<p><strong>ಜಮ್ಮು</strong>: ಕಳೆದ ಐದು ದಿನಗಳಿಂದ ಪಾಕಿಸ್ತಾನದ ಕಡೆಯಿಂದ ಅನಿಯಮಿತವಾಗಿ ಶೆಲ್ ದಾಳಿ ನಡೆಯುತ್ತಿರುವ ಕಾರಣ ಜಮ್ಮು ಮತ್ತು ಕಾಶ್ಮೀರದ ಅವಳಿ ಜಿಲ್ಲೆಗಳಾದ ಪೂಂಛ್ ಹಾಗೂ ರಜೌರಿಯಲ್ಲಿ 400 ಬಂಕರ್ಗಳ ನಿರ್ಮಾಣಕ್ಕೆ ಜಮ್ಮು–ಕಾಶ್ಮೀರ ಆಡಳಿತ ಅನುಮೋದನೆ ನೀಡಿದೆ.</p>.<p>ತ್ವರಿತವಾಗಿ ಬಂಕರ್ ನಿರ್ಮಾಣ ಮಾಡುವಂತೆ ಸರ್ಕಾರ ನಿರ್ದೇಶನ ನೀಡಿದೆ. ಕಾಮಗಾರಿ ಕೈಗೆತ್ತಿಕೊಳ್ಳಲು ಗ್ರಾಮೀಣಾಭಿವೃದ್ಧಿ ಇಲಾಖೆ ಮೂಲಕ ಉಪ ಆಯುಕ್ತರಿಗೆ ಹಣವನ್ನು ಒದಗಿಸಲಾಗಿದೆ.</p>.<p>ಮುಂದಿನ ಒಂದು ತಿಂಗಳ ಒಳಗಾಗಿ ನಿಗದಿತ ಮಾನದಂಡದ ಪ್ರಕಾರ ಬಂಕರ್ ನಿರ್ಮಾಣವಾಗಲಿವೆ ಎಂದು ಸರ್ಕಾರದ ವಕ್ತಾರರು ತಿಳಿಸಿದ್ದಾರೆ.</p>.<p>ಶೆಲ್ ದಾಳಿಯಿಂದ ತಪ್ಪಿಸಿಕೊಳ್ಳಲು ಬಂಕರ್ಗಳು ಸಹಕಾರಿ ಎಂಬುದು ಸ್ಥಳೀಯರ ಅಭಿಪ್ರಾಯ. ಶೆಲ್ ದಾಳಿ ವೇಳೆ ಗಡಿಭಾಗದ ಗ್ರಾಮಸ್ಥರು ಬಂಕರ್ಗಳಲ್ಲಿಯೇ ಆಶ್ರಯ ಪಡೆಯುತ್ತಾರೆ.</p>.<p><strong>ವಿಶೇಷ ಪ್ಯಾಕೇಜ್ಗೆ ಒತ್ತಾಯ</strong></p>.<p>ಪಾಕಿಸ್ತಾನದ ಶೆಲ್ ದಾಳಿಯಿಂದ ನಾಲ್ವರು ನಾಗರಿಕರು ಮೃತಪಟ್ಟಿದ್ದಕ್ಕೆ ಪ್ರಮುಖ ಗುಜ್ಜರ್ ಮುಖಂಡ ಶಂಶೀರ್ ಹಕ್ಲಾ ಪೂಂಚಿ ಸಂತಾಪ ವ್ಯಕ್ತಪಡಿಸಿದ್ದಾರೆ. ಗಡಿನಿವಾಸಿಗಳಿಗಾಗಿ ಸುರಕ್ಷಿತ ಕಾಲೊನಿಗಳನ್ನು ನಿರ್ಮಿಸುವಂತೆ ಅವರು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.</p>.<p>ಪಾಕಿಸ್ತಾನದ ವರ್ತನೆಯನ್ನು ಖಂಡಿಸಿರುವ ಅವರು, ‘ಶೆಲ್ ದಾಳಿಯಿಂದ ಗ್ರಾಮಸ್ಥರು ಭಾರಿ ತೊಂದರೆ ಅನುಭವಿಸುತ್ತಿದ್ದಾರೆ. ದಾಳಿಯಿಂದ ತಪ್ಪಿಸಿಕೊಂಡು ಶಾಂತಿಯುತ ಜೀವನ ಸಾಗಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ. ಗಡಿವಾಸಿಗಳು ತಮ್ಮ ಜೀವ ಹಾಗೂ ಆಸ್ತಿಪಾಸ್ತಿಗಳನ್ನೂ ಲೆಕ್ಕಿಸದೆ ದೇಶಕ್ಕಾಗಿ ಮಹತ್ವದ ಪಾತ್ರ ವಹಿಸುತ್ತಿದ್ದಾರೆ’ ಎಂದಿದ್ದಾರೆ.</p>.<p>ಗಡಿನಿಯಂತ್ರಣ ರೇಖೆ ಸಮೀಪದ ಗ್ರಾಮಸ್ಥರು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಹಾಗೂ ರಾಜಕೀಯವಾಗಿ ಹಿಂದುಳಿದಿದ್ದಾರೆ. ಕುಡಿಯುವ ನೀರು, ಆಸ್ಪತ್ರೆ, ರಸ್ತೆ, ವಿದ್ಯುತ್ ಸಂಪರ್ಕ ಸೇರಿದಂತೆ ಸೇರಿದಂತೆ ಮೂಲಸೌಕರ್ಯಗಳಿಂದ ವಂಚಿತರಾಗಿದ್ದಾರೆ’ ಎಂದು ಹೇಳಿದ್ದಾರೆ.</p>.<p>*ಗಡಿಭಾಗದಲ್ಲಿ ವಾಸುತ್ತಿರುವ ಜನರ ಕಲ್ಯಾಣಕ್ಕಾಗಿ ಪ್ರಧಾನಿ ವಿಶೇಷ ಪ್ಯಾಕೇಜ್ ಬಿಡುಗಡೆ ಮಾಡಬೇಕು<br /><strong>–ಶಂಶೀರ್ ಹಕ್ಲಾ ಪೂಂಚಿ,</strong>ಗುಜ್ಜರ್ ಮುಖಂಡ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮ್ಮು</strong>: ಕಳೆದ ಐದು ದಿನಗಳಿಂದ ಪಾಕಿಸ್ತಾನದ ಕಡೆಯಿಂದ ಅನಿಯಮಿತವಾಗಿ ಶೆಲ್ ದಾಳಿ ನಡೆಯುತ್ತಿರುವ ಕಾರಣ ಜಮ್ಮು ಮತ್ತು ಕಾಶ್ಮೀರದ ಅವಳಿ ಜಿಲ್ಲೆಗಳಾದ ಪೂಂಛ್ ಹಾಗೂ ರಜೌರಿಯಲ್ಲಿ 400 ಬಂಕರ್ಗಳ ನಿರ್ಮಾಣಕ್ಕೆ ಜಮ್ಮು–ಕಾಶ್ಮೀರ ಆಡಳಿತ ಅನುಮೋದನೆ ನೀಡಿದೆ.</p>.<p>ತ್ವರಿತವಾಗಿ ಬಂಕರ್ ನಿರ್ಮಾಣ ಮಾಡುವಂತೆ ಸರ್ಕಾರ ನಿರ್ದೇಶನ ನೀಡಿದೆ. ಕಾಮಗಾರಿ ಕೈಗೆತ್ತಿಕೊಳ್ಳಲು ಗ್ರಾಮೀಣಾಭಿವೃದ್ಧಿ ಇಲಾಖೆ ಮೂಲಕ ಉಪ ಆಯುಕ್ತರಿಗೆ ಹಣವನ್ನು ಒದಗಿಸಲಾಗಿದೆ.</p>.<p>ಮುಂದಿನ ಒಂದು ತಿಂಗಳ ಒಳಗಾಗಿ ನಿಗದಿತ ಮಾನದಂಡದ ಪ್ರಕಾರ ಬಂಕರ್ ನಿರ್ಮಾಣವಾಗಲಿವೆ ಎಂದು ಸರ್ಕಾರದ ವಕ್ತಾರರು ತಿಳಿಸಿದ್ದಾರೆ.</p>.<p>ಶೆಲ್ ದಾಳಿಯಿಂದ ತಪ್ಪಿಸಿಕೊಳ್ಳಲು ಬಂಕರ್ಗಳು ಸಹಕಾರಿ ಎಂಬುದು ಸ್ಥಳೀಯರ ಅಭಿಪ್ರಾಯ. ಶೆಲ್ ದಾಳಿ ವೇಳೆ ಗಡಿಭಾಗದ ಗ್ರಾಮಸ್ಥರು ಬಂಕರ್ಗಳಲ್ಲಿಯೇ ಆಶ್ರಯ ಪಡೆಯುತ್ತಾರೆ.</p>.<p><strong>ವಿಶೇಷ ಪ್ಯಾಕೇಜ್ಗೆ ಒತ್ತಾಯ</strong></p>.<p>ಪಾಕಿಸ್ತಾನದ ಶೆಲ್ ದಾಳಿಯಿಂದ ನಾಲ್ವರು ನಾಗರಿಕರು ಮೃತಪಟ್ಟಿದ್ದಕ್ಕೆ ಪ್ರಮುಖ ಗುಜ್ಜರ್ ಮುಖಂಡ ಶಂಶೀರ್ ಹಕ್ಲಾ ಪೂಂಚಿ ಸಂತಾಪ ವ್ಯಕ್ತಪಡಿಸಿದ್ದಾರೆ. ಗಡಿನಿವಾಸಿಗಳಿಗಾಗಿ ಸುರಕ್ಷಿತ ಕಾಲೊನಿಗಳನ್ನು ನಿರ್ಮಿಸುವಂತೆ ಅವರು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.</p>.<p>ಪಾಕಿಸ್ತಾನದ ವರ್ತನೆಯನ್ನು ಖಂಡಿಸಿರುವ ಅವರು, ‘ಶೆಲ್ ದಾಳಿಯಿಂದ ಗ್ರಾಮಸ್ಥರು ಭಾರಿ ತೊಂದರೆ ಅನುಭವಿಸುತ್ತಿದ್ದಾರೆ. ದಾಳಿಯಿಂದ ತಪ್ಪಿಸಿಕೊಂಡು ಶಾಂತಿಯುತ ಜೀವನ ಸಾಗಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ. ಗಡಿವಾಸಿಗಳು ತಮ್ಮ ಜೀವ ಹಾಗೂ ಆಸ್ತಿಪಾಸ್ತಿಗಳನ್ನೂ ಲೆಕ್ಕಿಸದೆ ದೇಶಕ್ಕಾಗಿ ಮಹತ್ವದ ಪಾತ್ರ ವಹಿಸುತ್ತಿದ್ದಾರೆ’ ಎಂದಿದ್ದಾರೆ.</p>.<p>ಗಡಿನಿಯಂತ್ರಣ ರೇಖೆ ಸಮೀಪದ ಗ್ರಾಮಸ್ಥರು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಹಾಗೂ ರಾಜಕೀಯವಾಗಿ ಹಿಂದುಳಿದಿದ್ದಾರೆ. ಕುಡಿಯುವ ನೀರು, ಆಸ್ಪತ್ರೆ, ರಸ್ತೆ, ವಿದ್ಯುತ್ ಸಂಪರ್ಕ ಸೇರಿದಂತೆ ಸೇರಿದಂತೆ ಮೂಲಸೌಕರ್ಯಗಳಿಂದ ವಂಚಿತರಾಗಿದ್ದಾರೆ’ ಎಂದು ಹೇಳಿದ್ದಾರೆ.</p>.<p>*ಗಡಿಭಾಗದಲ್ಲಿ ವಾಸುತ್ತಿರುವ ಜನರ ಕಲ್ಯಾಣಕ್ಕಾಗಿ ಪ್ರಧಾನಿ ವಿಶೇಷ ಪ್ಯಾಕೇಜ್ ಬಿಡುಗಡೆ ಮಾಡಬೇಕು<br /><strong>–ಶಂಶೀರ್ ಹಕ್ಲಾ ಪೂಂಚಿ,</strong>ಗುಜ್ಜರ್ ಮುಖಂಡ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>