ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ: ಮಕ್ಕಳ ಕಳ್ಳರೆಂದು ಅನುಮಾನಿಸಿ ಗ್ರಾಮಸ್ಥರಿಂದ ಐವರ ಹತ್ಯೆ

Last Updated 1 ಜುಲೈ 2018, 13:48 IST
ಅಕ್ಷರ ಗಾತ್ರ

ಧುಲೆ:ಮಕ್ಕಳ ಕಳ್ಳರು ಎಂದು ಅನುಮಾನಿಸಿ ಗ್ರಾಮಸ್ಥರು ಐವರನ್ನು ಬಡಿದು ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ ಭಾನುವಾರ ನಡೆದಿದೆ.

ಧುಲೆ ಜಿಲ್ಲೆಯ ರೈನ್ಪಾದ್‌ ಗ್ರಾಮದಲ್ಲಿ ಮಧ್ಯಾಹ್ನ ಈ ಘಟನೆ ನಡೆದಿದೆ.

ಮಕ್ಕಳ ಕಳ್ಳರು ಎಂದು ಶಂಕೆ ವ್ಯಕ್ತಪಡಿಸಿರುವ ಗ್ರಾಮಸ್ಥರು ಐವರನ್ನು ಬಡಿದು ಹತ್ಯೆ ಮಾಡಿದ್ದಾರೆ ಎಂದು ಧುಲೆ ಎಸ್ಪಿ ಎಂ.ರಾಮಕುಮಾರ್‌ ತಿಳಿಸಿದ್ದಾರೆ.

ಮೃತಪಟ್ಟವರ ಪೈಕಿ ಒಬ್ಬರು ವ್ಯಕ್ತಿ ಮಹಾರಾಷ್ಟ್ರದ ಸೊಲಾಪುರ ಜಿಲ್ಲೆಯ ಮಂಗಲ್ವೇದಾ ನಗರದ ನಿವಾಸಿ ಎಂದು ವರದಿಯಾಗಿದೆ.

ಇಂತಹದ್ದೇ ಘಟನೆ ಕಳೆದೆರೆಡು ದಿನಗಳ ಹಿಂದೆ ತ್ರಿಪುರ ರಾಜ್ಯದಲ್ಲಿ ನಡೆದಿದೆ. ಈ ಘಟನೆ ರಾಜಕೀಯ ವಾಗ್ವಾದಕ್ಕೂ ಕಾರಣವಾಗಿದೆ.
* ಇದನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT