<p><strong>ಶ್ರೀನಗರ:</strong>ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಅರಹಾಮಾ ಗ್ರಾಮದಲ್ಲಿ ಬುಧವಾರ ಉಗ್ರರು ನಡೆಸಿದ ಗುಂಡಿನ ದಾಳಿಗೆ ನಾಲ್ವರು ಪೊಲೀಸರು ಬಲಿಯಾಗಿದ್ದಾರೆ.</p>.<p>‘ತಮ್ಮ ವಾಹನವನ್ನು ದುರಸ್ತಿ ಮಾಡುತ್ತಿದ್ದ ಪೊಲೀಸರ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನಿಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘ಪೊಲೀಸರ ಬಳಿಯಿದ್ದ ಶಸ್ತ್ರಾಸ್ತ್ರಗಳು ಕಾಣೆಯಾಗಿವೆ. ಉಗ್ರರ ಪತ್ತೆಗಾಗಿ ಶೋಧ ಕಾರ್ಯ ನಡೆಯುತ್ತಿದೆ’ ಎಂದೂ ತಿಳಿಸಿದ್ದಾರೆ.</p>.<p><strong>ಕಮಾಂಡರ್ ಸೇರಿ ಇಬ್ಬರು ಉಗ್ರರ ಹತ್ಯೆ:</strong> ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಮುನಿವಾರ್ಡ್ ಗ್ರಾಮದಲ್ಲಿ ಭದ್ರತಾಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಹಿಜ್ಬುಲ್ ಮುಜಾಹಿದ್ದಿನ್ ಕಮಾಂಡರ್ ಸೇರಿದಂತೆ ಇಬ್ಬರು ಉಗ್ರರು ಹತರಾಗಿದ್ದಾರೆ.</p>.<p>ದಕ್ಷಿಣ ಕಾಶ್ಮೀರದ ಹವೂರ ಪ್ರದೇಶದ ನಿವಾಸಿ ಹಾಗೂ ಹಿಜ್ಬುಲ್ ಕಮಾಂಡರ್ ಅಲ್ತಾಫ್ ಅಹಮ್ಮದ್ ದಾರ್ ಮತ್ತು ಕುಲ್ಗಾಂ ಜಿಲ್ಲೆಯ ಖುದ್ವಾನಿ ಗ್ರಾಮದ ಒಮರ್ ರಾಷಿದ್ ವಾನಿ ಮೃತ ಉಗ್ರರು.</p>.<p>ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಭದ್ರತಾಪಡೆಗಳು ಜಂಟಿಯಾಗಿ ಶೋಧಕಾರ್ಯ ನಡೆಸುತ್ತಿದ್ದಾಗ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಪ್ರತಿದಾಳಿ ನಡೆಸಿದ ಯೋಧರು ಈ ಇಬ್ಬರನ್ನು ಹೊಡೆದುರುಳಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಭದ್ರತಾ ಪಡೆಗಳು ಮತ್ತು ನಾಗರಿಕರ ಮೇಲೆ ನಡೆದ ದಾಳಿ ಪ್ರಕರಣಗಳು ಸೇರಿದಂತೆ ಹಲವು ಭಯೋತ್ಪಾದನಾ ಕೃತ್ಯಗಳಲ್ಲಿ ಅಲ್ತಾಫ್ ಅಹಮ್ಮದ್ ದಾರ್ ಭಾಗಿಯಾಗಿದ್ದ ಎಂದೂ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ:</strong>ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಅರಹಾಮಾ ಗ್ರಾಮದಲ್ಲಿ ಬುಧವಾರ ಉಗ್ರರು ನಡೆಸಿದ ಗುಂಡಿನ ದಾಳಿಗೆ ನಾಲ್ವರು ಪೊಲೀಸರು ಬಲಿಯಾಗಿದ್ದಾರೆ.</p>.<p>‘ತಮ್ಮ ವಾಹನವನ್ನು ದುರಸ್ತಿ ಮಾಡುತ್ತಿದ್ದ ಪೊಲೀಸರ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನಿಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘ಪೊಲೀಸರ ಬಳಿಯಿದ್ದ ಶಸ್ತ್ರಾಸ್ತ್ರಗಳು ಕಾಣೆಯಾಗಿವೆ. ಉಗ್ರರ ಪತ್ತೆಗಾಗಿ ಶೋಧ ಕಾರ್ಯ ನಡೆಯುತ್ತಿದೆ’ ಎಂದೂ ತಿಳಿಸಿದ್ದಾರೆ.</p>.<p><strong>ಕಮಾಂಡರ್ ಸೇರಿ ಇಬ್ಬರು ಉಗ್ರರ ಹತ್ಯೆ:</strong> ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಮುನಿವಾರ್ಡ್ ಗ್ರಾಮದಲ್ಲಿ ಭದ್ರತಾಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಹಿಜ್ಬುಲ್ ಮುಜಾಹಿದ್ದಿನ್ ಕಮಾಂಡರ್ ಸೇರಿದಂತೆ ಇಬ್ಬರು ಉಗ್ರರು ಹತರಾಗಿದ್ದಾರೆ.</p>.<p>ದಕ್ಷಿಣ ಕಾಶ್ಮೀರದ ಹವೂರ ಪ್ರದೇಶದ ನಿವಾಸಿ ಹಾಗೂ ಹಿಜ್ಬುಲ್ ಕಮಾಂಡರ್ ಅಲ್ತಾಫ್ ಅಹಮ್ಮದ್ ದಾರ್ ಮತ್ತು ಕುಲ್ಗಾಂ ಜಿಲ್ಲೆಯ ಖುದ್ವಾನಿ ಗ್ರಾಮದ ಒಮರ್ ರಾಷಿದ್ ವಾನಿ ಮೃತ ಉಗ್ರರು.</p>.<p>ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಭದ್ರತಾಪಡೆಗಳು ಜಂಟಿಯಾಗಿ ಶೋಧಕಾರ್ಯ ನಡೆಸುತ್ತಿದ್ದಾಗ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಪ್ರತಿದಾಳಿ ನಡೆಸಿದ ಯೋಧರು ಈ ಇಬ್ಬರನ್ನು ಹೊಡೆದುರುಳಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಭದ್ರತಾ ಪಡೆಗಳು ಮತ್ತು ನಾಗರಿಕರ ಮೇಲೆ ನಡೆದ ದಾಳಿ ಪ್ರಕರಣಗಳು ಸೇರಿದಂತೆ ಹಲವು ಭಯೋತ್ಪಾದನಾ ಕೃತ್ಯಗಳಲ್ಲಿ ಅಲ್ತಾಫ್ ಅಹಮ್ಮದ್ ದಾರ್ ಭಾಗಿಯಾಗಿದ್ದ ಎಂದೂ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>