ನವದೆಹಲಿ: 2017ರಿಂದೀಚೆಗೆ ಒಳಚರಂಡಿ ಹಾಗೂ ಸೆಪ್ಟಿಕ್ ಟ್ಯಾಂಕ್ ಅನ್ನು ಸ್ವಚ್ಛಗೊಳಿಸುವ ವೇಳೆ ಸುಮಾರು 400 ಮಂದಿ ಸಾವಿಗೀಡಾಗಿದ್ದಾರೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆಯ ರಾಜ್ಯ ಸಚಿವ ರಾಮದಾಸ್ ಆಠವಲೆ ಮಂಗಳವಾರ ಲೋಕಸಭೆಗೆ ತಿಳಿಸಿದ್ದಾರೆ.
‘ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್ಗಳಿಗೆ ಇಳಿದು ಸ್ವಚ್ಛತೆ ಮಾಡುವ ವೇಳೆ ಸಾವು ಸಂಬವಿಸಿದ ಯಾವುದೇ ಘಟನೆ ವರದಿಯಾಗಿಲ್ಲ’ ಎಂದು ತಿಳಿಸಿದರು.
2017ರಲ್ಲಿ 100, 2018ರಲ್ಲಿ 67, 2019ರಲ್ಲಿ 117, 2020ರಲ್ಲಿ 19, 2021ರಲ್ಲಿ 49 ಹಾಗೂ 2022ರಲ್ಲಿ 48 ಮಂದಿ ಸಾವಿಗೀಡಾಗಿದ್ದಾರೆ ಎಂದು ಹೇಳಿದ್ದಾರೆ.