<p><strong>ಶ್ರೀನಗರ: </strong>ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಮಂಗಳವಾರ ಉಗ್ರಗಾಮಿಗಳು ಐವರು ಹೊರರಾಜ್ಯಗಳ ಕೂಲಿ ಕಾರ್ಮಿಕರನ್ನು ಹತ್ಯೆಗೈದಿದ್ದಾರೆ.</p>.<p>ಮೃತರಾದ ಐವರ ಪೈಕಿ ಮೂವರನ್ನು ಶೇಖ್ ಕಮರುದ್ದೀನ್, ಶೇಖ್ ಮೊಹಮದ್ ರಫೀಕ್ ಮತ್ತು ಶೇಖ್ ಮುರ್ನ್ಸ ಸುಲಿನ್ ಎಂದು ಗುರುತಿಸಲಾಗಿದೆ. ಗಾಯಾಳು ಝಹೂರುದ್ದೀನ್ ಅವರನ್ನು ಅನಂತನಾಗ್ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/killing-of-apple-traders-in-kashmir-676832.html" target="_blank">ಕೆಂಪು ಸೇಬು ಕೊಯ್ಲಿಗೆಂದು ಕಾಶ್ಮೀರಕ್ಕೆ ಬಂದವರು ಉಗ್ರರ ಗುಂಡಿಗೆ ಬಲಿಯಾದರು</a></p>.<p>ಸ್ಥಳಕ್ಕೆ ಧಾವಿಸಿದಪೊಲೀಸರು, ದಾಳಿ ನಡೆದ ಸ್ಥಳದಲ್ಲಿ ಹಲವು ಮೃತದೇಹಗಳು ಪತ್ತೆಯಾಗಿವೆ ಎಂದುಹೇಳಿದ್ದಾರೆ. ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಜಿಲ್ಲೆಯ ಸಾಗರ್ದಿಘಿ ಗ್ರಾಮದ ಕೂಲಿ ಕಾರ್ಮಿಕರು ಸ್ಥಳೀಯರೊಬ್ಬರ ಮನೆಯಲ್ಲಿ ವಾಸ್ತವ್ಯ ಹೂಡಿದ್ದರು.</p>.<p>ಇದಕ್ಕೂ ಮೊದಲು ಉಗ್ರರು ಅನಂತನಾಗ್ ಜಿಲ್ಲೆಯಲ್ಲಿ ಟ್ರಕ್ ಚಾಲಕನ ಮೇಲೆ ಗುಂಡಿನ ದಾಳಿ ನಡೆಸಿದ್ದರು. ನಂತರ ಸಪೋರ್ ಜಿಲ್ಲೆಯಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಸಾರ್ವಜನಿಕರತ್ತ ಗುಂಡು ಹಾರಿಸಿದ್ದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/countries-backing-india-will-be-hit-by-missile-677722.html" target="_blank">‘ಭಾರತವನ್ನು ಬೆಂಬಲಿಸಿದರೆ ಕ್ಷಿಪಣಿ ದಾಳಿ’ ಪಾಕ್ ಸಚಿವನ ಹೇಳಿಕೆ</a></p>.<p>ಪುಲ್ವಾಮಾದಲ್ಲಿ ಶಾಲೆಯೊಂದಕ್ಕೆ ಭದ್ರತೆ ಒದಗಿಸಿದ್ದ ಅರೆಸೇನಾ ಪಡೆಗಳ ಮೇಲೆಯೂ ಉಗ್ರರು ಮನಸೋಯಿಚ್ಛೆ ಗುಂಡು ಹಾರಿಸಿದ್ದರು.</p>.<p>ಕಾಶ್ಮೀರದಲ್ಲಿ ಸೇಬು ಕೊಯ್ಲಾಗುವ ಈ ಕಾಲದಲ್ಲಿ ಹೊರರಾಜ್ಯಗಳ ಕಾರ್ಮಿಕರು ಅಲ್ಲಿಗೆ ಹೋಗುವುದು ಪ್ರತಿವರ್ಷದ ವಾಡಿಕೆ. ಇದೇ ಮೊದಲ ಬಾರಿಗೆ ಉಗ್ರರು ಕೂಲಿ ಕಾರ್ಮಿಕರನ್ನು ಗುರಿಯಾಗಿಸಿ ದಾಳಿ ಸಂಘಟಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ: </strong>ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಮಂಗಳವಾರ ಉಗ್ರಗಾಮಿಗಳು ಐವರು ಹೊರರಾಜ್ಯಗಳ ಕೂಲಿ ಕಾರ್ಮಿಕರನ್ನು ಹತ್ಯೆಗೈದಿದ್ದಾರೆ.</p>.<p>ಮೃತರಾದ ಐವರ ಪೈಕಿ ಮೂವರನ್ನು ಶೇಖ್ ಕಮರುದ್ದೀನ್, ಶೇಖ್ ಮೊಹಮದ್ ರಫೀಕ್ ಮತ್ತು ಶೇಖ್ ಮುರ್ನ್ಸ ಸುಲಿನ್ ಎಂದು ಗುರುತಿಸಲಾಗಿದೆ. ಗಾಯಾಳು ಝಹೂರುದ್ದೀನ್ ಅವರನ್ನು ಅನಂತನಾಗ್ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/killing-of-apple-traders-in-kashmir-676832.html" target="_blank">ಕೆಂಪು ಸೇಬು ಕೊಯ್ಲಿಗೆಂದು ಕಾಶ್ಮೀರಕ್ಕೆ ಬಂದವರು ಉಗ್ರರ ಗುಂಡಿಗೆ ಬಲಿಯಾದರು</a></p>.<p>ಸ್ಥಳಕ್ಕೆ ಧಾವಿಸಿದಪೊಲೀಸರು, ದಾಳಿ ನಡೆದ ಸ್ಥಳದಲ್ಲಿ ಹಲವು ಮೃತದೇಹಗಳು ಪತ್ತೆಯಾಗಿವೆ ಎಂದುಹೇಳಿದ್ದಾರೆ. ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಜಿಲ್ಲೆಯ ಸಾಗರ್ದಿಘಿ ಗ್ರಾಮದ ಕೂಲಿ ಕಾರ್ಮಿಕರು ಸ್ಥಳೀಯರೊಬ್ಬರ ಮನೆಯಲ್ಲಿ ವಾಸ್ತವ್ಯ ಹೂಡಿದ್ದರು.</p>.<p>ಇದಕ್ಕೂ ಮೊದಲು ಉಗ್ರರು ಅನಂತನಾಗ್ ಜಿಲ್ಲೆಯಲ್ಲಿ ಟ್ರಕ್ ಚಾಲಕನ ಮೇಲೆ ಗುಂಡಿನ ದಾಳಿ ನಡೆಸಿದ್ದರು. ನಂತರ ಸಪೋರ್ ಜಿಲ್ಲೆಯಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಸಾರ್ವಜನಿಕರತ್ತ ಗುಂಡು ಹಾರಿಸಿದ್ದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/countries-backing-india-will-be-hit-by-missile-677722.html" target="_blank">‘ಭಾರತವನ್ನು ಬೆಂಬಲಿಸಿದರೆ ಕ್ಷಿಪಣಿ ದಾಳಿ’ ಪಾಕ್ ಸಚಿವನ ಹೇಳಿಕೆ</a></p>.<p>ಪುಲ್ವಾಮಾದಲ್ಲಿ ಶಾಲೆಯೊಂದಕ್ಕೆ ಭದ್ರತೆ ಒದಗಿಸಿದ್ದ ಅರೆಸೇನಾ ಪಡೆಗಳ ಮೇಲೆಯೂ ಉಗ್ರರು ಮನಸೋಯಿಚ್ಛೆ ಗುಂಡು ಹಾರಿಸಿದ್ದರು.</p>.<p>ಕಾಶ್ಮೀರದಲ್ಲಿ ಸೇಬು ಕೊಯ್ಲಾಗುವ ಈ ಕಾಲದಲ್ಲಿ ಹೊರರಾಜ್ಯಗಳ ಕಾರ್ಮಿಕರು ಅಲ್ಲಿಗೆ ಹೋಗುವುದು ಪ್ರತಿವರ್ಷದ ವಾಡಿಕೆ. ಇದೇ ಮೊದಲ ಬಾರಿಗೆ ಉಗ್ರರು ಕೂಲಿ ಕಾರ್ಮಿಕರನ್ನು ಗುರಿಯಾಗಿಸಿ ದಾಳಿ ಸಂಘಟಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>