<p><strong>ಲಖನೌ:</strong> ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ 37 ಬಿಜೆಪಿ ಕಾರ್ಯಕರ್ತರ ಹತ್ಯೆಯಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ದಿಲೀಪ್ ಘೋಷ್ ಹೇಳಿದ್ದಾರೆ.</p>.<p>ಬಂಗಾಳದಲ್ಲಿ ಚುನಾವಣೆ ಫಲಿತಾಂಶದ ನಂತರದ ಸ್ಥಿತಿಗತಿ ಕುರಿತು ಪರಾಮರ್ಶೆ ನಡೆಸಲು ಉತ್ತರ ಪ್ರದೇಶ ಬಿಜೆಪಿ ಘಟಕದ ಜತೆ ಆಯೋಜಿಸಲಾಗಿದ್ದ ವರ್ಚುವಲ್ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಹಿಂಸಾಚಾರಕ್ಕೆ ಕುಮ್ಮಕ್ಕು ನೀಡುತ್ತಿದೆ ಎಂದು ಆರೋಪಿಸಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/west-bengal-another-notice-tmc-bjp-politics-narendra-modi-mamata-banerjee-835342.html" itemprop="url">ಪಶ್ಚಿಮ ಬಂಗಾಳ: ಆಲಾಪನ್ಗೆ ಮತ್ತೊಂದು ನೋಟಿಸ್</a></p>.<p>ವರ್ಚುವಲ್ ಸಭೆಯಲ್ಲಿ ಪಕ್ಷದ ರಾಜ್ಯ ಘಟಕದ ಉಸ್ತುವಾರಿ ರಾಧಾಮೋಹನ್ ಸಿಂಗ್, ಬಿಜೆಪಿಯ ಉತ್ತರ ಪ್ರದೇಶ ಘಟಕದ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಮತ್ತು ಪ್ರಧಾನ ಕಾರ್ಯದರ್ಶಿ ಸುನಿಲ್ ಬನ್ಸಾಲ್ ಭಾಗವಹಿಸಿದ್ದರು ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.</p>.<p>ಪಕ್ಷದ ಉತ್ತರ ಪ್ರದೇಶ ಘಟಕದ ಕಾರ್ಯಕರ್ತರು ಮತ್ತು ಪದಾಧಿಕಾರಿಗಳಿಗೆ ಘೋಷ್ ಕೃತಜ್ಞತೆ ಸಲ್ಲಿಸಿದ್ದು, ಇವರ ಶ್ರಮದಿಂದಾಗಿ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಪಕ್ಷವು 77 ಸ್ಥಾನಗಳನ್ನು ಗೆಲ್ಲುವಂತಾಗಿದೆ ಎಂದು ಹೇಳಿದ್ದಾರೆ.</p>.<p>ಕ್ರಾಂತಿಕಾರಿಗಳು, ಆಧ್ಯಾತ್ಮಿಕ ಮುಖಂಡರು, ಸಮಾಜ ಸುಧಾರಕರಿಂದ ಗುರುತಿಸಲ್ಪಟ್ಟಿರುವ ಪಶ್ಚಿಮ ಬಂಗಾಳವು ಇಂದು ದುರದೃಷ್ಟವಶಾತ್ ರಕ್ತಪಾತವನ್ನು ಎದುರಿಸುತ್ತಿದೆ ಎಂದು ಘೋಷ್ ಹೇಳಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/home-ministry-notice-to-alapan-bandyopadhyay-under-disaster-management-act-835187.html" itemprop="url">ವಿಪತ್ತು ನಿರ್ವಹಣಾ ಕಾಯ್ದೆಯಡಿ ಆಲಾಪನ್ ಬಂದೋಪಾಧ್ಯಾಯಗೆ ಗೃಹ ಸಚಿವಾಲಯ ನೋಟಿಸ್</a></p>.<p>ಪಕ್ಷದ ಕೆಲಸಗಳಿಗಾಗಿ ಮನೆಯಿಂದ ತೆರಳುವ ಬಿಜೆಪಿ ಕಾರ್ಯಕರ್ತರಿಗೆ ತಾವು ಮನೆಗೆ ವಾಪಸಾಗುತ್ತೇವೆ ಎಂಬ ನಂಬಿಕೆ ಇರುವುದಿಲ್ಲ. ರಾಜ್ಯದಲ್ಲಿ ಅಂತಹ ಪರಿಸ್ಥಿತಿ ಇದೆ. ಕಳೆದ 5 ವರ್ಷಗಳಲ್ಲಿ 166 ಬಿಜೆಪಿ ಕಾರ್ಯಕರ್ತರ ಹತ್ಯೆಯಾಗಿದೆ ಎಂದು ಅವರು ತಿಳಿಸಿದ್ದಾರೆ.</p>.<p>ಐದು ವರ್ಷಗಳಲ್ಲಿ ನಮ್ಮ ಕಾರ್ಯಕರ್ತರ ಮೇಲೆ 30,000ದಷ್ಟು ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದೂ ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ 37 ಬಿಜೆಪಿ ಕಾರ್ಯಕರ್ತರ ಹತ್ಯೆಯಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ದಿಲೀಪ್ ಘೋಷ್ ಹೇಳಿದ್ದಾರೆ.</p>.<p>ಬಂಗಾಳದಲ್ಲಿ ಚುನಾವಣೆ ಫಲಿತಾಂಶದ ನಂತರದ ಸ್ಥಿತಿಗತಿ ಕುರಿತು ಪರಾಮರ್ಶೆ ನಡೆಸಲು ಉತ್ತರ ಪ್ರದೇಶ ಬಿಜೆಪಿ ಘಟಕದ ಜತೆ ಆಯೋಜಿಸಲಾಗಿದ್ದ ವರ್ಚುವಲ್ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಹಿಂಸಾಚಾರಕ್ಕೆ ಕುಮ್ಮಕ್ಕು ನೀಡುತ್ತಿದೆ ಎಂದು ಆರೋಪಿಸಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/west-bengal-another-notice-tmc-bjp-politics-narendra-modi-mamata-banerjee-835342.html" itemprop="url">ಪಶ್ಚಿಮ ಬಂಗಾಳ: ಆಲಾಪನ್ಗೆ ಮತ್ತೊಂದು ನೋಟಿಸ್</a></p>.<p>ವರ್ಚುವಲ್ ಸಭೆಯಲ್ಲಿ ಪಕ್ಷದ ರಾಜ್ಯ ಘಟಕದ ಉಸ್ತುವಾರಿ ರಾಧಾಮೋಹನ್ ಸಿಂಗ್, ಬಿಜೆಪಿಯ ಉತ್ತರ ಪ್ರದೇಶ ಘಟಕದ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಮತ್ತು ಪ್ರಧಾನ ಕಾರ್ಯದರ್ಶಿ ಸುನಿಲ್ ಬನ್ಸಾಲ್ ಭಾಗವಹಿಸಿದ್ದರು ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.</p>.<p>ಪಕ್ಷದ ಉತ್ತರ ಪ್ರದೇಶ ಘಟಕದ ಕಾರ್ಯಕರ್ತರು ಮತ್ತು ಪದಾಧಿಕಾರಿಗಳಿಗೆ ಘೋಷ್ ಕೃತಜ್ಞತೆ ಸಲ್ಲಿಸಿದ್ದು, ಇವರ ಶ್ರಮದಿಂದಾಗಿ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಪಕ್ಷವು 77 ಸ್ಥಾನಗಳನ್ನು ಗೆಲ್ಲುವಂತಾಗಿದೆ ಎಂದು ಹೇಳಿದ್ದಾರೆ.</p>.<p>ಕ್ರಾಂತಿಕಾರಿಗಳು, ಆಧ್ಯಾತ್ಮಿಕ ಮುಖಂಡರು, ಸಮಾಜ ಸುಧಾರಕರಿಂದ ಗುರುತಿಸಲ್ಪಟ್ಟಿರುವ ಪಶ್ಚಿಮ ಬಂಗಾಳವು ಇಂದು ದುರದೃಷ್ಟವಶಾತ್ ರಕ್ತಪಾತವನ್ನು ಎದುರಿಸುತ್ತಿದೆ ಎಂದು ಘೋಷ್ ಹೇಳಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/home-ministry-notice-to-alapan-bandyopadhyay-under-disaster-management-act-835187.html" itemprop="url">ವಿಪತ್ತು ನಿರ್ವಹಣಾ ಕಾಯ್ದೆಯಡಿ ಆಲಾಪನ್ ಬಂದೋಪಾಧ್ಯಾಯಗೆ ಗೃಹ ಸಚಿವಾಲಯ ನೋಟಿಸ್</a></p>.<p>ಪಕ್ಷದ ಕೆಲಸಗಳಿಗಾಗಿ ಮನೆಯಿಂದ ತೆರಳುವ ಬಿಜೆಪಿ ಕಾರ್ಯಕರ್ತರಿಗೆ ತಾವು ಮನೆಗೆ ವಾಪಸಾಗುತ್ತೇವೆ ಎಂಬ ನಂಬಿಕೆ ಇರುವುದಿಲ್ಲ. ರಾಜ್ಯದಲ್ಲಿ ಅಂತಹ ಪರಿಸ್ಥಿತಿ ಇದೆ. ಕಳೆದ 5 ವರ್ಷಗಳಲ್ಲಿ 166 ಬಿಜೆಪಿ ಕಾರ್ಯಕರ್ತರ ಹತ್ಯೆಯಾಗಿದೆ ಎಂದು ಅವರು ತಿಳಿಸಿದ್ದಾರೆ.</p>.<p>ಐದು ವರ್ಷಗಳಲ್ಲಿ ನಮ್ಮ ಕಾರ್ಯಕರ್ತರ ಮೇಲೆ 30,000ದಷ್ಟು ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದೂ ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>