ರಾಜ್ಯ ಸರ್ಕಾರ ಆದೇಶಗಳು ಈ ಶಾಲೆಗೆ ಅನ್ವಯಿಸುವುದಿಲ್ಲ. ವ್ಯಾಸ ವಿದ್ಯಾ ಪೀಠ ಖಾಸಗಿ ಶಾಲೆಯಾಗಿದ್ದು, ಸಿಬಿಎಸ್ಇ ಪಠ್ಯಕ್ರಮವನ್ನು ಅನುಸರಿಸುತ್ತದೆ ಎಂದು ಕೃಷ್ಣದಾಸ್ ಹೇಳಿದ್ದಾರೆ. ಶೈಕ್ಷಣಿಕ ಸಂಸ್ಥೆಗಳಲ್ಲಿ ಅಲ್ಲಿನ ಮುಖ್ಯಸ್ಥರು, ವಿಭಾಗದ ಮುಖ್ಯಸ್ಥರು ಮಾತ್ರ ಧ್ವಜಾರೋಹಣ ಮಾಡಬೇಕು ಮತ್ತು ರಾಷ್ಟ್ರಗೀತೆಯನ್ನು ಕಡ್ಡಾಯವಾಗಿ ಹಾಡಬೇಕು ಎಂದು ಕೇರಳ ಸರ್ಕಾರ ಜನವರಿ 17ರಂದು ಸುತ್ತೋಲೆ ಹೊರಡಿಸಿತ್ತು.