<p><strong>ಧರ್ಬಾ: </strong>ತಮ್ಮ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡುತ್ತಿದ್ದ ಅನುಮಾನದಿಂದ ಇಲ್ಲಿನ ಸರಪಂಚ್ ಅನ್ನು ನಕ್ಸಲರು ಹತ್ಯೆ ಮಾಡಿದ್ದಾರೆ. ಧರ್ಬಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪಂದ್ರು ಹತ್ಯೆಯಾದವರು.</p>.<p>ನಕ್ಸಲರಿಂದ ಪ್ರಾಣ ಬೆದರಿಕೆ ಇದ್ದ ಕಾರಣ ಭದ್ರತಾ ಶಿಬಿರದಲ್ಲಿ ಉಳಿದುಕೊಳ್ಳುವಂತೆ ಪೊಲೀಸರು ನೀಡಿದ್ದ ಸಲಹೆಯನ್ನು ಪಂದ್ರು ನಿರಾಕರಿಸಿದ್ದ ಎನ್ನಲಾಗಿದೆ.</p>.<p>ಪ್ರಕರಣ ಕುರಿತು ಪ್ರತಿಕ್ರಿಯಿಸಿರುವ ಬಸ್ತಾರ್ ಜಿಲ್ಲೆಯ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ ಆರೀಫ್ ಶೇಖ್, ‘ಕೊಲೆಂಗ್ ಶಿಬಿರದಲ್ಲಿ ಉಳಿದುಕೊಳ್ಳುವಂತೆ ನೀಡಿದ್ದ ಸಲಹೆಯನ್ನು ಪಂದ್ರು ನಿರಾಕರಿಸಿದ್ದ. ಹೀಗಾಗಿ ನಕ್ಸಲರು ಕೊಲೆ ಮಾಡಿದ್ದಾರೆ’ ಎಂದು ಹೇಳಿದ್ದಾರೆ.</p>.<p>ಜಿಲ್ಲಾ ಮೀಸಲು ಪಡೆ(ಡಿಆರ್ಜಿ) ಕೊಲೆಂಗ್ ಶಿಬಿರದಿಂದ ವಾಪಸ್ ಆಗಿದ್ದು, ಕೇಂದ್ರೀಯ ಮೀಸಲು ಪೊಲೀಸ್ ಪಡೆ(ಸಿಆರ್ಪಿಎಫ್) ಜತೆ ಕಾರ್ಯ ನಿರ್ವಹಿಸಲಿದೆ. ಪೊಲೀಸರು ಹಾಗೂ ಭದ್ರತಾ ಪಡೆಗಳು ಜಂಟಿಯಾಗಿ ನಕ್ಸಲರ ವಿರುದ್ಧ ಕ್ಷಿಪ್ರ ಕಾರ್ಯಾಚರಣೆ ನಡೆಸಲಿವೆ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧರ್ಬಾ: </strong>ತಮ್ಮ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡುತ್ತಿದ್ದ ಅನುಮಾನದಿಂದ ಇಲ್ಲಿನ ಸರಪಂಚ್ ಅನ್ನು ನಕ್ಸಲರು ಹತ್ಯೆ ಮಾಡಿದ್ದಾರೆ. ಧರ್ಬಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪಂದ್ರು ಹತ್ಯೆಯಾದವರು.</p>.<p>ನಕ್ಸಲರಿಂದ ಪ್ರಾಣ ಬೆದರಿಕೆ ಇದ್ದ ಕಾರಣ ಭದ್ರತಾ ಶಿಬಿರದಲ್ಲಿ ಉಳಿದುಕೊಳ್ಳುವಂತೆ ಪೊಲೀಸರು ನೀಡಿದ್ದ ಸಲಹೆಯನ್ನು ಪಂದ್ರು ನಿರಾಕರಿಸಿದ್ದ ಎನ್ನಲಾಗಿದೆ.</p>.<p>ಪ್ರಕರಣ ಕುರಿತು ಪ್ರತಿಕ್ರಿಯಿಸಿರುವ ಬಸ್ತಾರ್ ಜಿಲ್ಲೆಯ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ ಆರೀಫ್ ಶೇಖ್, ‘ಕೊಲೆಂಗ್ ಶಿಬಿರದಲ್ಲಿ ಉಳಿದುಕೊಳ್ಳುವಂತೆ ನೀಡಿದ್ದ ಸಲಹೆಯನ್ನು ಪಂದ್ರು ನಿರಾಕರಿಸಿದ್ದ. ಹೀಗಾಗಿ ನಕ್ಸಲರು ಕೊಲೆ ಮಾಡಿದ್ದಾರೆ’ ಎಂದು ಹೇಳಿದ್ದಾರೆ.</p>.<p>ಜಿಲ್ಲಾ ಮೀಸಲು ಪಡೆ(ಡಿಆರ್ಜಿ) ಕೊಲೆಂಗ್ ಶಿಬಿರದಿಂದ ವಾಪಸ್ ಆಗಿದ್ದು, ಕೇಂದ್ರೀಯ ಮೀಸಲು ಪೊಲೀಸ್ ಪಡೆ(ಸಿಆರ್ಪಿಎಫ್) ಜತೆ ಕಾರ್ಯ ನಿರ್ವಹಿಸಲಿದೆ. ಪೊಲೀಸರು ಹಾಗೂ ಭದ್ರತಾ ಪಡೆಗಳು ಜಂಟಿಯಾಗಿ ನಕ್ಸಲರ ವಿರುದ್ಧ ಕ್ಷಿಪ್ರ ಕಾರ್ಯಾಚರಣೆ ನಡೆಸಲಿವೆ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>