<p><strong>ಕಾಸ್ಗಂಜ್, ಉತ್ತರ ಪ್ರದೇಶ:</strong> ನಗರದಲ್ಲಿ ಎರಡು ದಿನಗಳ ಹಿಂದೆ ನಡೆದ ಹಿಂಸಾಚಾರ ಘಟನೆ ಮತ್ತೊಮ್ಮೆ ಮರುಕಳಿಸದಂತೆ ಸರ್ಕಾರ ಎಚ್ಚರಿಕೆ ವಹಿಸಬೇಕು ಎಂದು ಗವರ್ನರ್ ರಾಮ್ ನಾಯ್ಕ್ ಹೇಳಿದ್ದಾರೆ.</p>.<p>ರಾಜ್ಯದಲ್ಲಿ ಕಳೆದ 9–10 ತಿಂಗಳಲ್ಲಿ ಈ ರೀತಿಯ ಹಿಂಸಾಚಾರ ಘಟನೆ ಸಂಭವಿಸಿರುವುದು ಇದೇ ಮೊದಲು. ಇದೊಂದು ‘ಆವಮಾನಕರ’ ಸಂಗತಿ ಎಂದು ಗವರ್ನರ್ ಬಣ್ಣಿಸಿದ್ದಾರೆ.</p>.<p>ಮಥುರಾ–ಬರೇಲಿ ಹೆದ್ದಾರಿಯಲ್ಲಿ ಶನಿವಾರ ಆಯೋಜಿಸಲಾಗಿದ್ದ ಬೈಕ್ ರ್ಯಾಲಿಯಲ್ಲಿ ಎರಡು ಕೋಮಿನ ಗುಂಪುಗಳ ನಡುವೆ ಜಟಾಪಟಿ ನಡೆದಿದ್ದು, ಸ್ಥಳದಲ್ಲಿ ಕೆಲ ಕಾಲ ಉದ್ವಿಗ್ನ ವಾತಾವರಣ ಉಂಟಾಗಿತ್ತು.</p>.<p>ಗಲಭೆಯಲ್ಲಿ ಒಬ್ಬ ಮೃತಪಟ್ಟು, ಇಬ್ಬರು ಗಾಯಗೊಂಡಿದ್ದರು. ಘಟನೆಗೆ ಸಂಬಂಧಿಸಿದಂತೆ 112 ಜನರನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಇತ್ತೀಚೆಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಉತ್ತರ ಪ್ರದೇಶದ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ನೇತೃತ್ವದ ಸರ್ಕಾರಕ್ಕೆ ಸಲಹೆ ನೀಡಿದ್ದರು.</p>.<p><strong>ಇದನ್ನೂ ಓದಿ...</strong><br /> <br /> <a href="http://www.prajavani.net/news/article/2018/01/28/550321.html" target="_blank"><strong>ಕಾಸ್ಗಂಜ್ ಹಿಂಸಾಚಾರ: ಇಂಟರ್ನೆಟ್ ಸೇವೆ ಸ್ಥಗಿತ, ನಿಷೇಧಾಜ್ಞೆ ಜಾರಿ</strong></a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾಸ್ಗಂಜ್, ಉತ್ತರ ಪ್ರದೇಶ:</strong> ನಗರದಲ್ಲಿ ಎರಡು ದಿನಗಳ ಹಿಂದೆ ನಡೆದ ಹಿಂಸಾಚಾರ ಘಟನೆ ಮತ್ತೊಮ್ಮೆ ಮರುಕಳಿಸದಂತೆ ಸರ್ಕಾರ ಎಚ್ಚರಿಕೆ ವಹಿಸಬೇಕು ಎಂದು ಗವರ್ನರ್ ರಾಮ್ ನಾಯ್ಕ್ ಹೇಳಿದ್ದಾರೆ.</p>.<p>ರಾಜ್ಯದಲ್ಲಿ ಕಳೆದ 9–10 ತಿಂಗಳಲ್ಲಿ ಈ ರೀತಿಯ ಹಿಂಸಾಚಾರ ಘಟನೆ ಸಂಭವಿಸಿರುವುದು ಇದೇ ಮೊದಲು. ಇದೊಂದು ‘ಆವಮಾನಕರ’ ಸಂಗತಿ ಎಂದು ಗವರ್ನರ್ ಬಣ್ಣಿಸಿದ್ದಾರೆ.</p>.<p>ಮಥುರಾ–ಬರೇಲಿ ಹೆದ್ದಾರಿಯಲ್ಲಿ ಶನಿವಾರ ಆಯೋಜಿಸಲಾಗಿದ್ದ ಬೈಕ್ ರ್ಯಾಲಿಯಲ್ಲಿ ಎರಡು ಕೋಮಿನ ಗುಂಪುಗಳ ನಡುವೆ ಜಟಾಪಟಿ ನಡೆದಿದ್ದು, ಸ್ಥಳದಲ್ಲಿ ಕೆಲ ಕಾಲ ಉದ್ವಿಗ್ನ ವಾತಾವರಣ ಉಂಟಾಗಿತ್ತು.</p>.<p>ಗಲಭೆಯಲ್ಲಿ ಒಬ್ಬ ಮೃತಪಟ್ಟು, ಇಬ್ಬರು ಗಾಯಗೊಂಡಿದ್ದರು. ಘಟನೆಗೆ ಸಂಬಂಧಿಸಿದಂತೆ 112 ಜನರನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಇತ್ತೀಚೆಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಉತ್ತರ ಪ್ರದೇಶದ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ನೇತೃತ್ವದ ಸರ್ಕಾರಕ್ಕೆ ಸಲಹೆ ನೀಡಿದ್ದರು.</p>.<p><strong>ಇದನ್ನೂ ಓದಿ...</strong><br /> <br /> <a href="http://www.prajavani.net/news/article/2018/01/28/550321.html" target="_blank"><strong>ಕಾಸ್ಗಂಜ್ ಹಿಂಸಾಚಾರ: ಇಂಟರ್ನೆಟ್ ಸೇವೆ ಸ್ಥಗಿತ, ನಿಷೇಧಾಜ್ಞೆ ಜಾರಿ</strong></a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>