<p><strong>ಜೈಪುರ:</strong> ರಾಜಸ್ಥಾನದ ಖೈರ್ತಲ್–ತಿಜಾರ ಜಿಲ್ಲೆಯ ಔಷಧ ಕಾರ್ಖಾನೆಯೊಂದರಲ್ಲಿ ಬೆಂಕಿ ಅನಾಹುತ ಸಂಭವಿಸಿ ನಾಲ್ವರು ಮೃತಪಟ್ಟಿದ್ದಾರೆ. 10 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.</p>.ಕೆನ್ಯಾ: ಸಂಸತ್ ಭವನದಲ್ಲಿ ಭಾಗಶಃ ಬೆಂಕಿ.<p>‘ಭೀವಂಡಿ ಪ್ರದೇಶದಲ್ಲಿರುವ ಕಾರ್ಖಾನೆಯಲ್ಲಿ ಮಂಗಳವಾರ ಸಂಜೆ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಓರ್ವ ಸಾವಿಗೀಡಾಗಿ, ಹತ್ತು ಮಂದಿ ಗಾಯಗೊಂಡಿದ್ದರು. ಬೆಂಕಿ ನಂದಿಸಿದ ಬಳಿಕ ಮತ್ತೆ ಮೂರು ಮೃತದೇಹಗಳು ಪತ್ತೆಯಾಗಿವೆ’ ಎಂದು ಪೊಲೀಸ್ ಉಪವರಿಷ್ಠಾಧಿಕಾರಿ ಶಿವರಾಜ್ ಸಿಂಗ್ ಮಾಹಿತಿ ನೀಡಿದ್ದಾರೆ.</p><p>ಎರಡು ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಡಲಾಗಿದ್ದು, ಇನ್ನೆರಡು ದೇಹಗಳನ್ನು ಸ್ಥಳದಿಂದ ಹೊರತೆಗೆಯಬೇಕಷ್ಟೇ ಎಂದು ಅವರು ತಿಳಿಸಿದ್ದಾರೆ.</p>.ಇರಾನ್: ಆಸ್ಪತ್ರೆಗೆ ಬೆಂಕಿ– 9 ರೋಗಿಗಳ ಸಾವು. <p>ಖುಷ್ಕೇಡಾ ಕೈಗಾರಿಕಾ ವಲಯದಲ್ಲಿ ಈ ಕಾರ್ಖಾನೆ ಇದ್ದು, ಔಷಧ ಕಂಪನಿಯೊಂದಕ್ಕೆ ಸೇರಿದ್ದಾಗಿದೆ. ಘಟನೆಗೆ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಗಾಯಗೊಂಡವರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p> .ನ್ಯೂಜಿಲೆಂಡ್ | ಎಂಜಿನ್ನಲ್ಲಿ ಬೆಂಕಿ: ಸುರಕ್ಷಿತವಾಗಿ ಇಳಿದ ವಿಮಾನ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ:</strong> ರಾಜಸ್ಥಾನದ ಖೈರ್ತಲ್–ತಿಜಾರ ಜಿಲ್ಲೆಯ ಔಷಧ ಕಾರ್ಖಾನೆಯೊಂದರಲ್ಲಿ ಬೆಂಕಿ ಅನಾಹುತ ಸಂಭವಿಸಿ ನಾಲ್ವರು ಮೃತಪಟ್ಟಿದ್ದಾರೆ. 10 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.</p>.ಕೆನ್ಯಾ: ಸಂಸತ್ ಭವನದಲ್ಲಿ ಭಾಗಶಃ ಬೆಂಕಿ.<p>‘ಭೀವಂಡಿ ಪ್ರದೇಶದಲ್ಲಿರುವ ಕಾರ್ಖಾನೆಯಲ್ಲಿ ಮಂಗಳವಾರ ಸಂಜೆ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಓರ್ವ ಸಾವಿಗೀಡಾಗಿ, ಹತ್ತು ಮಂದಿ ಗಾಯಗೊಂಡಿದ್ದರು. ಬೆಂಕಿ ನಂದಿಸಿದ ಬಳಿಕ ಮತ್ತೆ ಮೂರು ಮೃತದೇಹಗಳು ಪತ್ತೆಯಾಗಿವೆ’ ಎಂದು ಪೊಲೀಸ್ ಉಪವರಿಷ್ಠಾಧಿಕಾರಿ ಶಿವರಾಜ್ ಸಿಂಗ್ ಮಾಹಿತಿ ನೀಡಿದ್ದಾರೆ.</p><p>ಎರಡು ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಡಲಾಗಿದ್ದು, ಇನ್ನೆರಡು ದೇಹಗಳನ್ನು ಸ್ಥಳದಿಂದ ಹೊರತೆಗೆಯಬೇಕಷ್ಟೇ ಎಂದು ಅವರು ತಿಳಿಸಿದ್ದಾರೆ.</p>.ಇರಾನ್: ಆಸ್ಪತ್ರೆಗೆ ಬೆಂಕಿ– 9 ರೋಗಿಗಳ ಸಾವು. <p>ಖುಷ್ಕೇಡಾ ಕೈಗಾರಿಕಾ ವಲಯದಲ್ಲಿ ಈ ಕಾರ್ಖಾನೆ ಇದ್ದು, ಔಷಧ ಕಂಪನಿಯೊಂದಕ್ಕೆ ಸೇರಿದ್ದಾಗಿದೆ. ಘಟನೆಗೆ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಗಾಯಗೊಂಡವರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p> .ನ್ಯೂಜಿಲೆಂಡ್ | ಎಂಜಿನ್ನಲ್ಲಿ ಬೆಂಕಿ: ಸುರಕ್ಷಿತವಾಗಿ ಇಳಿದ ವಿಮಾನ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>