<p><strong>ಗುವಾಹಟಿ</strong>: ಅಶಾಂತಿ ಸೃಷ್ಟಿಸುವವರಿಗೆ ಕಂಡಲ್ಲಿ ಗುಂಡಿಕ್ಕುವಂತೆ ಆದೇಶಿಸಿದ್ದ ಧುಬ್ರಿಯಲ್ಲಿ 38 ಜನರನ್ನು ಶುಕ್ರವಾರ ರಾತ್ರಿ ಬಂಧಿಸಲಾಗಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ ಶನಿವಾರ ತಿಳಿಸಿದ್ದಾರೆ.</p>.<p>‘ಬಕ್ರೀದ್ (ಜೂನ್ 7) ಹಬ್ಬದಂದು ಧುಬ್ರಿ ಪಟ್ಟಣದ ಹನುಮಾನ್ ದೇಗುಲದ ಮುಂದೆ ಹಸುವಿನ ರುಂಡ ಪತ್ತೆಯಾಗಿತ್ತು. ಮರುದಿನವೂ ಮತ್ತೆ ಅದೇ ಸ್ಥಳದಲ್ಲಿ ಕಂಡುಬಂದಿತು. ಈ ವಿದ್ಯಮಾನದ ನಂತರ ಕೋಮು ಘರ್ಷಣೆ ನಡೆದಿದೆ’ ಎಂದು ಶುಕ್ರವಾರ ಗಲಭೆ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ್ದ ಮುಖ್ಯಮಂತ್ರಿ ‘ಎಕ್ಸ್’ನಲ್ಲಿ ಪ್ರಕಟಿಸಿದ್ದಾರೆ.</p>.<p>‘ನಬಿನ್ ಬಾಂಗ್ಲಾ’ ಹೆಸರಿನ ಗುಂಪೊಂದು ಬಾಂಗ್ಲಾದೇಶದ ಗಡಿಯಲ್ಲಿರುವ ಜಿಲ್ಲೆಯಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸುತ್ತಿರುವುದು ಗಮನಕ್ಕೆ ಬಂದಿದ್ದು, ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವವರಿಗೆ ಕಂಡಲ್ಲಿ ಗುಂಡಿಕ್ಕುವಂತೆ ಶರ್ಮ ಇದೇ ಸಂದರ್ಭ ಆದೇಶಿಸಿದ್ದರು.</p>.<p>ಧುಬ್ರಿಯನ್ನು ಬಾಂಗ್ಲಾದೇಶದೊಂದಿಗೆ ವಿಲೀನಗೊಳಿಸುವಂತೆ ‘ನಬಿನ್ ಬಾಂಗ್ಲಾ’ ಗುಂಪು ಜಿಲ್ಲೆಯ ವಿವಿಧೆಡೆ ಪೋಸ್ಟರ್ ಅಂಟಿಸಿದೆ ಎಂದು ಹೇಳಿದ್ದರು.</p>.<p class="title">ಜಿಲ್ಲೆಯ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಸಿಂಗ್ ಅವರನ್ನು ವರ್ಗಾಯಿಸಿರುವ ರಾಜ್ಯ ಸರ್ಕಾರವು, ಹೈಲಾಕಾಂಡಿ ಎಸ್ಎಸ್ಪಿ ಲೀನಾ ಡೋಲಿ ಅವರನ್ನು ನೇಮಿಸಿದೆ ಎಂದು ಅಧಿಸೂಚನೆ ತಿಳಿಸಿದೆ.</p>.<p>ಜೂನ್ 9ರಂದು ಜಿಲ್ಲಾಡಳಿತ ನಿಷೇಧಾಜ್ಞೆ ವಿಧಿಸಿತ್ತು. ಪರಿಸ್ಥಿತಿ ನಿಯಂತ್ರಣಕ್ಕೆ ಬಂದ ನಂತರ ವಾಪಸ್ ಪಡೆದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ</strong>: ಅಶಾಂತಿ ಸೃಷ್ಟಿಸುವವರಿಗೆ ಕಂಡಲ್ಲಿ ಗುಂಡಿಕ್ಕುವಂತೆ ಆದೇಶಿಸಿದ್ದ ಧುಬ್ರಿಯಲ್ಲಿ 38 ಜನರನ್ನು ಶುಕ್ರವಾರ ರಾತ್ರಿ ಬಂಧಿಸಲಾಗಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ ಶನಿವಾರ ತಿಳಿಸಿದ್ದಾರೆ.</p>.<p>‘ಬಕ್ರೀದ್ (ಜೂನ್ 7) ಹಬ್ಬದಂದು ಧುಬ್ರಿ ಪಟ್ಟಣದ ಹನುಮಾನ್ ದೇಗುಲದ ಮುಂದೆ ಹಸುವಿನ ರುಂಡ ಪತ್ತೆಯಾಗಿತ್ತು. ಮರುದಿನವೂ ಮತ್ತೆ ಅದೇ ಸ್ಥಳದಲ್ಲಿ ಕಂಡುಬಂದಿತು. ಈ ವಿದ್ಯಮಾನದ ನಂತರ ಕೋಮು ಘರ್ಷಣೆ ನಡೆದಿದೆ’ ಎಂದು ಶುಕ್ರವಾರ ಗಲಭೆ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ್ದ ಮುಖ್ಯಮಂತ್ರಿ ‘ಎಕ್ಸ್’ನಲ್ಲಿ ಪ್ರಕಟಿಸಿದ್ದಾರೆ.</p>.<p>‘ನಬಿನ್ ಬಾಂಗ್ಲಾ’ ಹೆಸರಿನ ಗುಂಪೊಂದು ಬಾಂಗ್ಲಾದೇಶದ ಗಡಿಯಲ್ಲಿರುವ ಜಿಲ್ಲೆಯಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸುತ್ತಿರುವುದು ಗಮನಕ್ಕೆ ಬಂದಿದ್ದು, ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವವರಿಗೆ ಕಂಡಲ್ಲಿ ಗುಂಡಿಕ್ಕುವಂತೆ ಶರ್ಮ ಇದೇ ಸಂದರ್ಭ ಆದೇಶಿಸಿದ್ದರು.</p>.<p>ಧುಬ್ರಿಯನ್ನು ಬಾಂಗ್ಲಾದೇಶದೊಂದಿಗೆ ವಿಲೀನಗೊಳಿಸುವಂತೆ ‘ನಬಿನ್ ಬಾಂಗ್ಲಾ’ ಗುಂಪು ಜಿಲ್ಲೆಯ ವಿವಿಧೆಡೆ ಪೋಸ್ಟರ್ ಅಂಟಿಸಿದೆ ಎಂದು ಹೇಳಿದ್ದರು.</p>.<p class="title">ಜಿಲ್ಲೆಯ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಸಿಂಗ್ ಅವರನ್ನು ವರ್ಗಾಯಿಸಿರುವ ರಾಜ್ಯ ಸರ್ಕಾರವು, ಹೈಲಾಕಾಂಡಿ ಎಸ್ಎಸ್ಪಿ ಲೀನಾ ಡೋಲಿ ಅವರನ್ನು ನೇಮಿಸಿದೆ ಎಂದು ಅಧಿಸೂಚನೆ ತಿಳಿಸಿದೆ.</p>.<p>ಜೂನ್ 9ರಂದು ಜಿಲ್ಲಾಡಳಿತ ನಿಷೇಧಾಜ್ಞೆ ವಿಧಿಸಿತ್ತು. ಪರಿಸ್ಥಿತಿ ನಿಯಂತ್ರಣಕ್ಕೆ ಬಂದ ನಂತರ ವಾಪಸ್ ಪಡೆದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>