<p><strong>ನವದೆಹಲಿ:</strong> ನಮಗೆ ಯಾವ ರಾಜಕೀಯ ಪಕ್ಷಗಳ ಚುನಾವಣಾ ರ್ಯಾಲಿಗಳೂ ಬೇಡ ಎಂದು ಶೇ 41ರಷ್ಟು ಜನ ಅಭಿಪ್ರಾಯಪಟ್ಟಿರುವುದಾಗಿ ಸಮೀಕ್ಷೆಯೊಂದು ಹೇಳಿದೆ.</p>.<p>ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ, ಪಂಜಾಬ್ ಮತ್ತು ಮಣಿಪುರದ ವಿಧಾನಸಭೆ ಚುನಾವಣೆಗಾಗಿ ಶನಿವಾರ ವೇಳಾಪಟ್ಟಿ ಪ್ರಕಟವಾಗಿದೆ. ಈ ಮಧ್ಯೆ ಶೇ 31 ರಷ್ಟು ನಾಗರಿಕರು ಚುನಾವಣೆಯನ್ನು ಮುಂದೂಡಬಹುದಾಗಿತ್ತು ಎಂದೂ ಅಭಿಪ್ರಾಯಪಟ್ಟಿದ್ದಾರೆ ಎಂದು ‘ಲೋಕಲ್ ಸರ್ಕಲ್ಸ್’ ಎಂಬ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ಗೊತ್ತಾಗಿದೆ.</p>.<p>ಪಂಚ ರಾಜ್ಯಗಳಿಗೆ ಚುನಾವಣೆ ಘೋಷಣೆ ಮಾಡಿರುವ ಆಯೋಗವು, ಈ ರಾಜ್ಯಗಳಲ್ಲಿ ಜನವರಿ 15 ರವರೆಗೆ ಸಾರ್ವಜನಿಕ ರ್ಯಾಲಿಗಳು, ರೋಡ್ಶೋಗಳು, ಸಭೆಗಳನ್ನು ನಿಷೇಧಿಸಿದೆ ಮತ್ತು ಕಟ್ಟುನಿಟ್ಟಾದ ಸುರಕ್ಷತಾ ಮಾರ್ಗಸೂಚಿಗಳನ್ನು ಪಾಲಿಸಲು ಹೇಳಿದೆ.</p>.<p>ಚುನಾವಣೆಯ ಕಾರಣದಿಂದಾಗಿ ಕೋವಿಡ್ ಹರಡುವ ಅಪಾಯ ಕಡಿಮೆ, ಯಾವುದೇ ಕ್ರಮದ ಅಗತ್ಯವಿಲ್ಲ ಎಂದು ಶೇ. 4ರಷ್ಟು ಜನ ಅಭಿಪ್ರಾಯಪಟ್ಟಿದ್ದಾರೆ.</p>.<p>ದೇಶದ 309 ಜಿಲ್ಲೆಗಳ 11,000 ಕ್ಕೂ ಹೆಚ್ಚು ಜನರನ್ನು ಸಂಪರ್ಕಿಸಿ ಈ ಸಮೀಕ್ಷೆಯನ್ನು ಮಾಡಲಾಗಿದೆ. ಮತದಾನ ನಡೆಯುವ ಐದು ರಾಜ್ಯಗಳ 4,172 ಮಂದಿ ಇದರಲ್ಲಿ ಭಾಗವಹಿಸಿದ್ದಾರೆ. ಸಮೀಕ್ಷೆಯಲ್ಲಿ ಭಾಗವಹಿಸಿದವರ ಪೈಕಿ ಶೇ 68 ಮಂದಿ ಪುರುಷರಾಗಿದ್ದರೆ, ಶೇ 32 ಮಂದಿ ಮಹಿಳೆಯರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ನಮಗೆ ಯಾವ ರಾಜಕೀಯ ಪಕ್ಷಗಳ ಚುನಾವಣಾ ರ್ಯಾಲಿಗಳೂ ಬೇಡ ಎಂದು ಶೇ 41ರಷ್ಟು ಜನ ಅಭಿಪ್ರಾಯಪಟ್ಟಿರುವುದಾಗಿ ಸಮೀಕ್ಷೆಯೊಂದು ಹೇಳಿದೆ.</p>.<p>ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ, ಪಂಜಾಬ್ ಮತ್ತು ಮಣಿಪುರದ ವಿಧಾನಸಭೆ ಚುನಾವಣೆಗಾಗಿ ಶನಿವಾರ ವೇಳಾಪಟ್ಟಿ ಪ್ರಕಟವಾಗಿದೆ. ಈ ಮಧ್ಯೆ ಶೇ 31 ರಷ್ಟು ನಾಗರಿಕರು ಚುನಾವಣೆಯನ್ನು ಮುಂದೂಡಬಹುದಾಗಿತ್ತು ಎಂದೂ ಅಭಿಪ್ರಾಯಪಟ್ಟಿದ್ದಾರೆ ಎಂದು ‘ಲೋಕಲ್ ಸರ್ಕಲ್ಸ್’ ಎಂಬ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ಗೊತ್ತಾಗಿದೆ.</p>.<p>ಪಂಚ ರಾಜ್ಯಗಳಿಗೆ ಚುನಾವಣೆ ಘೋಷಣೆ ಮಾಡಿರುವ ಆಯೋಗವು, ಈ ರಾಜ್ಯಗಳಲ್ಲಿ ಜನವರಿ 15 ರವರೆಗೆ ಸಾರ್ವಜನಿಕ ರ್ಯಾಲಿಗಳು, ರೋಡ್ಶೋಗಳು, ಸಭೆಗಳನ್ನು ನಿಷೇಧಿಸಿದೆ ಮತ್ತು ಕಟ್ಟುನಿಟ್ಟಾದ ಸುರಕ್ಷತಾ ಮಾರ್ಗಸೂಚಿಗಳನ್ನು ಪಾಲಿಸಲು ಹೇಳಿದೆ.</p>.<p>ಚುನಾವಣೆಯ ಕಾರಣದಿಂದಾಗಿ ಕೋವಿಡ್ ಹರಡುವ ಅಪಾಯ ಕಡಿಮೆ, ಯಾವುದೇ ಕ್ರಮದ ಅಗತ್ಯವಿಲ್ಲ ಎಂದು ಶೇ. 4ರಷ್ಟು ಜನ ಅಭಿಪ್ರಾಯಪಟ್ಟಿದ್ದಾರೆ.</p>.<p>ದೇಶದ 309 ಜಿಲ್ಲೆಗಳ 11,000 ಕ್ಕೂ ಹೆಚ್ಚು ಜನರನ್ನು ಸಂಪರ್ಕಿಸಿ ಈ ಸಮೀಕ್ಷೆಯನ್ನು ಮಾಡಲಾಗಿದೆ. ಮತದಾನ ನಡೆಯುವ ಐದು ರಾಜ್ಯಗಳ 4,172 ಮಂದಿ ಇದರಲ್ಲಿ ಭಾಗವಹಿಸಿದ್ದಾರೆ. ಸಮೀಕ್ಷೆಯಲ್ಲಿ ಭಾಗವಹಿಸಿದವರ ಪೈಕಿ ಶೇ 68 ಮಂದಿ ಪುರುಷರಾಗಿದ್ದರೆ, ಶೇ 32 ಮಂದಿ ಮಹಿಳೆಯರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>