ಅರಾರಿಯಾ/ಬಿಹಾರ: ಗೋವು ಕಳ್ಳ ಎಂಬ ಅನುಮಾನದಿಂದ ವ್ಯಕ್ತಿಯೊಬ್ಬರ ಮೇಲೆ ಅಪರಿಚಿತ ಗುಂಪೊಂದು ಬಿಹಾರದ ಅರೆರಿಯಾ ಜಿಲ್ಲೆಯ ದಾಕ್ ಹರಿಪುರ ಗ್ರಾಮದ ಬಳಿ ಹಲ್ಲೆ ನಡೆಸಿ ಹತ್ಯೆಗೈದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ವ್ಯಕ್ತಿ ಅಚ್ರಾ ಗ್ರಾಮದ ನಿವಾಸಿ ಮಹೇಶ್ ಯಾದವ್ (50) ಎಂದು ತಿಳಿದು ಬಂದಿದೆ.ಕೇವಲ ಐದು ತಿಂಗಳಲ್ಲಿ ನಡೆದ ಎರಡನೇ ಘಟನೆ ಇದಾಗಿದೆ.
ಮಹೇಶ್ ಯಾದವ್ ತನ್ನ ಇಬ್ಬರು ಸಹಚರರೊಂದಿಗೆ ಗೋವು ಕದಿಯಲು ಬಂದಿದ್ದಾರೆ ಎಂದು ಆರೋಪಿಸಿಹರಿಪುರ ಗ್ರಾಮಸ್ಥರು ಹಲ್ಲೆ ನಡೆಸಿ ಹತ್ಯೆಗೈದಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಶಿವ ಶರಣ್ ಶಾ ತಿಳಿಸಿದ್ದಾರೆ.
ಈ ಘಟನೆ ಸಂಬಂಧ ಅಪರಿಚಿತ ವ್ಯಕ್ತಿಗಳ ಮೇಲೆಎಫ್ಐಆರ್ ದಾಖಲಿಸಲಾಗಿದೆ ಎಂದು ಫಾರ್ಬೇಸ್ಗಂಜ್ ಉಪವಿಭಾಗದ ಪೊಲೀಸ್ ಅಧಿಕಾರಿ ಮನೋಜ್ ಕುಮಾರ್ ತಿಳಿಸಿದ್ದಾರೆ.