<p><strong>ಅಗರ್ತಲಾ</strong>: ಇಲ್ಲಿನ ಸಿಪಾಹಿಜಾಲಾ ಜಿಲ್ಲೆಯಲ್ಲಿ ಶಂಕಿತ ದನ ಕಳ್ಳಸಾಗಣೆದಾರರು ನಡೆಸಿದ ದಾಳಿಗೆ ಗಡಿ ಭದ್ರತಾ ಪಡೆ (ಬಿಎಸ್ಎಫ್) ಐದು ಮಂದಿ ಯೋಧರು ಗಾಯಗೊಂಡಿದ್ದಾರೆ.</p><p>ಭಾರತ– ಬಾಂಗ್ಲಾದೇಶ ಗಡಿಭಾಗದ ಬಿಶಾಲ್ಗಢ ಹಾಗೂ ಕಮ್ಥಾನಾ ರಸ್ತೆಯಲ್ಲಿ ಈ ಘಟನೆ ನಡೆದಿದೆ.</p>.<p>‘ಕಮ್ಥಾನಾ ಗಡಿಯ ಹೊರ ಠಾಣೆಯ ಬಳಿ ರಸ್ತೆಯಲ್ಲಿ ಬರುತ್ತಿದ್ದ ವಾಹನವೊಂದನ್ನು ಬಿಎಸ್ಎಫ್ ಯೋಧರು ತಡೆದಿದ್ದಾರೆ, ಆಗ ವಾಹನದ ಚಾಲಕ ನಿಲ್ಲಿಸದೇ, ಸೀದಾ ಸ್ಥಳೀಯ ಮಾರುಕಟ್ಟೆಗೆ ಕಡೆಗೆ ಕೊಂಡೊಯ್ದಿದ್ದಾನೆ. ಬಿಎಸ್ಎಫ್ ಯೋಧರು ವಾಹನವನ್ನು ಬೆನ್ನತ್ತಿದ್ದು, ಈ ವೇಳೆ ಕಳ್ಳ ಸಾಗಣೆದಾರರು ಹಾಗೂ ಯೋಧರ ನಡುವೆ ಮಾತಿನ ಚಕಮಕಿ ನಡೆದಿದೆ. ಎರಡು ಕಡೆ ಮಾತಿನ ಚಕಮಕಿ ಜೋರಾಗಿ ಯೋಧರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಯೋಧರು ಗಾಯಗೊಂಡಿದ್ದು, ವಾಹನಗಳು ಜಖಂಗೊಂಡಿವೆ’ ಎಂದು ಬಿಶಾಲ್ಗಢ ಪೊಲೀಸ್ ಠಾಣೆಯ ಠಾಣಾಧಿಕಾರಿ ಬಿಕಾಶ್ ದಾಸ್ ತಿಳಿಸಿದ್ದಾರೆ.</p>.<p>‘ಪೊಲೀಸರು ಪ್ರಕರಣ ದಾಖಲಿಸಿದ್ದು, ದಾಳಿಕೋರರನ್ನು ಬಂಧಿಸಲು ಕ್ರಮ ಕೈಗೊಳ್ಳಲಾಗಿದೆ’ ಎಂದು ಹೇಳಿದ್ದಾರೆ.</p>.<p>ಯೋಧರ ಮೇಲೆ ದಾಳಿ ನಡೆಯುತ್ತಿದ್ದರೂ, ಸ್ಥಳದಲ್ಲಿದ್ದ ನಿವಾಸಿಗಳು ಮಧ್ಯಪ್ರವೇಶಿಸಿ ತಡೆಯುವ ಪ್ರಯತ್ನ ನಡೆಸಿರಲಿಲ್ಲ ಎಂದು ಬಿಎಸ್ಎಫ್ ಅಧಿಕಾರಿಯೊಬ್ಬರು ಆಕ್ರೋಶ ವ್ಯಕ್ತಪಡಿಸಿದ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಗರ್ತಲಾ</strong>: ಇಲ್ಲಿನ ಸಿಪಾಹಿಜಾಲಾ ಜಿಲ್ಲೆಯಲ್ಲಿ ಶಂಕಿತ ದನ ಕಳ್ಳಸಾಗಣೆದಾರರು ನಡೆಸಿದ ದಾಳಿಗೆ ಗಡಿ ಭದ್ರತಾ ಪಡೆ (ಬಿಎಸ್ಎಫ್) ಐದು ಮಂದಿ ಯೋಧರು ಗಾಯಗೊಂಡಿದ್ದಾರೆ.</p><p>ಭಾರತ– ಬಾಂಗ್ಲಾದೇಶ ಗಡಿಭಾಗದ ಬಿಶಾಲ್ಗಢ ಹಾಗೂ ಕಮ್ಥಾನಾ ರಸ್ತೆಯಲ್ಲಿ ಈ ಘಟನೆ ನಡೆದಿದೆ.</p>.<p>‘ಕಮ್ಥಾನಾ ಗಡಿಯ ಹೊರ ಠಾಣೆಯ ಬಳಿ ರಸ್ತೆಯಲ್ಲಿ ಬರುತ್ತಿದ್ದ ವಾಹನವೊಂದನ್ನು ಬಿಎಸ್ಎಫ್ ಯೋಧರು ತಡೆದಿದ್ದಾರೆ, ಆಗ ವಾಹನದ ಚಾಲಕ ನಿಲ್ಲಿಸದೇ, ಸೀದಾ ಸ್ಥಳೀಯ ಮಾರುಕಟ್ಟೆಗೆ ಕಡೆಗೆ ಕೊಂಡೊಯ್ದಿದ್ದಾನೆ. ಬಿಎಸ್ಎಫ್ ಯೋಧರು ವಾಹನವನ್ನು ಬೆನ್ನತ್ತಿದ್ದು, ಈ ವೇಳೆ ಕಳ್ಳ ಸಾಗಣೆದಾರರು ಹಾಗೂ ಯೋಧರ ನಡುವೆ ಮಾತಿನ ಚಕಮಕಿ ನಡೆದಿದೆ. ಎರಡು ಕಡೆ ಮಾತಿನ ಚಕಮಕಿ ಜೋರಾಗಿ ಯೋಧರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಯೋಧರು ಗಾಯಗೊಂಡಿದ್ದು, ವಾಹನಗಳು ಜಖಂಗೊಂಡಿವೆ’ ಎಂದು ಬಿಶಾಲ್ಗಢ ಪೊಲೀಸ್ ಠಾಣೆಯ ಠಾಣಾಧಿಕಾರಿ ಬಿಕಾಶ್ ದಾಸ್ ತಿಳಿಸಿದ್ದಾರೆ.</p>.<p>‘ಪೊಲೀಸರು ಪ್ರಕರಣ ದಾಖಲಿಸಿದ್ದು, ದಾಳಿಕೋರರನ್ನು ಬಂಧಿಸಲು ಕ್ರಮ ಕೈಗೊಳ್ಳಲಾಗಿದೆ’ ಎಂದು ಹೇಳಿದ್ದಾರೆ.</p>.<p>ಯೋಧರ ಮೇಲೆ ದಾಳಿ ನಡೆಯುತ್ತಿದ್ದರೂ, ಸ್ಥಳದಲ್ಲಿದ್ದ ನಿವಾಸಿಗಳು ಮಧ್ಯಪ್ರವೇಶಿಸಿ ತಡೆಯುವ ಪ್ರಯತ್ನ ನಡೆಸಿರಲಿಲ್ಲ ಎಂದು ಬಿಎಸ್ಎಫ್ ಅಧಿಕಾರಿಯೊಬ್ಬರು ಆಕ್ರೋಶ ವ್ಯಕ್ತಪಡಿಸಿದ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>