈ ಹೊಸ ಕ್ರಿಮಿನಲ್ ಕಾನೂನುಗಳ ಕುರಿತು ಸಂಸತ್ನಲ್ಲಿ ವಿಸ್ತೃತ ಚರ್ಚೆ ನಡೆಯಬೇಕು. ಈ ಕುರಿತು ಜಂಟಿ ಸಂಸದೀಯ ಸಮಿತಿಯಿಂದ ತನಿಖೆ ಹಾಗೂ ಕಾನೂನು ತಜ್ಞರೊಂದಿಗೆ ವ್ಯಾಪಕ ಸಮಾಲೋಚನೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.</p>.<p>ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ, 2023, ಭಾರತೀಯ ನ್ಯಾಯ ಸಂಹಿತಾ, 2023 ಹಾಗೂ ಭಾರತೀಯ ಸಾಕ್ಷ್ಯ ಅಧಿನಿಯಮ, 2023 ಕುರಿತು ಈ ಪ್ರಮುಖರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ನೂತನ ಕಾನೂನುಗಳು ಜುಲೈ 1ರಿಂದ ಜಾರಿಗೆ ಬರಲಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ನೂತನ ಕ್ರಿಮಿನಲ್ ಕಾನೂನುಗಳು ಪ್ರಜಾಪ್ರಭುತ್ವ ವಿರೋಧಿಯಾಗಿವೆ. ಕೂಡಲೇ ಮಧ್ಯಪ್ರವೇಶಿಸಿ, ಅವುಗಳ ಅನುಷ್ಠಾನ ತಡೆಯಬೇಕು’ ಒಂದು 3,895 ನಾಗರಿಕರು ‘ಇಂಡಿಯಾ’ ಒಕ್ಕೂಟ ಹಾಗೂ ಎನ್ಡಿಎ ಅಂಗಪಕ್ಷಗಳ ಮುಖಂಡನ್ನು ಒತ್ತಾಯಿಸಿದ್ದಾರೆ.</p>.<p>ಈ ಬೇಡಿಕೆಯುಳ್ಳ ಮನವಿ ಪತ್ರವನ್ನು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಹಾಗೂ ಆರ್ಎಲ್ಡಿ ಮುಖ್ಯಸ್ಥ ಜಯಂತ ಚೌಧರಿ ಅವರಿಗೆ ಬರೆಯಲಾಗಿದ್ದು, ಅದರ ಪ್ರತಿಗಳನ್ನು ವಿವಿಧ ಪಕ್ಷಗಳಿಗೆ ಕಳುಹಿಸಲಾಗಿದೆ.</p>.<p>ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ, ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಸೇರಿದಂತೆ ಹಲವು ಪಕ್ಷಗಳ ಮುಖಂಡರಿಗೂ ಈ ಪತ್ರವನ್ನು ಕಳುಹಿಸಲಾಗಿದೆ.</p>.<p>ತುಷಾರ್ ಗಾಂಧಿ, ತನಿಕಾ ಸರ್ಕಾರ್, ಹೆನ್ರಿ ಟಿಫಾಗ್ನೆ, ಮೇಜರ್ ಜನರಲ್ (ನಿವೃತ್ತ) ಸುಧೀರ್ ವೊಂಬತ್ಕೆರೆ, ತೀಸ್ತಾ ಸೆಟಲ್ವಾಡ್, ಕವಿತಾ ಶ್ರೀವಾಸ್ತವ ಹಾಗೂ ಶಬನಮ್ ಹಷ್ಮಿ ಈ ಪತ್ರಕ್ಕೆ ಸಹಿ ಹಾಕಿರುವ ಪ್ರಮುಖರು.</p>.<p>ಈ ಹೊಸ ಕ್ರಿಮಿನಲ್ ಕಾನೂನುಗಳ ಕುರಿತು ಸಂಸತ್ನಲ್ಲಿ ವಿಸ್ತೃತ ಚರ್ಚೆ ನಡೆಯಬೇಕು. ಈ ಕುರಿತು ಜಂಟಿ ಸಂಸದೀಯ ಸಮಿತಿಯಿಂದ ತನಿಖೆ ಹಾಗೂ ಕಾನೂನು ತಜ್ಞರೊಂದಿಗೆ ವ್ಯಾಪಕ ಸಮಾಲೋಚನೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.</p>.<p>ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ, 2023, ಭಾರತೀಯ ನ್ಯಾಯ ಸಂಹಿತಾ, 2023 ಹಾಗೂ ಭಾರತೀಯ ಸಾಕ್ಷ್ಯ ಅಧಿನಿಯಮ, 2023 ಕುರಿತು ಈ ಪ್ರಮುಖರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ನೂತನ ಕಾನೂನುಗಳು ಜುಲೈ 1ರಿಂದ ಜಾರಿಗೆ ಬರಲಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>