<p><strong>ತಿರುವನಂತಪುರಂ:</strong> ವಿಥುರಾದ ಕಲ್ಲಾರ್ ಬಳಿ 40 ವರ್ಷದ ಆನೆಯ ಶವ ಶನಿವಾರ ಪತ್ತೆಯಾಗಿದೆ. ಈ ವೇಳೆ 9 ತಿಂಗಳ ಆನೆ ಮರಿ, ತನ್ನ ತಾಯಿಯನ್ನು ಎಚ್ಚರಿಸಲು ಪ್ರಯತ್ನಿಸುತ್ತಿದ್ದ ದೃಶ್ಯ ಮನಕಲಕುವಂತಿತ್ತು ಎಂದು ಅಧಿಕಾರಿಗಳು ತಿಳಿಸಿದರು.</p>.<p>ಖಾಸಗಿ ತೋಟವೊಂದರಲ್ಲಿ ಆನೆಯ ಶವ ಪತ್ತೆಯಾಗಿತ್ತು. ಈ ಬಗ್ಗೆ ರಬ್ಬರ್ ಟ್ಯಾಪರ್ಗಳು ಪೊಲೀಸರಿಗೆ ತಿಳಿಸಿದರು. ಪೊಲೀಸರು ಈ ಮಾಹಿತಿಯನ್ನು ಅರಣ್ಯ ಅಧಿಕಾರಿಗಳಿಗೆ ರವಾನಿಸಿದರು.</p>.<p>‘ತಾಯಿ ಆನೆಯ ಮರಣೋತ್ತರ ಪರೀಕ್ಷೆಯನ್ನು ನಡೆಸಲಾಗಿದೆ. ಆನೆ, ಶ್ವಾಸಕೋಶ ಸಂಬಂಧಿತ ಕಾಯಿಲೆಯಿಂದಾಗಿ ಮೃತಪಟ್ಟಿರುವುದು ಪರೀಕ್ಷೆಯಲ್ಲಿ ತಿಳಿದುಬಂದಿದೆ’ ಎಂದು ಅವರು ಮಾಹಿತಿ ನೀಡಿದರು.</p>.<p><strong>ಇದನ್ನೂ ಓದಿ: </strong><a href="https://www.prajavani.net/india-news/end-horrifying-cruelty-lawyer-writes-to-chief-justice-on-elephant-set-afire-798902.html" target="_blank">ಪ್ರಾಣಿಗಳ ಮೇಲಿನ ಕ್ರೌರ್ಯ ತಡೆಯಿರಿ: ಆನೆ ದುರಂತದ ಹಿನ್ನೆಲೆಯಲ್ಲಿ ಸಿಜೆಐಗೆ ಪತ್ರ</a></p>.<p>‘ಆನೆ ಮರಿ ತನ್ನ ತಾಯಿಯ ಬಳಿ ಯಾರನ್ನು ಬರಲು ಬಿಡುತ್ತಿರಲಿಲ್ಲ. ಮಧ್ಯಾಹ್ನ 12 ಗಂಟೆಯ ಬಳಿಕ ಮರಿಯನ್ನು ಕುತ್ತೂರ್ನಲ್ಲಿರುವ ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರಿಸಲಾಯಿತು’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರಂ:</strong> ವಿಥುರಾದ ಕಲ್ಲಾರ್ ಬಳಿ 40 ವರ್ಷದ ಆನೆಯ ಶವ ಶನಿವಾರ ಪತ್ತೆಯಾಗಿದೆ. ಈ ವೇಳೆ 9 ತಿಂಗಳ ಆನೆ ಮರಿ, ತನ್ನ ತಾಯಿಯನ್ನು ಎಚ್ಚರಿಸಲು ಪ್ರಯತ್ನಿಸುತ್ತಿದ್ದ ದೃಶ್ಯ ಮನಕಲಕುವಂತಿತ್ತು ಎಂದು ಅಧಿಕಾರಿಗಳು ತಿಳಿಸಿದರು.</p>.<p>ಖಾಸಗಿ ತೋಟವೊಂದರಲ್ಲಿ ಆನೆಯ ಶವ ಪತ್ತೆಯಾಗಿತ್ತು. ಈ ಬಗ್ಗೆ ರಬ್ಬರ್ ಟ್ಯಾಪರ್ಗಳು ಪೊಲೀಸರಿಗೆ ತಿಳಿಸಿದರು. ಪೊಲೀಸರು ಈ ಮಾಹಿತಿಯನ್ನು ಅರಣ್ಯ ಅಧಿಕಾರಿಗಳಿಗೆ ರವಾನಿಸಿದರು.</p>.<p>‘ತಾಯಿ ಆನೆಯ ಮರಣೋತ್ತರ ಪರೀಕ್ಷೆಯನ್ನು ನಡೆಸಲಾಗಿದೆ. ಆನೆ, ಶ್ವಾಸಕೋಶ ಸಂಬಂಧಿತ ಕಾಯಿಲೆಯಿಂದಾಗಿ ಮೃತಪಟ್ಟಿರುವುದು ಪರೀಕ್ಷೆಯಲ್ಲಿ ತಿಳಿದುಬಂದಿದೆ’ ಎಂದು ಅವರು ಮಾಹಿತಿ ನೀಡಿದರು.</p>.<p><strong>ಇದನ್ನೂ ಓದಿ: </strong><a href="https://www.prajavani.net/india-news/end-horrifying-cruelty-lawyer-writes-to-chief-justice-on-elephant-set-afire-798902.html" target="_blank">ಪ್ರಾಣಿಗಳ ಮೇಲಿನ ಕ್ರೌರ್ಯ ತಡೆಯಿರಿ: ಆನೆ ದುರಂತದ ಹಿನ್ನೆಲೆಯಲ್ಲಿ ಸಿಜೆಐಗೆ ಪತ್ರ</a></p>.<p>‘ಆನೆ ಮರಿ ತನ್ನ ತಾಯಿಯ ಬಳಿ ಯಾರನ್ನು ಬರಲು ಬಿಡುತ್ತಿರಲಿಲ್ಲ. ಮಧ್ಯಾಹ್ನ 12 ಗಂಟೆಯ ಬಳಿಕ ಮರಿಯನ್ನು ಕುತ್ತೂರ್ನಲ್ಲಿರುವ ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರಿಸಲಾಯಿತು’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>