ಶನಿವಾರ, 21 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಮಾಜದ ಬದಲಾವಣೆ ಮನೆಯಿಂದ ಮಾತ್ರ ಸಾಧ್ಯ: ಕಿರಣ್ ಖೇರ್

ಹರಿಯಾಣ ಅತ್ಯಾಚಾರ ಪ್ರಕರಣ ಉಲ್ಲೇಖಿಸಿ ಮಾತು
Published : 22 ಜನವರಿ 2018, 12:48 IST
ಫಾಲೋ ಮಾಡಿ
Comments

ಚಂಡೀಗಡ: ಮನೆಯೇ ಮೊದಲ ಪಾಠಶಾಲೆ ಎಂಬಂತೆ ಸಮಾಜದಲ್ಲಿನ‌ ಬದಲಾವಣೆ ಮೊದಲು ಮನೆ ಮತ್ತು ಮನಸ್ಸಿನಿಂದಲೇ ಪ್ರಾರಂಭವಾಗಬೇಕು ಎಂದು ಬಿಜೆಪಿ ಸಂಸದೆ ಕಿರಣ್ ಖೇರ್ ಎಂದು ಹೇಳಿದ್ದಾರೆ.

ಕಳೆದ ಎರಡು ವಾರದಿಂದ ಹರಿಯಾಣದಲ್ಲಿ ನಿರಂತರವಾಗಿ ದಾಖಲಾಗುತ್ತಿರುವ ಅತ್ಯಾಚಾರ ಪ್ರಕರಣಗಳನ್ನು ಉಲ್ಲೇಖಿಸಿ ಮಾತನಾಡಿದ ಕಿರಣ್ ಖೇರ್, ಸಮಾಜದಲ್ಲಿ ಬದಲಾವಣೆಯಾಗಬೇಕು ಎಂದಾದರೆ ಮೊದಲು ಜನರ ಮನಸ್ಥಿತಿಯಲ್ಲಿ ಬದಲಾವಣೆಯಾಗಬೇಕು. ಆಗ ಮಾತ್ರ ಸಮಾಜದಲ್ಲಿ ಬದಲಾವಣೆ ಸಾಧ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.

ಹರಿಯಾಣದಲ್ಲಿ ಕಳೆದ ಎಂಟು ದಿನಗಳಲ್ಲಿ ಎಂಟು ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಇದರಿಂದ ‘ಹರಿಯಾಣ ದೇಶದ ಅತ್ಯಾಚಾರ ಪ್ರಕರಣಗಳ ರಾಜ್ಯ’ ಎಂದು ಕಾಂಗ್ರೆಸ್ ಕರೆದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT