<p><strong>ಜಲಗಾಂವ್(ಮಹಾರಾಷ್ಟ್ರ):</strong> ಜಲಗಾಂವ್ ರೈಲು ಅಪಘಾತದಲ್ಲಿ ಮೃತಪಟ್ಟ 13 ಜನರ ಪೈಕಿ ಒಬ್ಬ ಬಾಲಕ, ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರನ್ನು ನೇಪಾಳದವರು ಎಂದು ಗುರುತಿಸಲಾಗಿದೆ ಪೊಲೀಸರು ತಿಳಿಸಿದ್ದಾರೆ.</p><p>ಮೃತರನ್ನು ಕಮಲ ನವೀನ್ ಭಂಡಾರಿ(43), ಜವಕಲಾ ಭಾಟೆ (60), ಲಚ್ಚಿರಾಮ್ ಖತರು ಪಾಸಿ (40) ಮತ್ತು ಇಮ್ತಿಯಾಜ್ ಅಲಿ (11) ಎಂದು ಗುರುತಿಸಲಾಗಿದೆ ಎಂದು ಜಲಗಾಂವ್ ಜಿಲ್ಲಾ ಮಾಹಿತಿ ಅಧಿಕಾರಿ ಯುವರಾಜ್ ಪಾಟೀಲ್ ಹೇಳಿದ್ದಾರೆ.</p><p>ಇನ್ನು, ಗಾಯಗೊಂಡ 10 ಮಂದಿಯಲ್ಲಿ ಒಂಭತ್ತು ಮಂದಿ ಪಚೋರಾ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಒಬ್ಬಾತ ಜಲಗಾಂವ್ ನಗರ ವೈದ್ಯಕೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಸಣ್ಣ ಪುಟ್ಟ ಗಾಯಗೊಂಡವರನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ ಎಂದು ಪಾಟೀಲ್ ಮಾಹಿತಿ ನೀಡಿದ್ದಾರೆ.</p><p>ಬೋಗಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ವದಂತಿ ನಂಬಿ ಲಖನೌ–ಮುಂಬೈ ಪುಷ್ಪಕ್ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದವರಲ್ಲಿ ಹಲವರು ರೈಲಿನಿಂದ ಕೆಳಗಿಳಿದು ಓಡಿಹೋಗಿದ್ದು, ಈ ವೇಳೆ ಮತ್ತೊಂದು ಹಳಿಯಲ್ಲಿ ಬರುತ್ತಿದ್ದ ಕರ್ನಾಟಕ ಎಕ್ಸ್ಪ್ರೆಸ್ ರೈಲಿಗೆ ಸಿಲುಕಿ 13 ಮಂದಿ ಮೃತಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಲಗಾಂವ್(ಮಹಾರಾಷ್ಟ್ರ):</strong> ಜಲಗಾಂವ್ ರೈಲು ಅಪಘಾತದಲ್ಲಿ ಮೃತಪಟ್ಟ 13 ಜನರ ಪೈಕಿ ಒಬ್ಬ ಬಾಲಕ, ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರನ್ನು ನೇಪಾಳದವರು ಎಂದು ಗುರುತಿಸಲಾಗಿದೆ ಪೊಲೀಸರು ತಿಳಿಸಿದ್ದಾರೆ.</p><p>ಮೃತರನ್ನು ಕಮಲ ನವೀನ್ ಭಂಡಾರಿ(43), ಜವಕಲಾ ಭಾಟೆ (60), ಲಚ್ಚಿರಾಮ್ ಖತರು ಪಾಸಿ (40) ಮತ್ತು ಇಮ್ತಿಯಾಜ್ ಅಲಿ (11) ಎಂದು ಗುರುತಿಸಲಾಗಿದೆ ಎಂದು ಜಲಗಾಂವ್ ಜಿಲ್ಲಾ ಮಾಹಿತಿ ಅಧಿಕಾರಿ ಯುವರಾಜ್ ಪಾಟೀಲ್ ಹೇಳಿದ್ದಾರೆ.</p><p>ಇನ್ನು, ಗಾಯಗೊಂಡ 10 ಮಂದಿಯಲ್ಲಿ ಒಂಭತ್ತು ಮಂದಿ ಪಚೋರಾ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಒಬ್ಬಾತ ಜಲಗಾಂವ್ ನಗರ ವೈದ್ಯಕೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಸಣ್ಣ ಪುಟ್ಟ ಗಾಯಗೊಂಡವರನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ ಎಂದು ಪಾಟೀಲ್ ಮಾಹಿತಿ ನೀಡಿದ್ದಾರೆ.</p><p>ಬೋಗಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ವದಂತಿ ನಂಬಿ ಲಖನೌ–ಮುಂಬೈ ಪುಷ್ಪಕ್ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದವರಲ್ಲಿ ಹಲವರು ರೈಲಿನಿಂದ ಕೆಳಗಿಳಿದು ಓಡಿಹೋಗಿದ್ದು, ಈ ವೇಳೆ ಮತ್ತೊಂದು ಹಳಿಯಲ್ಲಿ ಬರುತ್ತಿದ್ದ ಕರ್ನಾಟಕ ಎಕ್ಸ್ಪ್ರೆಸ್ ರೈಲಿಗೆ ಸಿಲುಕಿ 13 ಮಂದಿ ಮೃತಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>