<p><strong>ಚೆನ್ನೈ: </strong>ತಮಿಳುನಾಡಿನ ಆರ್.ಕೆ.ನಗರ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಟಿಟಿವಿ ದಿನಕರನ್ ಹಣಬಲದಿಂದ ಗೆದ್ದಿದ್ದಾರೆ ಎಂದು ನಟ ಕಮಲ್ ಹಾಸನ್ ಆರೋಪಿಸಿದ್ದಾರೆ.</p>.<p>ವಾರ ಪತ್ರಿಕೆಯೊಂದಕ್ಕೆ ಬರೆದಿರುವ ಲೇಖನದಲ್ಲಿ, ಆರ್.ಕೆ.ನಗರ ಕ್ಷೇತ್ರದ್ದು ‘ಖರೀದಿಸಿದ ಗೆಲುವು’. ಮತದಾರರಿಗೆ ಹಣ ಹಂಚಿ, ಗೆಲುವು ಪಡೆಯಲಾಗಿದೆ. ಭಾರತದ ಪ್ರಜಾಪ್ರಭುತ್ವದಲ್ಲಿ ಈ ಉಪಚುನಾವಣೆ ಒಂದು ಕಪ್ಪು ಚುಕ್ಕೆ ಎಂದು ಬಣ್ಣಿಸಿದ್ದಾರೆ.</p>.<p>ಪಕ್ಷೇತರ ಅಭ್ಯರ್ಥಿ ಮತ್ತು ಆಡಳಿತಾರೂಢ ಪಕ್ಷದ ಅಭ್ಯರ್ಥಿಗಳಿಬ್ಬರೂ ಮತದಾರರಿಗೆ ಇಂತಿಷ್ಟು ಎಂದು ಬೆಲೆ ನಿಗದಿಪಡಿಸಿದ್ದರು ಎಂದು ಆರೋಪಿಸಿದ್ದಾರೆ. ಅಲ್ಲದೆ, ಮತದಾರರಿಗೆ ‘ನೀವು ಮಾರಾಟವಾಗಿದ್ದೀರಿ’ ಎಂದಿದ್ದಾರೆ.</p>.<p>ಕಮಲ್ ಹಾಸನ್ ಆರೋಪಕ್ಕೆ ಪ್ರತಿಕ್ರಿಯಿಸಿರುವ ಶಾಸಕ ದಿನಕರನ್, ‘ನನ್ನ ಗೆಲುವನ್ನು ಸಹಿಸಲಾಗದೆ ಇಂತಹ ಆರೋಪ ಮಾಡುತ್ತಿದ್ದಾರೆ. ಇದು ಆರ್.ಕೆ. ನಗರ ಕ್ಷೇತ್ರದ ಮತದಾರರಿಗೆ ಮಾಡಿದ ಅವಮಾನ’ ಎಂದಿದ್ದಾರೆ. ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಸಾವಿನಿಂದಾಗಿ ಉಪಚುನಾವಣೆ ನಡೆದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ: </strong>ತಮಿಳುನಾಡಿನ ಆರ್.ಕೆ.ನಗರ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಟಿಟಿವಿ ದಿನಕರನ್ ಹಣಬಲದಿಂದ ಗೆದ್ದಿದ್ದಾರೆ ಎಂದು ನಟ ಕಮಲ್ ಹಾಸನ್ ಆರೋಪಿಸಿದ್ದಾರೆ.</p>.<p>ವಾರ ಪತ್ರಿಕೆಯೊಂದಕ್ಕೆ ಬರೆದಿರುವ ಲೇಖನದಲ್ಲಿ, ಆರ್.ಕೆ.ನಗರ ಕ್ಷೇತ್ರದ್ದು ‘ಖರೀದಿಸಿದ ಗೆಲುವು’. ಮತದಾರರಿಗೆ ಹಣ ಹಂಚಿ, ಗೆಲುವು ಪಡೆಯಲಾಗಿದೆ. ಭಾರತದ ಪ್ರಜಾಪ್ರಭುತ್ವದಲ್ಲಿ ಈ ಉಪಚುನಾವಣೆ ಒಂದು ಕಪ್ಪು ಚುಕ್ಕೆ ಎಂದು ಬಣ್ಣಿಸಿದ್ದಾರೆ.</p>.<p>ಪಕ್ಷೇತರ ಅಭ್ಯರ್ಥಿ ಮತ್ತು ಆಡಳಿತಾರೂಢ ಪಕ್ಷದ ಅಭ್ಯರ್ಥಿಗಳಿಬ್ಬರೂ ಮತದಾರರಿಗೆ ಇಂತಿಷ್ಟು ಎಂದು ಬೆಲೆ ನಿಗದಿಪಡಿಸಿದ್ದರು ಎಂದು ಆರೋಪಿಸಿದ್ದಾರೆ. ಅಲ್ಲದೆ, ಮತದಾರರಿಗೆ ‘ನೀವು ಮಾರಾಟವಾಗಿದ್ದೀರಿ’ ಎಂದಿದ್ದಾರೆ.</p>.<p>ಕಮಲ್ ಹಾಸನ್ ಆರೋಪಕ್ಕೆ ಪ್ರತಿಕ್ರಿಯಿಸಿರುವ ಶಾಸಕ ದಿನಕರನ್, ‘ನನ್ನ ಗೆಲುವನ್ನು ಸಹಿಸಲಾಗದೆ ಇಂತಹ ಆರೋಪ ಮಾಡುತ್ತಿದ್ದಾರೆ. ಇದು ಆರ್.ಕೆ. ನಗರ ಕ್ಷೇತ್ರದ ಮತದಾರರಿಗೆ ಮಾಡಿದ ಅವಮಾನ’ ಎಂದಿದ್ದಾರೆ. ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಸಾವಿನಿಂದಾಗಿ ಉಪಚುನಾವಣೆ ನಡೆದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>