<p><strong>ಎಲೂರು: </strong>ಗೋದಾವರಿ ಜಿಲ್ಲೆಯ ಪೆಡವೆಗಿ ಮಂಡಲ್ ಪ್ರದೇಶದಲ್ಲಿರುವ ಭೋಗಪುರಂ ಕೊಳದಲ್ಲಿ ನಾಲ್ವರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವಿಗೀಡಾಗಿರುವ ಘಟನೆ ಶನಿವಾರ ಸಂಜೆ ನಡೆದಿದೆ. ಭಾನುವಾರ ಬೆಳಿಗ್ಗೆ ಕೊಳದಲ್ಲಿ ಒಂದು ಶವ ಕಾಣಿಸಿಕೊಂಡಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.</p>.<p>ಸಾವಿಗೀಡಾದವರನ್ನು ಕೋಟಾ ಸಾಯ್, ಗುಮ್ಮಿ ಶಿವಶಂಕರ್ ಪರಶುರಾಮ್, ಜಿ. ವಿಜಯ್ಶಂಕರ್ ಹಾಗೂ ಕೆ.ಹರಿಕೃಷ್ಣ ರಾಜು ಎಂದು ಗುರುತಿಸಲಾಗಿದೆ.</p>.<p>‘ನಾಲ್ವರೂ ಬಿ ಟೆಕ್(ಮೆಕ್ಯಾನಿಕಲ್ ಎಂಜಿನಿಯರಿಂಗ್)ಪದವಿಯ 3ನೇ ವರ್ಷದ ವಿದ್ಯಾರ್ಥಿಗಳಾಗಿದ್ದು, ಎಲೂರಿನಲ್ಲಿರುವ ರಾಮಚಂದ್ರ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಶನಿವಾರ ಸಂಜೆ ಕಾಲೇಜು ಮುಗಿಸಿ ಭೋಗಪುರಂ ಕೊಳದ ಬಳಿ ತೆರಳಿದ್ದರು. ಈಜುವ ವೇಳೆ ಮುಳುಗಿ ಸಾವಿಗೀಡಾಗಿರಬಹುದು’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.<p>‘ಸದ್ಯ ಶವಗಳನ್ನು ಹೊರತೆಗೆಯಲಾಗಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ತನಿಖೆ ಪ್ರಗತಿಯಲ್ಲಿದ್ದು, ಈ ಬಗ್ಗೆ ಮೃತರ ಕುಟುಂಬದವರಿಗೆ ಮಾಹಿತಿ ನೀಡಲಾಗಿದೆ’ ಎಂದೂ ಪೊಲೀಸರು ಹೇಳಿದ್ದಾರೆ.</p>.<p></p></p></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಎಲೂರು: </strong>ಗೋದಾವರಿ ಜಿಲ್ಲೆಯ ಪೆಡವೆಗಿ ಮಂಡಲ್ ಪ್ರದೇಶದಲ್ಲಿರುವ ಭೋಗಪುರಂ ಕೊಳದಲ್ಲಿ ನಾಲ್ವರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವಿಗೀಡಾಗಿರುವ ಘಟನೆ ಶನಿವಾರ ಸಂಜೆ ನಡೆದಿದೆ. ಭಾನುವಾರ ಬೆಳಿಗ್ಗೆ ಕೊಳದಲ್ಲಿ ಒಂದು ಶವ ಕಾಣಿಸಿಕೊಂಡಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.</p>.<p>ಸಾವಿಗೀಡಾದವರನ್ನು ಕೋಟಾ ಸಾಯ್, ಗುಮ್ಮಿ ಶಿವಶಂಕರ್ ಪರಶುರಾಮ್, ಜಿ. ವಿಜಯ್ಶಂಕರ್ ಹಾಗೂ ಕೆ.ಹರಿಕೃಷ್ಣ ರಾಜು ಎಂದು ಗುರುತಿಸಲಾಗಿದೆ.</p>.<p>‘ನಾಲ್ವರೂ ಬಿ ಟೆಕ್(ಮೆಕ್ಯಾನಿಕಲ್ ಎಂಜಿನಿಯರಿಂಗ್)ಪದವಿಯ 3ನೇ ವರ್ಷದ ವಿದ್ಯಾರ್ಥಿಗಳಾಗಿದ್ದು, ಎಲೂರಿನಲ್ಲಿರುವ ರಾಮಚಂದ್ರ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಶನಿವಾರ ಸಂಜೆ ಕಾಲೇಜು ಮುಗಿಸಿ ಭೋಗಪುರಂ ಕೊಳದ ಬಳಿ ತೆರಳಿದ್ದರು. ಈಜುವ ವೇಳೆ ಮುಳುಗಿ ಸಾವಿಗೀಡಾಗಿರಬಹುದು’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.<p>‘ಸದ್ಯ ಶವಗಳನ್ನು ಹೊರತೆಗೆಯಲಾಗಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ತನಿಖೆ ಪ್ರಗತಿಯಲ್ಲಿದ್ದು, ಈ ಬಗ್ಗೆ ಮೃತರ ಕುಟುಂಬದವರಿಗೆ ಮಾಹಿತಿ ನೀಡಲಾಗಿದೆ’ ಎಂದೂ ಪೊಲೀಸರು ಹೇಳಿದ್ದಾರೆ.</p>.<p></p></p></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>