ಹೈದರಾಬಾದ್: ಹೋಳಿ ಹಬ್ಬ ಆಚರಿಸಿದ ಬಳಿಕ ಸ್ನಾನ ಮಾಡಲು ನದಿಗೆ ತೆರಳಿದ್ದ ನಾಲ್ವರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಕುಮುರಮ್ ಭೀಮ್ ಆಸಿಫಾಬಾದ್ ಜಿಲ್ಲೆಯ ತಾಟಿಪಲ್ಲಿ ಗ್ರಾಮದ ಯುವಕರು ವಾರ್ಧಾ ನದಿಯಲ್ಲಿ ಸ್ನಾನ ಮಾಡಲು ತೆರಳಿದ್ದ ವೇಳೆ ಸೋಮವಾರ ಈ ಘಟನೆ ನಡೆದಿದೆ.
ಹೋಳಿ ಆಚರಣೆ ನಂತರ ಸ್ನಾನಕ್ಕೆಂದು ನದಿಗೆ ಇಳಿದ ನಾಲ್ವರು ಯುವಕರಲ್ಲಿ ಯಾರಿಗೂ ಈಜು ಬರುತ್ತಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಯುವಕರು 22 ರಿಂದ 25 ವರ್ಷ ವಯಸ್ಸಿನವರು ಎನ್ನಲಾಗಿದೆ.
ಸ್ಥಳೀಯ ಮೀನುಗಾರರು ಹಾಗೂ ಈಜುಗಾರರ ಸಹಾಯದಿಂದ ಪೊಲೀಸರು ಮೃತದೇಹಗಳನ್ನು ನದಿಯಿಂದ ಹೊರತೆಗೆದರು. ಪ್ರಾಥಮಿಕ ತನಿಖೆ ಪ್ರಕಾರ ಯುವಕರೆಲ್ಲರೂ ಮದ್ಯಪಾನ ಮಾಡಿದ್ದರು ಎಂಬುದು ತಿಳಿದು ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.