ಸುಪ್ರೀಂ ಕೋರ್ಟ್ಗೆ ಸಂಬಂಧಿಸಿ ವಿಚಾರದಲ್ಲಿ ಮಧ್ಯಪ್ರವೇಶ ಮಾಡದಿರಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಮುಖ್ಯ ನ್ಯಾಯಮೂರ್ತಿ ಮತ್ತು ಅವರ ವಿರುದ್ಧ ಆರೋಪ ಮಾಡಿರುವ ನಾಲ್ವರು ನ್ಯಾಯಮೂರ್ತಿಗಳೇ ಈ ವಿಚಾರವನ್ನು ಬಗೆಹರಿಸಿಕೊಳ್ಳಬೇಕು ಎಂಬುದು ಸರ್ಕಾರದ ನಿಲುವು ಎಂದು ಉನ್ನತ ಮೂಲಗಳು ಶುಕ್ರವಾರ ಹೇಳಿದ್ದವು. ಆದಾಗ್ಯೂ, ಪ್ರಧಾನಿ ಅವರ ಮುಖ್ಯ ಕಾರ್ಯದರ್ಶಿ ಮುಖ್ಯ ನ್ಯಾಯಮೂರ್ತಿ ನಿವಾಸದ ಬಳಿ ಕಾಣಿಸಿಕೊಂಡಿರುವುದು ಕುತೂಹಲ ಮೂಡಿಸಿದೆ ಎನ್ನಲಾಗಿದೆ.