<p><strong>ಚಂಡೀಗಢ</strong>: ಪಂಜಾಬ್ನ ಶ್ರೀ ಮುಕ್ತಸರ್ ಸಾಹಿಬ್ ಜಿಲ್ಲೆಯ ಲಂಬಿ ಬಳಿಯ ಪಟಾಕಿ ತಯಾರಿಕೆ ಮತ್ತು ಪ್ಯಾಕೇಜಿಂಗ್ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಐದು ಜನರು ಸಾವಿಗೀಡಾಗಿದ್ದು, ಸುಮಾರು 30 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.</p><p>ಈ ಘಟನೆ ಬೆಳಗಿನ ಜಾವ 1 ಗಂಟೆ ಸುಮಾರಿಗೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಪಂಜಾಬ್-ಹರಿಯಾಣ ಗಡಿಯಲ್ಲಿರುವ ಶ್ರೀ ಮುಕ್ತಸರ್ ಸಾಹಿಬ್ನ ಸಿಂಘೇವಾಲಾ-ಕೋಟ್ಲಿ ರಸ್ತೆಯಲ್ಲಿರುವ ಎರಡು ಅಂತಸ್ತಿನ ಕಾರ್ಖಾನೆ ಘಟಕದಲ್ಲಿ ಸ್ಫೋಟ ಸಂಭವಿಸಿದೆ ಎಂದು ಲಂಬಿಯ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ) ಜಸ್ಪಾಲ್ ಸಿಂಗ್ ದೂರವಾಣಿ ಮೂಲಕ ತಿಳಿಸಿದ್ದು, ಈ ಘಟಕದಲ್ಲಿ ವಲಸೆ ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎಂದು ತಿಳಿಸಿದ್ದಾರೆ.</p><p>ಗಾಯಾಳುಗಳನ್ನು ಏಮ್ಸ್ ಬಟಿಂಡಾ ಸೇರಿದಂತೆ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಅವರಲ್ಲಿ ಹೆಚ್ಚಿನವರು ಅಪಾಯದಿಂದ ಪಾರಾಗಿದ್ದಾರೆ ಎಂದು ಡಿಎಸ್ಪಿ ತಿಳಿಸಿದ್ದಾರೆ. ಸ್ಫೋಟದ ಹಿಂದಿನ ಕಾರಣವನ್ನು ತನಿಖೆ ನಡೆಸಲಾಗುತ್ತಿದೆ ಎಂದಿದ್ದಾರೆ.</p><p>ಘಟಕದ ಪಟಾಕಿ ತಯಾರಿಕಾ ಕೇಂದ್ರದ ಒಂದು ಕೋಣೆಯಲ್ಲಿ ಸ್ಫೋಟ ಸಂಭವಿಸಿದ್ದು, ಕಟ್ಟಡದ ಛಾವಣಿ ಮತ್ತು ಇತರ ಭಾಗಗಳು ಕುಸಿದಿವೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಡಾ. ಅಖಿಲ್ ಚೌಧರಿ ಹೇಳಿದ್ದಾರೆ.</p><p>ಅವಶೇಷಗಳಡಿ ಹಲವು ಮಂದಿ ಸಿಲುಕಿದ್ದು, ಪೊಲೀಸರಿಗೆ ಮಾಹಿತಿ ಬಂದ ಕೂಡಲೇ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಯಿತು ಎಂದೂ ಎಸ್ಎಸ್ಪಿ ಹೇಳಿದ್ದಾರೆ.</p><p>ಪಟಾಕಿ ತಯಾರಿಕೆಗೆ ಬಳಸಿದ್ದ ವಸ್ತುಗಳಿಂದ ಸ್ಫೋಟ ಸಂಭವಿಸಿರುವ ಸಾಧ್ಯತೆ ಇದೆ. ತನಿಖೆ ಬಳಿಕ ಕಾರಣ ತಿಳಿದುಬರಲಿದೆ ಎಂದೂ ಅವರು ತಿಳಿಸಿದ್ದಾರೆ.</p><p>ಘಟನೆ ನಡೆದ ಸಮಯದಲ್ಲಿ ಘಟಕದಲ್ಲಿ40-50 ಕಾರ್ಮಿಕರಿದ್ದರು ಎಂದು ಡಿಎಸ್ಪಿ ಜಸ್ಪಾಲ್ ತಿಳಿಸಿದ್ದಾರೆ.</p><p>ಪಟಾಕಿ ಉತ್ಪಾದನಾ ಘಟಕವು ಕಾರ್ಯನಿರ್ವಹಿಸಲು ಅಗತ್ಯವಾದ ಅನುಮತಿಗಳನ್ನು ಹೊಂದಿದೆಯೇ ಎಂದು ಕೇಳಿದಾಗ, ಈ ಸಂಬಂಧ ದಾಖಲೆಗಳನ್ನು ಸಂಬಂಧಪಟ್ಟ ಇಲಾಖೆಯಿಂದ ಪರಿಶೀಲಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಢ</strong>: ಪಂಜಾಬ್ನ ಶ್ರೀ ಮುಕ್ತಸರ್ ಸಾಹಿಬ್ ಜಿಲ್ಲೆಯ ಲಂಬಿ ಬಳಿಯ ಪಟಾಕಿ ತಯಾರಿಕೆ ಮತ್ತು ಪ್ಯಾಕೇಜಿಂಗ್ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಐದು ಜನರು ಸಾವಿಗೀಡಾಗಿದ್ದು, ಸುಮಾರು 30 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.</p><p>ಈ ಘಟನೆ ಬೆಳಗಿನ ಜಾವ 1 ಗಂಟೆ ಸುಮಾರಿಗೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಪಂಜಾಬ್-ಹರಿಯಾಣ ಗಡಿಯಲ್ಲಿರುವ ಶ್ರೀ ಮುಕ್ತಸರ್ ಸಾಹಿಬ್ನ ಸಿಂಘೇವಾಲಾ-ಕೋಟ್ಲಿ ರಸ್ತೆಯಲ್ಲಿರುವ ಎರಡು ಅಂತಸ್ತಿನ ಕಾರ್ಖಾನೆ ಘಟಕದಲ್ಲಿ ಸ್ಫೋಟ ಸಂಭವಿಸಿದೆ ಎಂದು ಲಂಬಿಯ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ) ಜಸ್ಪಾಲ್ ಸಿಂಗ್ ದೂರವಾಣಿ ಮೂಲಕ ತಿಳಿಸಿದ್ದು, ಈ ಘಟಕದಲ್ಲಿ ವಲಸೆ ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎಂದು ತಿಳಿಸಿದ್ದಾರೆ.</p><p>ಗಾಯಾಳುಗಳನ್ನು ಏಮ್ಸ್ ಬಟಿಂಡಾ ಸೇರಿದಂತೆ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಅವರಲ್ಲಿ ಹೆಚ್ಚಿನವರು ಅಪಾಯದಿಂದ ಪಾರಾಗಿದ್ದಾರೆ ಎಂದು ಡಿಎಸ್ಪಿ ತಿಳಿಸಿದ್ದಾರೆ. ಸ್ಫೋಟದ ಹಿಂದಿನ ಕಾರಣವನ್ನು ತನಿಖೆ ನಡೆಸಲಾಗುತ್ತಿದೆ ಎಂದಿದ್ದಾರೆ.</p><p>ಘಟಕದ ಪಟಾಕಿ ತಯಾರಿಕಾ ಕೇಂದ್ರದ ಒಂದು ಕೋಣೆಯಲ್ಲಿ ಸ್ಫೋಟ ಸಂಭವಿಸಿದ್ದು, ಕಟ್ಟಡದ ಛಾವಣಿ ಮತ್ತು ಇತರ ಭಾಗಗಳು ಕುಸಿದಿವೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಡಾ. ಅಖಿಲ್ ಚೌಧರಿ ಹೇಳಿದ್ದಾರೆ.</p><p>ಅವಶೇಷಗಳಡಿ ಹಲವು ಮಂದಿ ಸಿಲುಕಿದ್ದು, ಪೊಲೀಸರಿಗೆ ಮಾಹಿತಿ ಬಂದ ಕೂಡಲೇ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಯಿತು ಎಂದೂ ಎಸ್ಎಸ್ಪಿ ಹೇಳಿದ್ದಾರೆ.</p><p>ಪಟಾಕಿ ತಯಾರಿಕೆಗೆ ಬಳಸಿದ್ದ ವಸ್ತುಗಳಿಂದ ಸ್ಫೋಟ ಸಂಭವಿಸಿರುವ ಸಾಧ್ಯತೆ ಇದೆ. ತನಿಖೆ ಬಳಿಕ ಕಾರಣ ತಿಳಿದುಬರಲಿದೆ ಎಂದೂ ಅವರು ತಿಳಿಸಿದ್ದಾರೆ.</p><p>ಘಟನೆ ನಡೆದ ಸಮಯದಲ್ಲಿ ಘಟಕದಲ್ಲಿ40-50 ಕಾರ್ಮಿಕರಿದ್ದರು ಎಂದು ಡಿಎಸ್ಪಿ ಜಸ್ಪಾಲ್ ತಿಳಿಸಿದ್ದಾರೆ.</p><p>ಪಟಾಕಿ ಉತ್ಪಾದನಾ ಘಟಕವು ಕಾರ್ಯನಿರ್ವಹಿಸಲು ಅಗತ್ಯವಾದ ಅನುಮತಿಗಳನ್ನು ಹೊಂದಿದೆಯೇ ಎಂದು ಕೇಳಿದಾಗ, ಈ ಸಂಬಂಧ ದಾಖಲೆಗಳನ್ನು ಸಂಬಂಧಪಟ್ಟ ಇಲಾಖೆಯಿಂದ ಪರಿಶೀಲಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>