<p><strong>ಬುಡೌನ್ (ಉತ್ತರ ಪ್ರದೇಶ) (ಪಿಟಿಐ):</strong> ಜ್ವರದಿಂದ ಬಳಲುತ್ತಿದ್ದ ಐದು ವರ್ಷದ ಬಾಲಕಿ ಇಲ್ಲಿನ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಸೂಕ್ತ ಚಿಕಿತ್ಸೆ ದೊರೆಯದೆ ಮೃತಪಟ್ಟಿದ್ದಾಳೆ. ಚಿಕಿತ್ಸೆ ನೀಡಬೇಕಾದ ವೈದ್ಯರು ಮತ್ತು ಸಿಬ್ಬಂದಿ ಕ್ರಿಕೆಟ್ ಆಡುವುದಲ್ಲಿ ತಲ್ಲೀನರಾಗಿದ್ದ ಕಾರಣ ಮಗಳು ಅಸುನೀಗಿದ್ದಾಳೆ ಎಂದು ಬಾಲಕಿಯ ಪೋಷಕರು ಆರೋಪಿಸಿದ್ದಾರೆ.</p>.<p>ಈ ಆರೋಪಗಳ ಸಂಬಂಧ ತನಿಖೆ ನಡೆಸಲು ಮೂವರು ಸದಸ್ಯರ ಸಮಿತಿ ರಚಿಸಲಾಗಿದ್ದು, ಸಮಿತಿ ನೀಡುವ ವರದಿಯನ್ನು ಆಧರಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕಾಲೇಜಿನ ಪ್ರಾಚಾರ್ಯ ಪ್ರೊ. ಅರುಣ್ ಕುಮಾರ್ ತಿಳಿಸಿದ್ದಾರೆ.</p>.<p>ಮೃತ ಬಾಲಕಿಯನ್ನು ಸೋಫಿಯಾ ಎಂದು ಗುರುತಿಸಲಾಗಿದೆ. ಮಗಳಿಗೆ ಚಿಕಿತ್ಸೆ ಕೊಡಿಸಲು ಆಕೆಯ ತಂದೆ ನಜೀಂ ವೈದ್ಯಕೀಯ ಕಾಲೇಜಿಗೆ ಕರೆತಂದಿದ್ದರು. ಆ ವೇಳೆ ಆಸ್ಪತ್ರೆಯಲ್ಲಿ ಮಕ್ಕಳತಜ್ಞರು ಇರಲಿಲ್ಲ. ಕೆಲ ಸಿಬ್ಬಂದಿಯ ಸೂಚನೆ ಮೇರೆಗೆ ವಿವಿಧ ಕೊಠಡಿಗಳಲ್ಲಿ ವೈದ್ಯರಿಗಾಗಿ ಅಲೆದಾಡಬೇಕಾಯಿತು. ಕೆಲ ಹೊತ್ತಿನಲ್ಲಿಯೇ ಮಗಳು ಕೊನೆಯುಸಿರೆಳೆದಳು ಎಂದು ನಜೀಂ ದೂರಿದ್ದಾರೆ.</p>.<p>‘ನಾನು ಆಸ್ಪತ್ರೆಯಿಂದ ತೆರಳುತ್ತಿದ್ದಾಗ, ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ಕ್ರಿಕೆಟ್ ಆಡುವುದರಲ್ಲಿ ತಲ್ಲೀನರಾಗಿದ್ದದ್ದು ಕಂಡು ಬಂದಿತು’ ಎಂದು ನಜೀಂ ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬುಡೌನ್ (ಉತ್ತರ ಪ್ರದೇಶ) (ಪಿಟಿಐ):</strong> ಜ್ವರದಿಂದ ಬಳಲುತ್ತಿದ್ದ ಐದು ವರ್ಷದ ಬಾಲಕಿ ಇಲ್ಲಿನ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಸೂಕ್ತ ಚಿಕಿತ್ಸೆ ದೊರೆಯದೆ ಮೃತಪಟ್ಟಿದ್ದಾಳೆ. ಚಿಕಿತ್ಸೆ ನೀಡಬೇಕಾದ ವೈದ್ಯರು ಮತ್ತು ಸಿಬ್ಬಂದಿ ಕ್ರಿಕೆಟ್ ಆಡುವುದಲ್ಲಿ ತಲ್ಲೀನರಾಗಿದ್ದ ಕಾರಣ ಮಗಳು ಅಸುನೀಗಿದ್ದಾಳೆ ಎಂದು ಬಾಲಕಿಯ ಪೋಷಕರು ಆರೋಪಿಸಿದ್ದಾರೆ.</p>.<p>ಈ ಆರೋಪಗಳ ಸಂಬಂಧ ತನಿಖೆ ನಡೆಸಲು ಮೂವರು ಸದಸ್ಯರ ಸಮಿತಿ ರಚಿಸಲಾಗಿದ್ದು, ಸಮಿತಿ ನೀಡುವ ವರದಿಯನ್ನು ಆಧರಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕಾಲೇಜಿನ ಪ್ರಾಚಾರ್ಯ ಪ್ರೊ. ಅರುಣ್ ಕುಮಾರ್ ತಿಳಿಸಿದ್ದಾರೆ.</p>.<p>ಮೃತ ಬಾಲಕಿಯನ್ನು ಸೋಫಿಯಾ ಎಂದು ಗುರುತಿಸಲಾಗಿದೆ. ಮಗಳಿಗೆ ಚಿಕಿತ್ಸೆ ಕೊಡಿಸಲು ಆಕೆಯ ತಂದೆ ನಜೀಂ ವೈದ್ಯಕೀಯ ಕಾಲೇಜಿಗೆ ಕರೆತಂದಿದ್ದರು. ಆ ವೇಳೆ ಆಸ್ಪತ್ರೆಯಲ್ಲಿ ಮಕ್ಕಳತಜ್ಞರು ಇರಲಿಲ್ಲ. ಕೆಲ ಸಿಬ್ಬಂದಿಯ ಸೂಚನೆ ಮೇರೆಗೆ ವಿವಿಧ ಕೊಠಡಿಗಳಲ್ಲಿ ವೈದ್ಯರಿಗಾಗಿ ಅಲೆದಾಡಬೇಕಾಯಿತು. ಕೆಲ ಹೊತ್ತಿನಲ್ಲಿಯೇ ಮಗಳು ಕೊನೆಯುಸಿರೆಳೆದಳು ಎಂದು ನಜೀಂ ದೂರಿದ್ದಾರೆ.</p>.<p>‘ನಾನು ಆಸ್ಪತ್ರೆಯಿಂದ ತೆರಳುತ್ತಿದ್ದಾಗ, ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ಕ್ರಿಕೆಟ್ ಆಡುವುದರಲ್ಲಿ ತಲ್ಲೀನರಾಗಿದ್ದದ್ದು ಕಂಡು ಬಂದಿತು’ ಎಂದು ನಜೀಂ ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>