<p><strong>ತಿರುಪತಿ:</strong> ಇಲ್ಲಿನ ವೆಂಕಟೇಶ್ವರ ದೇವಾಲಯದ ಬೇರೆ ಬೇರೆ ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದೂಯೇತರ ಸಿಬ್ಬಂದಿ ವರ್ಗಾವಣೆಗೆ ತಿರುಮಲ ತಿರುಪತಿ ದೇವಸ್ಥಾನಮ್(ಟಿಟಿಡಿ) ಸಮಿತಿ ಚಿಂತಿಸಿದೆ.</p>.<p>ದೇವಾಲಯದಲ್ಲಿರುವ ಸುಮಾರು 44 ಕಾರ್ಯಕರ್ತರು ದೇವಾಲಯದ ಮಾರ್ಗದರ್ಶಿ ಸೂತ್ರಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿರುವ ಸಮಿತಿಯು ವರ್ಗಾವಣೆ ಬಗ್ಗೆ ಸಮಜಾಯಿಷಿ ನೀಡಿದೆ.</p>.<p>‘ಈ ಬಗ್ಗೆ ಸಮಿತಿಯು ಈಗಾಗಲೇ ಕಾರ್ಯಕರ್ತರಿಗೆ ನೋಟಿಸ್ ನೀಡಿದ್ದು, ವಿವರಣೆ ಕೇಳಿದ್ದೇವೆ’ ಎಂದು ಟಿಟಿಡಿ ಸಮಿತಿಯ ಕಾರ್ಯನಿರ್ವಾಹಕ ಅಧಿಕಾರಿ ಅನಿಲ್ ಕುಮಾರ್ ಸಿಂಘಾಲ್ ಹೇಳಿದ್ದಾರೆ.</p>.<p>ದೇವಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಟಿಟಿಡಿಯ ಮಹಿಳಾ ಸದಸ್ಯೆಯೊಬ್ಬರು ಪ್ರತಿದಿನ ಚರ್ಚ್ಗೆ ಹೋಗಿ ಪ್ರಾರ್ಥನೆ ಸಲ್ಲಿಸುತ್ತಿರುವ ಅಂಶ ಬಹಿರಂಗಗೊಂಡ ನಂತರ ಸಮಿತಿ ಈ ನಿರ್ಧಾರಕ್ಕೆ ಬಂದಿದೆ ಎಂದು ತಿಳಿದು ಬಂದಿದೆ.</p>.<p>’ದೇವಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರತಿಯೊಬ್ಬರು <strong>ತಿರು ನಾಮಮ್</strong> ಹಾಕಬೇಕು ಎಂಬ ನಿಯಮವಿದೆ. ತಿರು ನಾಮಮ್ ಹಿಂದೂ ಸಂಸ್ಕೃತಿಯ ಸಂಕೇತವಾಗಿದೆ. ಹಿಂದೂ ಧರ್ಮದಲ್ಲಿ ನಂಬಿಕೆ ಇರುವವರು ಮಾತ್ರ ಇದನ್ನು ಹಾಕುತ್ತಾರೆ’ ಎಂದು ಟಿಟಿಡಿ ವಕ್ತಾರ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುಪತಿ:</strong> ಇಲ್ಲಿನ ವೆಂಕಟೇಶ್ವರ ದೇವಾಲಯದ ಬೇರೆ ಬೇರೆ ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದೂಯೇತರ ಸಿಬ್ಬಂದಿ ವರ್ಗಾವಣೆಗೆ ತಿರುಮಲ ತಿರುಪತಿ ದೇವಸ್ಥಾನಮ್(ಟಿಟಿಡಿ) ಸಮಿತಿ ಚಿಂತಿಸಿದೆ.</p>.<p>ದೇವಾಲಯದಲ್ಲಿರುವ ಸುಮಾರು 44 ಕಾರ್ಯಕರ್ತರು ದೇವಾಲಯದ ಮಾರ್ಗದರ್ಶಿ ಸೂತ್ರಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿರುವ ಸಮಿತಿಯು ವರ್ಗಾವಣೆ ಬಗ್ಗೆ ಸಮಜಾಯಿಷಿ ನೀಡಿದೆ.</p>.<p>‘ಈ ಬಗ್ಗೆ ಸಮಿತಿಯು ಈಗಾಗಲೇ ಕಾರ್ಯಕರ್ತರಿಗೆ ನೋಟಿಸ್ ನೀಡಿದ್ದು, ವಿವರಣೆ ಕೇಳಿದ್ದೇವೆ’ ಎಂದು ಟಿಟಿಡಿ ಸಮಿತಿಯ ಕಾರ್ಯನಿರ್ವಾಹಕ ಅಧಿಕಾರಿ ಅನಿಲ್ ಕುಮಾರ್ ಸಿಂಘಾಲ್ ಹೇಳಿದ್ದಾರೆ.</p>.<p>ದೇವಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಟಿಟಿಡಿಯ ಮಹಿಳಾ ಸದಸ್ಯೆಯೊಬ್ಬರು ಪ್ರತಿದಿನ ಚರ್ಚ್ಗೆ ಹೋಗಿ ಪ್ರಾರ್ಥನೆ ಸಲ್ಲಿಸುತ್ತಿರುವ ಅಂಶ ಬಹಿರಂಗಗೊಂಡ ನಂತರ ಸಮಿತಿ ಈ ನಿರ್ಧಾರಕ್ಕೆ ಬಂದಿದೆ ಎಂದು ತಿಳಿದು ಬಂದಿದೆ.</p>.<p>’ದೇವಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರತಿಯೊಬ್ಬರು <strong>ತಿರು ನಾಮಮ್</strong> ಹಾಕಬೇಕು ಎಂಬ ನಿಯಮವಿದೆ. ತಿರು ನಾಮಮ್ ಹಿಂದೂ ಸಂಸ್ಕೃತಿಯ ಸಂಕೇತವಾಗಿದೆ. ಹಿಂದೂ ಧರ್ಮದಲ್ಲಿ ನಂಬಿಕೆ ಇರುವವರು ಮಾತ್ರ ಇದನ್ನು ಹಾಕುತ್ತಾರೆ’ ಎಂದು ಟಿಟಿಡಿ ವಕ್ತಾರ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>