<p class="title"><strong>ಬಲ್ಲಿಯಾ:</strong> ಉತ್ತರ ಪ್ರದೇಶದ ಮಾಲ್ದೆಪುರ ಗ್ರಾಮದ ಗಂಗಾ ನದಿಯಲ್ಲಿ ತೇಲಿಬಂದ ಶವವೊಂದಕ್ಕೆ ಪೆಟ್ರೋಲ್ ಮತ್ತು ಟೈರ್ ಬಳಸಿ ಅಂತ್ಯಸಂಸ್ಕಾರ ನೆರವೇರಿಸಿದ ಐವರು ಪೊಲೀಸ್ ಕಾನ್ಸ್ಟೇಬಲ್ಗಳನ್ನು ಅಮಾನತು ಮಾಡಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.</p>.<p class="bodytext">ಜೈಸಿಂಗ್, ಉಮೇಶ್ ಪ್ರಜಾಪತಿ, ವೀರೇಂದ್ರ ಯಾದವ್, ಪುನೀತ್ ಪಾಲ್ ಮತ್ತು ಜೈ ಅಮಾನತುಗೊಂಡ ಪೊಲೀಸ್ ಕಾನ್ಸ್ಟೇಬಲ್ಗಳು.</p>.<p class="bodytext">‘ಪೊಲೀಸರು ಮೃತದೇಹದ ಅಂತ್ಯಸಂಸ್ಕಾರವನ್ನು ನಡೆಸುತ್ತಿರುವ ವಿಡಿಯೊ ಸೋಮವಾರ ವೈರಲ್ ಆಗಿತ್ತು. ಅಂತಿಮ ವಿಧಿ–ವಿಧಾನಗಳನ್ನು ನೆರವೇರಿಸುವಾಗ ಪೊಲೀಸರು ಅಸೂಕ್ಷ್ಮತೆಯಿಂದ ವರ್ತಿಸಿದ್ದಾರೆ. ಈ ಸಂಬಂಧ ಐವರು ಪೊಲೀಸ್ ಕಾನ್ಸ್ಟೇಬಲ್ಗಳನ್ನು ಅಮಾನತುಗೊಳಿಸಲಾಗಿದ್ದು, ತನಿಖೆಗೆ ಆದೇಶಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಪಿನ್ ಟಾಡ ತಿಳಿಸಿದ್ದಾರೆ.</p>.<p class="bodytext">ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಂಜಯ್ ಯಾದವ್ ಅವರು ತನಿಖೆ ನಡೆಸಲಿದ್ದಾರೆ ಎಂದೂ ಅವರು ಮಾಹಿತಿ ನೀಡಿದ್ದಾರೆ.</p>.<p class="bodytext">ಗಂಗಾ ನದಿಯಲ್ಲಿ ತೇಲಿಕೊಂಡು ಬಂದಿದ್ದ ಶವಗಳ ಅಂತ್ಯಸಂಸ್ಕಾರವನ್ನು ಮೇ 15ರಂದು ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಶವಗಳ ಮೇಲೆ ಟೈರ್ ಇಟ್ಟು ಅದರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಅಂತ್ಯಸಂಸ್ಕಾರ ನಡೆಸಲಾಗಿತ್ತು ಎಂದು ಫೆಫಾನಾ ಪೊಲೀಸ್ ಠಾಣಾಧಿಕಾರಿ ಸಂಜಯ್ ತ್ರಿಪಾಠಿ ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಬಲ್ಲಿಯಾ:</strong> ಉತ್ತರ ಪ್ರದೇಶದ ಮಾಲ್ದೆಪುರ ಗ್ರಾಮದ ಗಂಗಾ ನದಿಯಲ್ಲಿ ತೇಲಿಬಂದ ಶವವೊಂದಕ್ಕೆ ಪೆಟ್ರೋಲ್ ಮತ್ತು ಟೈರ್ ಬಳಸಿ ಅಂತ್ಯಸಂಸ್ಕಾರ ನೆರವೇರಿಸಿದ ಐವರು ಪೊಲೀಸ್ ಕಾನ್ಸ್ಟೇಬಲ್ಗಳನ್ನು ಅಮಾನತು ಮಾಡಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.</p>.<p class="bodytext">ಜೈಸಿಂಗ್, ಉಮೇಶ್ ಪ್ರಜಾಪತಿ, ವೀರೇಂದ್ರ ಯಾದವ್, ಪುನೀತ್ ಪಾಲ್ ಮತ್ತು ಜೈ ಅಮಾನತುಗೊಂಡ ಪೊಲೀಸ್ ಕಾನ್ಸ್ಟೇಬಲ್ಗಳು.</p>.<p class="bodytext">‘ಪೊಲೀಸರು ಮೃತದೇಹದ ಅಂತ್ಯಸಂಸ್ಕಾರವನ್ನು ನಡೆಸುತ್ತಿರುವ ವಿಡಿಯೊ ಸೋಮವಾರ ವೈರಲ್ ಆಗಿತ್ತು. ಅಂತಿಮ ವಿಧಿ–ವಿಧಾನಗಳನ್ನು ನೆರವೇರಿಸುವಾಗ ಪೊಲೀಸರು ಅಸೂಕ್ಷ್ಮತೆಯಿಂದ ವರ್ತಿಸಿದ್ದಾರೆ. ಈ ಸಂಬಂಧ ಐವರು ಪೊಲೀಸ್ ಕಾನ್ಸ್ಟೇಬಲ್ಗಳನ್ನು ಅಮಾನತುಗೊಳಿಸಲಾಗಿದ್ದು, ತನಿಖೆಗೆ ಆದೇಶಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಪಿನ್ ಟಾಡ ತಿಳಿಸಿದ್ದಾರೆ.</p>.<p class="bodytext">ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಂಜಯ್ ಯಾದವ್ ಅವರು ತನಿಖೆ ನಡೆಸಲಿದ್ದಾರೆ ಎಂದೂ ಅವರು ಮಾಹಿತಿ ನೀಡಿದ್ದಾರೆ.</p>.<p class="bodytext">ಗಂಗಾ ನದಿಯಲ್ಲಿ ತೇಲಿಕೊಂಡು ಬಂದಿದ್ದ ಶವಗಳ ಅಂತ್ಯಸಂಸ್ಕಾರವನ್ನು ಮೇ 15ರಂದು ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಶವಗಳ ಮೇಲೆ ಟೈರ್ ಇಟ್ಟು ಅದರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಅಂತ್ಯಸಂಸ್ಕಾರ ನಡೆಸಲಾಗಿತ್ತು ಎಂದು ಫೆಫಾನಾ ಪೊಲೀಸ್ ಠಾಣಾಧಿಕಾರಿ ಸಂಜಯ್ ತ್ರಿಪಾಠಿ ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>