ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌ಎಸ್‌ಎಸ್‌ ಕಚೇರಿ ಮೇಲಿನ ದಾಳಿ ಪ್ರಕರಣ: ಆರೋಪಿ ಬಂಧನ

Last Updated 5 ಜನವರಿ 2018, 19:30 IST
ಅಕ್ಷರ ಗಾತ್ರ

ನವದೆಹಲಿ: ಚೆನ್ನೈನ ಚೆಟ್‌ಪುಟ್‌ ನಗರದಲ್ಲಿರುವ ಆರ್‌ಎಸ್‌ಎಸ್‌ ಕೇಂದ್ರ ಕಚೇರಿ ಮೇಲೆ 1993ರಲ್ಲಿ ನಡೆದಿದ್ದ ಬಾಂಬ್‌ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಷ್ತಾಕ್‌ ಅಹಮದ್‌ (56) ಎಂಬಾತನನ್ನು ಸಿಬಿಐ ಶುಕ್ರವಾರ ಬಂಧಿಸಿದೆ.

ಮುಷ್ತಾಕ್‌ಗಾಗಿ ಕಳೆದ 24 ವರ್ಷಗಳಿಂದ ಹುಡುಕಾಟ ನಡೆದಿತ್ತು. ಶುಕ್ರವಾರ ಮುಂಜಾನೆ ಚೆನ್ನೈ ನಗರದ ಹೊರವಲಯದಲ್ಲಿ ಆತನನ್ನು ಬಂಧಿಸಲಾಯಿತು ಎಂದು ಸಿಬಿಐ ವಕ್ತಾರ ಅಭಿಷೇಕ್‌ ದಯಾಳ್‌ ತಿಳಿಸಿದ್ದಾರೆ.

1993ರ ಆಗಸ್ಟ್‌ 8ರಂದು ನಡೆದಿದ್ದ ದಾಳಿಯಲ್ಲಿ 11 ಜನ ಮೃತಪಟ್ಟಿದ್ದರು. ಆರ್‌ಡಿಎಕ್ಸ್‌ ಬಳಸಿ ಬಹುಮಹಡಿ ಕಟ್ಟಡವನ್ನು ಧ್ವಂಸ
ಗೊಳಿಸಲಾಗಿತ್ತು. ಪ್ರಕರಣದ ಪ್ರಮುಖ ಆರೋಪಿ ಮುಷ್ತಾಕ್‌ ಬಗ್ಗೆ ಮಾಹಿತಿ ನೀಡುವವರಿಗೆ ₹ 10 ಲಕ್ಷ ಬಹುಮಾನ ಘೋಷಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT