ಪಾಕ್ ಆಕ್ರಮಿತ ಕಾಶ್ಮೀರದ ಉರಿ ವಲಯದಲ್ಲಿ ಭಾರತದ ಗಡಿ ಪ್ರದೇಶದೊಳಕ್ಕೆ ನುಸುಳಲು ಯತ್ನಿಸುತ್ತಿದ್ದ ಶಸ್ತ್ರಸಜ್ಜಿತ ಉಗ್ರರ ಗುಂಪಿನ ಚನವಲನವನ್ನು ಸೇನೆ ಗುರುವಾರ ರಾತ್ರಿ ಗಮನಿಸಿದೆ. ಬಳಿಕ, ಉಗ್ರರ ವಿರುದ್ಧ ಕಾರ್ಯಾಚರಣೆ ಆರಂಭಿಸಿದೆ. ಉಗ್ರರು ಶುಕ್ರವಾರ ಗುಂಡಿನ ದಾಳಿ ನಡೆಸಿದ್ದು, ಭದ್ರತಾ ಸಿಬ್ಬಂದಿ ಪ್ರತಿದಾಳಿ ನಡೆಸಿ ಆರು ಉಗ್ರರನ್ನು ಹೊಡೆದುರುಳಿಸಿದೆ ಎಂದು ಸೇನೆ ಹೇಳಿದೆ.