<p><strong>ನವದೆಹಲಿ</strong>: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ನೇತೃತ್ವದ ಸರ್ಕಾರ 2018ರ ಮದರಸಾ ರಜೆಗಳ ಸಂಖ್ಯೆಯನ್ನು ಕಡಿತಗೊಳಿಸಿದೆ.</p>.<p>ರಜೆಗಳ ಪಟ್ಟಿಯನ್ನು ಸರ್ಕಾರಕ್ಕೆ ಸಲ್ಲಿಸಿದ ಉತ್ತರ ಪ್ರದೇಶದ ಮದರಸಾ ಸಮಿತಿಯ ರೆಜಿಸ್ಟ್ರಾರ್ ರಾಹುಲ್ ಗುಪ್ತಾ ಅವರು, ‘ಅನ್ಯ ಧರ್ಮೀಯ ಹಬ್ಬಗಳಾದ ದೀಪಾವಳಿ, ಕ್ರಿಸ್ಮಸ್, ದಸರಾ, ಮಹಾವೀರ ಜಯಂತಿ, ಬುದ್ಧ ಪೂರ್ಣಿಮಾ ರಕ್ಷಾ ಬಂಧನ ಹಬ್ಬಗಳಿಗೆ ಹೆಚ್ಚುವರಿ ರಜೆಯನ್ನು ನೀಡಲಾಗಿದೆ’ ಎಂದಿದ್ದಾರೆ.</p>.<p>ಅಲ್ಲದೇ ಈ ಮೊದಲು ರಂಜಾನ್ ಹಬ್ಬಕ್ಕೆ 46 ದಿನಗಳ ಕಾಲ ರಜೆಗಳನ್ನು ನೀಡಲಾಗುತ್ತಿತ್ತು. ಇದೀಗ 42ಕ್ಕೆ ಕಡಿತಗೊಳಿಸಲಾಗಿದೆ ಎಂದು ಹೇಳಿದ್ದಾರೆ.</p>.<p>ಹೊಸ ಕ್ಯಾಲೆಂಡರ್ ಪ್ರಕಾರ, ಈ ಮೊದಲು ರಂಜಾನ್ ಆರಂಭವಾಗುವ ಎರಡು ದಿನ ಮುಂಚಿತವಾಗಿ ರಜೆಯನ್ನು ಕೊಡಲಾಗುತ್ತಿತ್ತು. ಇದರಿಂದ ಊರಿಗೆ ಹೋಗುವ ಗುರುಗಳು ಹಾಗೂ ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ತಮ್ಮ ಊರುಗಳನ್ನು ತಲುಪುದು ಕಷ್ಟವಾಗುತ್ತಿತ್ತು. ಹಾಗಾಗಿ ಈ ಬಾರಿಯಿಂದ 10 ದಿನಗಳ ಮೊದಲೇ ರಜೆಯನ್ನು ನೀಡಲಾಗುತ್ತಿದೆ ಎಂದಿದ್ದಾರೆ.</p>.<p>ರಾಜ್ಯ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಚೌಧರಿ ಲಕ್ಷ್ಮೀ ನಾರಾಯಣ್ , ‘ಈ ಹೊಸ ಕ್ಯಾಲೆಂಡರ್ನ ನಿಯಮ ಎಲ್ಲಾ ಸಮಿತಿ, ವಿಶ್ವವಿದ್ಯಾನಿಲಯ, ಮದರಸಾಗಳಿಗೆ ಅನ್ವಯವಾಗಲಿದೆ. ಇದು ವಿದ್ಯಾರ್ಥಿಗಳ ಅಭಿಪ್ರಾಯ ಅನುಸಾರ ಮಾಡಲಾಗಿರುವ ಕ್ಯಾಲೆಂಡರ್’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ನೇತೃತ್ವದ ಸರ್ಕಾರ 2018ರ ಮದರಸಾ ರಜೆಗಳ ಸಂಖ್ಯೆಯನ್ನು ಕಡಿತಗೊಳಿಸಿದೆ.</p>.<p>ರಜೆಗಳ ಪಟ್ಟಿಯನ್ನು ಸರ್ಕಾರಕ್ಕೆ ಸಲ್ಲಿಸಿದ ಉತ್ತರ ಪ್ರದೇಶದ ಮದರಸಾ ಸಮಿತಿಯ ರೆಜಿಸ್ಟ್ರಾರ್ ರಾಹುಲ್ ಗುಪ್ತಾ ಅವರು, ‘ಅನ್ಯ ಧರ್ಮೀಯ ಹಬ್ಬಗಳಾದ ದೀಪಾವಳಿ, ಕ್ರಿಸ್ಮಸ್, ದಸರಾ, ಮಹಾವೀರ ಜಯಂತಿ, ಬುದ್ಧ ಪೂರ್ಣಿಮಾ ರಕ್ಷಾ ಬಂಧನ ಹಬ್ಬಗಳಿಗೆ ಹೆಚ್ಚುವರಿ ರಜೆಯನ್ನು ನೀಡಲಾಗಿದೆ’ ಎಂದಿದ್ದಾರೆ.</p>.<p>ಅಲ್ಲದೇ ಈ ಮೊದಲು ರಂಜಾನ್ ಹಬ್ಬಕ್ಕೆ 46 ದಿನಗಳ ಕಾಲ ರಜೆಗಳನ್ನು ನೀಡಲಾಗುತ್ತಿತ್ತು. ಇದೀಗ 42ಕ್ಕೆ ಕಡಿತಗೊಳಿಸಲಾಗಿದೆ ಎಂದು ಹೇಳಿದ್ದಾರೆ.</p>.<p>ಹೊಸ ಕ್ಯಾಲೆಂಡರ್ ಪ್ರಕಾರ, ಈ ಮೊದಲು ರಂಜಾನ್ ಆರಂಭವಾಗುವ ಎರಡು ದಿನ ಮುಂಚಿತವಾಗಿ ರಜೆಯನ್ನು ಕೊಡಲಾಗುತ್ತಿತ್ತು. ಇದರಿಂದ ಊರಿಗೆ ಹೋಗುವ ಗುರುಗಳು ಹಾಗೂ ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ತಮ್ಮ ಊರುಗಳನ್ನು ತಲುಪುದು ಕಷ್ಟವಾಗುತ್ತಿತ್ತು. ಹಾಗಾಗಿ ಈ ಬಾರಿಯಿಂದ 10 ದಿನಗಳ ಮೊದಲೇ ರಜೆಯನ್ನು ನೀಡಲಾಗುತ್ತಿದೆ ಎಂದಿದ್ದಾರೆ.</p>.<p>ರಾಜ್ಯ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಚೌಧರಿ ಲಕ್ಷ್ಮೀ ನಾರಾಯಣ್ , ‘ಈ ಹೊಸ ಕ್ಯಾಲೆಂಡರ್ನ ನಿಯಮ ಎಲ್ಲಾ ಸಮಿತಿ, ವಿಶ್ವವಿದ್ಯಾನಿಲಯ, ಮದರಸಾಗಳಿಗೆ ಅನ್ವಯವಾಗಲಿದೆ. ಇದು ವಿದ್ಯಾರ್ಥಿಗಳ ಅಭಿಪ್ರಾಯ ಅನುಸಾರ ಮಾಡಲಾಗಿರುವ ಕ್ಯಾಲೆಂಡರ್’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>