ನವದೆಹಲಿ: ಪೂರ್ವ ದೆಹಲಿಯ ಶಾಕಾರ್ಪುರ್ ಪ್ರದೇಶದಲ್ಲಿ ಸೋಮವಾರ ನಡೆದ ಎನ್ಕೌಂಟರ್ ಬಳಿಕ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಇವರಲ್ಲಿ ಕೆಲವರು ಭಯೋತ್ಪಾದನೆ ಸಂಘಟನೆಗಳ ಜತೆ ಸಂಪರ್ಕ ಹೊಂದಿರುವ ಶಂಕೆ ಇದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
‘ಐವರಲ್ಲಿ ಇಬ್ಬರು ಪಂಜಾಬ್ದವರು ಮತ್ತು ಉಳಿದ ಮೂವರು ಕಾಶ್ಮೀರದವರು. ಇವರಿಂದ ಶಸ್ತ್ರಾಸ್ತ್ರಗಳು ಹಾಗೂ ವಿವಿಧ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಭಯೋತ್ಪಾದನೆ ಸಂಘಟನೆಗಳ ಜತೆ ಹೊಂದಿರುವ ಸಂಪರ್ಕದ ಬಗ್ಗೆ ತನಿಖೆ ನಡೆಸಲಾಗುತ್ತಿದೆ’ ಎಂದು ಡಿಸಿಪಿ ಪ್ರಮೋದ್ ಸಿಂಗ್ ಕುಶ್ವಾ ತಿಳಿಸಿದ್ದಾರೆ.