<p><strong>ರಾಂಚಿ: </strong>ಮೇವು ಹಗರಣದ ತಪ್ಪಿತಸ್ಥ ಹಾಗೂ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯ ಮೂರೂವರೆ ವರ್ಷ ಜೈಲು ಶಿಕ್ಷೆ ಮತ್ತು ₹ 5 ಲಕ್ಷ ದಂಡ ವಿಧಿಸಿದೆ.</p>.<p>ಒಟ್ಟು 16 ತಪ್ಪಿತಸ್ಥರ ವಿಚಾರಣೆ ಪೂರ್ಣಗೊಳಿಸಿದ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಶಿವಪಾಲ್ ಸಿಂಗ್ ಅವರು ಶನಿವಾರ ಶಿಕ್ಷೆ ಪ್ರಮಾಣ ಪ್ರಕಟಿಸಿದರು.</p>.<p>‘2014ರಲ್ಲಿ ಲಾಲು ಅವರಿಗೆ ಹೃದಯ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಮೇವು ಹಗರಣಕ್ಕೆ ಸಂಬಂಧಿಸಿದಂತೆ 21 ವರ್ಷಗಳಿಂದ ವಿಚಾರಣೆ ಎದುರಿಸುತ್ತಿದ್ದಾರೆ. ಹಲವು ಬಾರಿ ಜೈಲಿನಲ್ಲಿದ್ದರು. ಹಾಗಾಗಿ ಅವರ ಬಗ್ಗೆ ಔದಾರ್ಯ ತೋರಿ, ಕಡಿಮೆ ಶಿಕ್ಷೆ ವಿಧಿಸಬೇಕು’ ಎಂದು ಲಾಲು ಪರ ವಕೀಲರು ಕೋರಿದ್ದರು.</p>.<p>ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಸಿಬಿಐ ವಕೀಲರು, ಲಾಲು ಪ್ರಸಾದ್ ಅವರ ಆರೋಗ್ಯ ಉತ್ತಮವಾಗಿದ್ದು, ಈಚೆಗೆ ರಾಜಕೀಯ ರ್ಯಾಲಿಗಳಲ್ಲಿ ಭಾಗವಹಿಸಿದ್ದರು. ಅವರಿಗೆ ಗರಿಷ್ಠ ಶಿಕ್ಷೆ ವಿಧಿಸುವಂತೆ ಮನವಿ ಮಾಡಿದ್ದರು.<br /> <br /> <strong>ಮೇವು ಹಗರಣ: ಅಂದಿನಿಂದ ಇಂದಿನವರೆಗೆ</strong></p>.<p><strong>ಜನವರಿ, 1996: </strong>ಚಾಯಿಬಾಸಾ ಜಿಲ್ಲಾಧಿಕಾರಿಯಾಗಿದ್ದ ಅಮಿತ್ ಖರೆ ಅವರು ಪಶುಸಂಗೋಪನಾ ಇಲಾಖೆಯಲ್ಲಿ ತಪಾಸಣೆ ನಡೆಸಿದಾಗ ಮೇವು ಹಗರಣ ಬಯಲಿಗೆ. ಶೋಧಕಾರ್ಯದ ವೇಳೆ ವಶಪಡಿಸಿಕೊಳ್ಳಲಾಗಿದ್ದ ದಾಖಲೆಗಳು ಹಗರಣ ನಡೆದಿರುವ ಬಗ್ಗೆ ಪುರಾವೆ ಒದಗಿಸಿತ್ತು</p>.<p><strong>ಮಾರ್ಚ್, 1996: </strong>ಮೇವು ಹಗರಣದ ತನಿಖೆ ನಡೆಸುವಂತೆ ಸಿಬಿಐಗೆ ಸೂಚಿಸಿದ ಪಟ್ನಾ ಹೈಕೋರ್ಟ್. ತೀರ್ಪಿನ ಅನುಸಾರ ಚಾಯಿಬಾಸಾ (ಅವಿಭಜಿತ ಬಿಹಾರ) ಖಜಾನೆಯಿಂದ ಹಣ ಪಡೆದ ಪ್ರಕರಣದಲ್ಲಿ ಎಫ್ಐಆರ್ ದಾಖಲು</p>.<p><strong>ಜೂನ್, 1997: </strong>ಆರೋಪಪಟ್ಟಿ ಸಲ್ಲಿಸಿದ ಸಿಬಿಐ. ಆರೋಪಿಗಳಲ್ಲಿ ಒಬ್ಬರಾಗಿ ಲಾಲು ಪ್ರಸಾದ್ ಹೆಸರು ದಾಖಲು</p>.<p><strong>ಜುಲೈ, 1997: </strong>ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ ಲಾಲು. ಪತ್ನಿ ರಾಬ್ಡಿದೇವಿ ಅವರನ್ನು ಮುಖ್ಯಮಂತ್ರಿಯಾಗಿ ನೇಮಕ. ಸಿಬಿಐ ನ್ಯಾಯಾಲಯಕ್ಕೆ ಶರಣಾದ ಲಾಲು. ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ನ್ಯಾಯಾಲಯ</p>.<p><strong>ಏಪ್ರಿಲ್, 2000: </strong>ರಾಬ್ಡಿ ದೇವಿ ಕೂಡ ಪ್ರಕರಣದ ಆರೋಪಿಗಳಲ್ಲಿ ಒಬ್ಬರು ಎಂದು ಹೆಸರಿಸಲಾಯಿತು. ಆದರೆ, ಅವರಿಗೆ ಜಾಮೀನು ಮಂಜೂರು</p>.<p><strong>ಅಕ್ಟೋಬರ್, 2001: </strong>ರಾಜ್ಯ ವಿಭಜನೆ ನಂತರ ಜಾರ್ಖಂಡ್ ಹೈಕೋರ್ಟ್ಗೆ ಪ್ರಕರಣ ವರ್ಗಾಯಿಸಿದ ಸುಪ್ರೀಂ ಕೋರ್ಟ್</p>.<p><strong>ಫೆಬ್ರುವರಿ, 2002:</strong> ಜಾರ್ಖಂಡ್ನ ವಿಶೇಷ ಸಿಬಿಐ ನ್ಯಾಯಾಲಯದಲ್ಲಿ ವಿಚಾರಣೆ ಆರಂಭ</p>.<p><strong>ಡಿಸೆಂಬರ್, 2006:</strong> ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಪ್ರಕರಣದಲ್ಲಿ ಲಾಲು ಮತ್ತು ರಾಬ್ಡಿದೇವಿ ಅವರನ್ನು ಖುಲಾಸೆ ಮಾಡಿದ ಪಟ್ನಾದ ಅಧೀನ ನ್ಯಾಯಾಲಯ</p>.<p><strong>ಮಾರ್ಚ್, 2012:</strong> ಲಾಲು ಮತ್ತು ಪ್ರಕರಣದ ಮತ್ತೊಬ್ಬ ಆರೋಪಿ ಡಾ. ಜಗನ್ನಾಥ್ ಮಿಶ್ರಾ ವಿರುದ್ಧ ದೋಷಾರೋಪ ನಿಗದಿ</p>.<p><strong>ಸೆಪ್ಟೆಂಬರ್ 30, 2013: </strong>ಮೇವು ಹಗರಣದ ಮತ್ತೊಂದು ಪ್ರಕರಣದಲ್ಲಿ (ಆರ್ಸಿ 20ಎ/96) ಲಾಲು, ಮಿಶ್ರಾ ಮತ್ತು ಇತರ 45 ಮಂದಿ ತಪ್ಪಿತಸ್ಥರು ಎಂದು ಸಾಬೀತು. ರಾಂಚಿ ಜೈಲಿಗೆ ಲಾಲು. ಲೋಕಸಭೆಯಿಂದ ಅನರ್ಹಗೊಂಡ ಆರ್ಜೆಡಿ ಮುಖ್ಯಸ್ಥ. ಚುನಾವಣೆ ಸ್ಪರ್ಧಿಸುವುದಕ್ಕೂ ನಿರ್ಬಂಧ</p>.<p><strong>ಡಿಸೆಂಬರ್, 2013: </strong>ಲಾಲುಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್</p>.<p><strong>ಮೇ, 2017: </strong>ಸುಪ್ರೀಂ ಕೋರ್ಟ್ನ ಮೇ 8ರ ತೀರ್ಪಿನ ನಂತರ ವಿಚಾರಣೆ ಪುನಾರರಂಭ. ದೇವಗಡ ಖಜಾನೆಯಿಂದ ಹಣ ಪಡೆದ ಪ್ರಕರಣಕ್ಕೆ (ಆರ್ಸಿ 64ಎ/96) ಸಂಬಂಧಿಸಿದಂತೆ ಪ್ರತ್ಯೇಕ ವಿಚಾರಣೆ ಆರಂಭಿಸುವಂತೆ ಅಧೀನ ನ್ಯಾಯಾಲಯಕ್ಕೆ ಸೂಚಿಸಿದ ‘ಸುಪ್ರೀಂ’. ಒಂಬತ್ತು ತಿಂಗಳೊಳಗೆ ವಿಚಾರಣೆ ಮುಕ್ತಾಯಗೊಳಿಸಲು ನಿರ್ದೇಶನ</p>.<p><strong>ಡಿಸೆಂಬರ್ 23, 2017:</strong> ಲಾಲು ಪ್ರಸಾದ್ ಮತ್ತು ಇತರ 15 ಆರೋಪಿಗಳು ಅಪರಾಧಿಗಳು ಎಂದು ಘೋಷಿಸಿದ ಸಿಬಿಐ ವಿಶೇಷ ನ್ಯಾಯಾಲಯ. ಒಟ್ಟು ಆರು ಪ್ರಕರಣಗಳ ಪೈಕಿ ಎರಡರಲ್ಲಿ ಲಾಲು ತಪ್ಪಿತಸ್ಥ ಎಂಬುದು ಸಾಬೀತು.</p>.<p><strong>ಜನವರಿ 06, 2018: ಲಾಲು ಪ್ರಸಾದ್ಗೆ 3 ವರ್ಷ 6 ತಿಂಗಳು ಶಿಕ್ಷೆ, ₹ 5 ಲಕ್ಷ ದಂಡ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಂಚಿ: </strong>ಮೇವು ಹಗರಣದ ತಪ್ಪಿತಸ್ಥ ಹಾಗೂ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯ ಮೂರೂವರೆ ವರ್ಷ ಜೈಲು ಶಿಕ್ಷೆ ಮತ್ತು ₹ 5 ಲಕ್ಷ ದಂಡ ವಿಧಿಸಿದೆ.</p>.<p>ಒಟ್ಟು 16 ತಪ್ಪಿತಸ್ಥರ ವಿಚಾರಣೆ ಪೂರ್ಣಗೊಳಿಸಿದ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಶಿವಪಾಲ್ ಸಿಂಗ್ ಅವರು ಶನಿವಾರ ಶಿಕ್ಷೆ ಪ್ರಮಾಣ ಪ್ರಕಟಿಸಿದರು.</p>.<p>‘2014ರಲ್ಲಿ ಲಾಲು ಅವರಿಗೆ ಹೃದಯ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಮೇವು ಹಗರಣಕ್ಕೆ ಸಂಬಂಧಿಸಿದಂತೆ 21 ವರ್ಷಗಳಿಂದ ವಿಚಾರಣೆ ಎದುರಿಸುತ್ತಿದ್ದಾರೆ. ಹಲವು ಬಾರಿ ಜೈಲಿನಲ್ಲಿದ್ದರು. ಹಾಗಾಗಿ ಅವರ ಬಗ್ಗೆ ಔದಾರ್ಯ ತೋರಿ, ಕಡಿಮೆ ಶಿಕ್ಷೆ ವಿಧಿಸಬೇಕು’ ಎಂದು ಲಾಲು ಪರ ವಕೀಲರು ಕೋರಿದ್ದರು.</p>.<p>ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಸಿಬಿಐ ವಕೀಲರು, ಲಾಲು ಪ್ರಸಾದ್ ಅವರ ಆರೋಗ್ಯ ಉತ್ತಮವಾಗಿದ್ದು, ಈಚೆಗೆ ರಾಜಕೀಯ ರ್ಯಾಲಿಗಳಲ್ಲಿ ಭಾಗವಹಿಸಿದ್ದರು. ಅವರಿಗೆ ಗರಿಷ್ಠ ಶಿಕ್ಷೆ ವಿಧಿಸುವಂತೆ ಮನವಿ ಮಾಡಿದ್ದರು.<br /> <br /> <strong>ಮೇವು ಹಗರಣ: ಅಂದಿನಿಂದ ಇಂದಿನವರೆಗೆ</strong></p>.<p><strong>ಜನವರಿ, 1996: </strong>ಚಾಯಿಬಾಸಾ ಜಿಲ್ಲಾಧಿಕಾರಿಯಾಗಿದ್ದ ಅಮಿತ್ ಖರೆ ಅವರು ಪಶುಸಂಗೋಪನಾ ಇಲಾಖೆಯಲ್ಲಿ ತಪಾಸಣೆ ನಡೆಸಿದಾಗ ಮೇವು ಹಗರಣ ಬಯಲಿಗೆ. ಶೋಧಕಾರ್ಯದ ವೇಳೆ ವಶಪಡಿಸಿಕೊಳ್ಳಲಾಗಿದ್ದ ದಾಖಲೆಗಳು ಹಗರಣ ನಡೆದಿರುವ ಬಗ್ಗೆ ಪುರಾವೆ ಒದಗಿಸಿತ್ತು</p>.<p><strong>ಮಾರ್ಚ್, 1996: </strong>ಮೇವು ಹಗರಣದ ತನಿಖೆ ನಡೆಸುವಂತೆ ಸಿಬಿಐಗೆ ಸೂಚಿಸಿದ ಪಟ್ನಾ ಹೈಕೋರ್ಟ್. ತೀರ್ಪಿನ ಅನುಸಾರ ಚಾಯಿಬಾಸಾ (ಅವಿಭಜಿತ ಬಿಹಾರ) ಖಜಾನೆಯಿಂದ ಹಣ ಪಡೆದ ಪ್ರಕರಣದಲ್ಲಿ ಎಫ್ಐಆರ್ ದಾಖಲು</p>.<p><strong>ಜೂನ್, 1997: </strong>ಆರೋಪಪಟ್ಟಿ ಸಲ್ಲಿಸಿದ ಸಿಬಿಐ. ಆರೋಪಿಗಳಲ್ಲಿ ಒಬ್ಬರಾಗಿ ಲಾಲು ಪ್ರಸಾದ್ ಹೆಸರು ದಾಖಲು</p>.<p><strong>ಜುಲೈ, 1997: </strong>ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ ಲಾಲು. ಪತ್ನಿ ರಾಬ್ಡಿದೇವಿ ಅವರನ್ನು ಮುಖ್ಯಮಂತ್ರಿಯಾಗಿ ನೇಮಕ. ಸಿಬಿಐ ನ್ಯಾಯಾಲಯಕ್ಕೆ ಶರಣಾದ ಲಾಲು. ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ನ್ಯಾಯಾಲಯ</p>.<p><strong>ಏಪ್ರಿಲ್, 2000: </strong>ರಾಬ್ಡಿ ದೇವಿ ಕೂಡ ಪ್ರಕರಣದ ಆರೋಪಿಗಳಲ್ಲಿ ಒಬ್ಬರು ಎಂದು ಹೆಸರಿಸಲಾಯಿತು. ಆದರೆ, ಅವರಿಗೆ ಜಾಮೀನು ಮಂಜೂರು</p>.<p><strong>ಅಕ್ಟೋಬರ್, 2001: </strong>ರಾಜ್ಯ ವಿಭಜನೆ ನಂತರ ಜಾರ್ಖಂಡ್ ಹೈಕೋರ್ಟ್ಗೆ ಪ್ರಕರಣ ವರ್ಗಾಯಿಸಿದ ಸುಪ್ರೀಂ ಕೋರ್ಟ್</p>.<p><strong>ಫೆಬ್ರುವರಿ, 2002:</strong> ಜಾರ್ಖಂಡ್ನ ವಿಶೇಷ ಸಿಬಿಐ ನ್ಯಾಯಾಲಯದಲ್ಲಿ ವಿಚಾರಣೆ ಆರಂಭ</p>.<p><strong>ಡಿಸೆಂಬರ್, 2006:</strong> ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಪ್ರಕರಣದಲ್ಲಿ ಲಾಲು ಮತ್ತು ರಾಬ್ಡಿದೇವಿ ಅವರನ್ನು ಖುಲಾಸೆ ಮಾಡಿದ ಪಟ್ನಾದ ಅಧೀನ ನ್ಯಾಯಾಲಯ</p>.<p><strong>ಮಾರ್ಚ್, 2012:</strong> ಲಾಲು ಮತ್ತು ಪ್ರಕರಣದ ಮತ್ತೊಬ್ಬ ಆರೋಪಿ ಡಾ. ಜಗನ್ನಾಥ್ ಮಿಶ್ರಾ ವಿರುದ್ಧ ದೋಷಾರೋಪ ನಿಗದಿ</p>.<p><strong>ಸೆಪ್ಟೆಂಬರ್ 30, 2013: </strong>ಮೇವು ಹಗರಣದ ಮತ್ತೊಂದು ಪ್ರಕರಣದಲ್ಲಿ (ಆರ್ಸಿ 20ಎ/96) ಲಾಲು, ಮಿಶ್ರಾ ಮತ್ತು ಇತರ 45 ಮಂದಿ ತಪ್ಪಿತಸ್ಥರು ಎಂದು ಸಾಬೀತು. ರಾಂಚಿ ಜೈಲಿಗೆ ಲಾಲು. ಲೋಕಸಭೆಯಿಂದ ಅನರ್ಹಗೊಂಡ ಆರ್ಜೆಡಿ ಮುಖ್ಯಸ್ಥ. ಚುನಾವಣೆ ಸ್ಪರ್ಧಿಸುವುದಕ್ಕೂ ನಿರ್ಬಂಧ</p>.<p><strong>ಡಿಸೆಂಬರ್, 2013: </strong>ಲಾಲುಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್</p>.<p><strong>ಮೇ, 2017: </strong>ಸುಪ್ರೀಂ ಕೋರ್ಟ್ನ ಮೇ 8ರ ತೀರ್ಪಿನ ನಂತರ ವಿಚಾರಣೆ ಪುನಾರರಂಭ. ದೇವಗಡ ಖಜಾನೆಯಿಂದ ಹಣ ಪಡೆದ ಪ್ರಕರಣಕ್ಕೆ (ಆರ್ಸಿ 64ಎ/96) ಸಂಬಂಧಿಸಿದಂತೆ ಪ್ರತ್ಯೇಕ ವಿಚಾರಣೆ ಆರಂಭಿಸುವಂತೆ ಅಧೀನ ನ್ಯಾಯಾಲಯಕ್ಕೆ ಸೂಚಿಸಿದ ‘ಸುಪ್ರೀಂ’. ಒಂಬತ್ತು ತಿಂಗಳೊಳಗೆ ವಿಚಾರಣೆ ಮುಕ್ತಾಯಗೊಳಿಸಲು ನಿರ್ದೇಶನ</p>.<p><strong>ಡಿಸೆಂಬರ್ 23, 2017:</strong> ಲಾಲು ಪ್ರಸಾದ್ ಮತ್ತು ಇತರ 15 ಆರೋಪಿಗಳು ಅಪರಾಧಿಗಳು ಎಂದು ಘೋಷಿಸಿದ ಸಿಬಿಐ ವಿಶೇಷ ನ್ಯಾಯಾಲಯ. ಒಟ್ಟು ಆರು ಪ್ರಕರಣಗಳ ಪೈಕಿ ಎರಡರಲ್ಲಿ ಲಾಲು ತಪ್ಪಿತಸ್ಥ ಎಂಬುದು ಸಾಬೀತು.</p>.<p><strong>ಜನವರಿ 06, 2018: ಲಾಲು ಪ್ರಸಾದ್ಗೆ 3 ವರ್ಷ 6 ತಿಂಗಳು ಶಿಕ್ಷೆ, ₹ 5 ಲಕ್ಷ ದಂಡ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>