<p><strong>ನವದೆಹಲಿ</strong>: ಆಮ್ ಆದ್ಮಿ ಪಕ್ಷ (ಎಎಪಿ) ಮತ್ತು ಬಿಜೆಪಿ ನಾಯಕರ ಜಟಾಪಟಿಯಿಂದಾಗಿ ಮುಖ್ಯಮಂತ್ರಿ ಕೇಜ್ರಿವಾಲ್ ಅಧಿಕೃತ ನಿವಾಸ ಮಂಗಳವಾರ ರಣರಂಗವಾಗಿತ್ತು.</p>.<p>ದೆಹಲಿ ಮಹಾನಗರ ಪಾಲಿಕೆ ಕೈಗೊಂಡಿರುವ ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆ ಕುರಿತು ಚರ್ಚಿಸಲು ದೆಹಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ ನೇತೃತ್ವದ ನಿಯೋಗವು ಕೇಜ್ರಿವಾಲ್ ನಿವಾಸಕ್ಕೆ ತೆರಳಿದ್ದಾಗ ಅಲ್ಲಿ ಮಾರಾಮಾರಿ ನಡೆದಿದೆ.</p>.<p>ಮುಖ್ಯಮಂತ್ರಿ ನಿವಾಸದಲ್ಲಿದ್ದ ಎಎಪಿ ಶಾಸಕರು, ಗೂಂಡಾಗಳು ಮತ್ತು ಬೌನ್ಸರ್ಗಳು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ನಾಯಕರು ಸಭೆ ಬಹಿಷ್ಕರಿಸಿ ಅರ್ಧದಲ್ಲಿಯೇ ಹೊರ ನಡೆದರು.</p>.<p>ನಿಯೋಗದಲ್ಲಿದ್ದ ಬಿಜೆಪಿಯ ಮಹಿಳಾ ಮೇಯರ್ಗಳಾದ ಪ್ರೀತಿ ಅಗರ್ವಾಲ್ ಮತ್ತು ನೀಮಾ ಭಗತ್ ಮೇಲೆ ಎಎಪಿ ಶಾಸಕರು ಹಲ್ಲೆ ನಡೆಸಿದ್ದಾರೆ ಎಂದು ದೆಹಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಂದರ್ ಗುಪ್ತಾ ದೂರು ನೀಡಿದ್ದಾರೆ. ದೂರಿನಲ್ಲಿ ಎಎಪಿಯ ನಾಲ್ವರು ಶಾಸಕರ ಹೆಸರನ್ನು ಅವರು ಉಲ್ಲೇಖಿಸಿದ್ದಾರೆ.</p>.<p>ಹಲ್ಲೆ ನಡೆಸುವಂತೆ ಎಎಪಿ ಶಾಸಕರಿಗೆ ಕೇಜ್ರಿವಾಲ್ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿದ ಬಿಜೆಪಿ ಮುಖಂಡರು, ಮೊಬೈಲ್ನಲ್ಲಿ ಸೆರೆ ಹಿಡಿದ ದೃಶ್ಯಗಳನ್ನು ಪ್ರದರ್ಶಿಸಿದರು.</p>.<p>ಕಾರ್ಯಾಚರಣೆ ವಿರುದ್ಧ ‘ಸುಪ್ರೀಂ’ಗೆ ಮೊರೆ: ಬಿಜೆಪಿ ಮಾಡಿರುವ ಆರೋಪಗಳನ್ನು ಸಂಪೂರ್ಣ ಸುಳ್ಳು ಮತ್ತು ಆಧಾರರಹಿತ ಎಂದು ಕೇಜ್ರಿವಾಲ್ ತಳ್ಳಿ ಹಾಕಿದ್ದಾರೆ.</p>.<p>‘ಎಎಪಿಯ ಯಾವುದೇ ಶಾಸಕ ಬಿಜೆಪಿ ನಾಯಕರ ಜತೆ ಅಸಭ್ಯವಾಗಿ ನಡೆದುಕೊಂಡಿದ್ದು ಸಾಬೀತಾದರೆ ಅವರನ್ನು ಪಕ್ಷದಿಂದ ಹೊರ ಹಾಕುತ್ತೇನೆ’ ಅವರು ಸವಾಲು ಹಾಕಿದ್ದಾರೆ.</p>.<p>ಬಿಜೆಪಿ ಅಧಿಕಾರದಲ್ಲಿರುವ ದೆಹಲಿ ಮಹಾನಗರ ಪಾಲಿಕೆ ಕೈಗೊಂಡಿರುವ ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆಗೆ ತಾತ್ಕಾಲಿಕ ತಡೆಯಾಜ್ಞೆ ಕೋರಿ ಎಎಪಿ ಸರ್ಕಾರ ಇದೇ ವಾರ ಸುಪ್ರೀಂ ಕೋರ್ಟ್ ಮೊರೆ ಹೋಗಲು ತೀರ್ಮಾನಿಸಿದೆ ಎಂದರು.</p>.<p>ತೆರವು ಕಾರ್ಯಾಚರಣೆಯಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.<br /> ***<br /> <strong>‘ಆಮ್ ಆದ್ಮಿ ಅಲ್ಲ, ನಗರದ ನಕ್ಸಲೀಯರು’</strong></p>.<p>‘ಎಎಪಿ ಸರ್ಕಾರ ನಗರದ ನಕ್ಸಲೀಯರಂತೆ ವರ್ತಿಸುತ್ತಿದೆ’ ಎಂದು ಮನೋಜ್ ತಿವಾರಿ ಆರೋಪಿಸಿದ್ದಾರೆ.</p>.<p>‘ಹೂಗುಚ್ಛ ನೀಡಿ ಬಿಜೆಪಿಯ ನಿಯೋಗವನ್ನು ಸ್ವಾಗತಿಸಿದ ಮುಖ್ಯಮಂತ್ರಿ ಕೇಜ್ರಿವಾಲ್ ಅವರು ನಂತರ ಪಕ್ಷದ ಶಾಸಕರನ್ನು ಛೂಬಿಟ್ಟು ಹಲ್ಲೆ ನಡೆಸಿದರು’ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ದೆಹಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿಜೇಂದರ್ ಗುಪ್ತಾ ಘಟನೆಯ ನಂತರ ವೈದ್ಯಕೀಯ ತಪಾಸಣೆಗೆ ಒಳಗಾಗಿದ್ದಾರೆ.</p>.<p>‘ಮಹಾತ್ಮ ಗಾಂಧಿ ಪುಣ್ಯತಿಥಿಯಂದು ಬಿಜೆಪಿ ನಾಯಕರ ಮೇಲೆ ಹಲ್ಲೆ ನಡೆಸುವ ಮೂಲಕ ಕೇಜ್ರಿವಾಲ್ ಅವರು ಮಹಾತ್ಮನಿಗೆ ಗೌರವ ಸಲ್ಲಿಸಿದ್ದಾರೆ’ ಎಂದು ಅವರು ಲೇವಡಿ ಮಾಡಿದ್ದಾರೆ.</p>.<p>‘ಎಎಪಿ ಸರ್ಕಾರ ಮತ್ತು ಮುಖ್ಯಮಂತ್ರಿ ಕೇಜ್ರಿವಾಲ್ ಅವರಲ್ಲಿ ನಂಬುಗೆ ಹೊರಟು ಹೋಗಿದೆ. ತೆರವು ಕಾರ್ಯಾಚರಣೆ ನಿಲ್ಲಿಸುವಂತೆ ಒತ್ತಾಯಿಸಿ ಲೆಫ್ಟಿನೆಂಟ್ ಗವರ್ನರ್ ಮತ್ತು ಕೇಂದ್ರ ನಗರಾಭಿವೃದ್ಧಿ ಸಚಿವರನ್ನು ಭೇಟಿಯಾಗಿ ಪರಿಹಾರ ಕೋರುತ್ತೇವೆ’ ಎಂದು ಬಿಜೆಪಿ ನಿಯೋಗ ಹೇಳಿದೆ.</p>.<p>ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆ ಕುರಿತು ರಾಮಲೀಲಾ ಮೈದಾನದಲ್ಲಿ ಬಹಿರಂಗ ಚರ್ಚೆಗೆ ಬರುವಂತೆ ಆಹ್ವಾನಿಸಿ ಕೇಜ್ರಿವಾಲ್ ಅವರಿಗೆ ಪತ್ರ ಬರೆಯುವುದಾಗಿ ಮನೋಜ್ ತಿವಾರಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಆಮ್ ಆದ್ಮಿ ಪಕ್ಷ (ಎಎಪಿ) ಮತ್ತು ಬಿಜೆಪಿ ನಾಯಕರ ಜಟಾಪಟಿಯಿಂದಾಗಿ ಮುಖ್ಯಮಂತ್ರಿ ಕೇಜ್ರಿವಾಲ್ ಅಧಿಕೃತ ನಿವಾಸ ಮಂಗಳವಾರ ರಣರಂಗವಾಗಿತ್ತು.</p>.<p>ದೆಹಲಿ ಮಹಾನಗರ ಪಾಲಿಕೆ ಕೈಗೊಂಡಿರುವ ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆ ಕುರಿತು ಚರ್ಚಿಸಲು ದೆಹಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ ನೇತೃತ್ವದ ನಿಯೋಗವು ಕೇಜ್ರಿವಾಲ್ ನಿವಾಸಕ್ಕೆ ತೆರಳಿದ್ದಾಗ ಅಲ್ಲಿ ಮಾರಾಮಾರಿ ನಡೆದಿದೆ.</p>.<p>ಮುಖ್ಯಮಂತ್ರಿ ನಿವಾಸದಲ್ಲಿದ್ದ ಎಎಪಿ ಶಾಸಕರು, ಗೂಂಡಾಗಳು ಮತ್ತು ಬೌನ್ಸರ್ಗಳು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ನಾಯಕರು ಸಭೆ ಬಹಿಷ್ಕರಿಸಿ ಅರ್ಧದಲ್ಲಿಯೇ ಹೊರ ನಡೆದರು.</p>.<p>ನಿಯೋಗದಲ್ಲಿದ್ದ ಬಿಜೆಪಿಯ ಮಹಿಳಾ ಮೇಯರ್ಗಳಾದ ಪ್ರೀತಿ ಅಗರ್ವಾಲ್ ಮತ್ತು ನೀಮಾ ಭಗತ್ ಮೇಲೆ ಎಎಪಿ ಶಾಸಕರು ಹಲ್ಲೆ ನಡೆಸಿದ್ದಾರೆ ಎಂದು ದೆಹಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಂದರ್ ಗುಪ್ತಾ ದೂರು ನೀಡಿದ್ದಾರೆ. ದೂರಿನಲ್ಲಿ ಎಎಪಿಯ ನಾಲ್ವರು ಶಾಸಕರ ಹೆಸರನ್ನು ಅವರು ಉಲ್ಲೇಖಿಸಿದ್ದಾರೆ.</p>.<p>ಹಲ್ಲೆ ನಡೆಸುವಂತೆ ಎಎಪಿ ಶಾಸಕರಿಗೆ ಕೇಜ್ರಿವಾಲ್ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿದ ಬಿಜೆಪಿ ಮುಖಂಡರು, ಮೊಬೈಲ್ನಲ್ಲಿ ಸೆರೆ ಹಿಡಿದ ದೃಶ್ಯಗಳನ್ನು ಪ್ರದರ್ಶಿಸಿದರು.</p>.<p>ಕಾರ್ಯಾಚರಣೆ ವಿರುದ್ಧ ‘ಸುಪ್ರೀಂ’ಗೆ ಮೊರೆ: ಬಿಜೆಪಿ ಮಾಡಿರುವ ಆರೋಪಗಳನ್ನು ಸಂಪೂರ್ಣ ಸುಳ್ಳು ಮತ್ತು ಆಧಾರರಹಿತ ಎಂದು ಕೇಜ್ರಿವಾಲ್ ತಳ್ಳಿ ಹಾಕಿದ್ದಾರೆ.</p>.<p>‘ಎಎಪಿಯ ಯಾವುದೇ ಶಾಸಕ ಬಿಜೆಪಿ ನಾಯಕರ ಜತೆ ಅಸಭ್ಯವಾಗಿ ನಡೆದುಕೊಂಡಿದ್ದು ಸಾಬೀತಾದರೆ ಅವರನ್ನು ಪಕ್ಷದಿಂದ ಹೊರ ಹಾಕುತ್ತೇನೆ’ ಅವರು ಸವಾಲು ಹಾಕಿದ್ದಾರೆ.</p>.<p>ಬಿಜೆಪಿ ಅಧಿಕಾರದಲ್ಲಿರುವ ದೆಹಲಿ ಮಹಾನಗರ ಪಾಲಿಕೆ ಕೈಗೊಂಡಿರುವ ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆಗೆ ತಾತ್ಕಾಲಿಕ ತಡೆಯಾಜ್ಞೆ ಕೋರಿ ಎಎಪಿ ಸರ್ಕಾರ ಇದೇ ವಾರ ಸುಪ್ರೀಂ ಕೋರ್ಟ್ ಮೊರೆ ಹೋಗಲು ತೀರ್ಮಾನಿಸಿದೆ ಎಂದರು.</p>.<p>ತೆರವು ಕಾರ್ಯಾಚರಣೆಯಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.<br /> ***<br /> <strong>‘ಆಮ್ ಆದ್ಮಿ ಅಲ್ಲ, ನಗರದ ನಕ್ಸಲೀಯರು’</strong></p>.<p>‘ಎಎಪಿ ಸರ್ಕಾರ ನಗರದ ನಕ್ಸಲೀಯರಂತೆ ವರ್ತಿಸುತ್ತಿದೆ’ ಎಂದು ಮನೋಜ್ ತಿವಾರಿ ಆರೋಪಿಸಿದ್ದಾರೆ.</p>.<p>‘ಹೂಗುಚ್ಛ ನೀಡಿ ಬಿಜೆಪಿಯ ನಿಯೋಗವನ್ನು ಸ್ವಾಗತಿಸಿದ ಮುಖ್ಯಮಂತ್ರಿ ಕೇಜ್ರಿವಾಲ್ ಅವರು ನಂತರ ಪಕ್ಷದ ಶಾಸಕರನ್ನು ಛೂಬಿಟ್ಟು ಹಲ್ಲೆ ನಡೆಸಿದರು’ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ದೆಹಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿಜೇಂದರ್ ಗುಪ್ತಾ ಘಟನೆಯ ನಂತರ ವೈದ್ಯಕೀಯ ತಪಾಸಣೆಗೆ ಒಳಗಾಗಿದ್ದಾರೆ.</p>.<p>‘ಮಹಾತ್ಮ ಗಾಂಧಿ ಪುಣ್ಯತಿಥಿಯಂದು ಬಿಜೆಪಿ ನಾಯಕರ ಮೇಲೆ ಹಲ್ಲೆ ನಡೆಸುವ ಮೂಲಕ ಕೇಜ್ರಿವಾಲ್ ಅವರು ಮಹಾತ್ಮನಿಗೆ ಗೌರವ ಸಲ್ಲಿಸಿದ್ದಾರೆ’ ಎಂದು ಅವರು ಲೇವಡಿ ಮಾಡಿದ್ದಾರೆ.</p>.<p>‘ಎಎಪಿ ಸರ್ಕಾರ ಮತ್ತು ಮುಖ್ಯಮಂತ್ರಿ ಕೇಜ್ರಿವಾಲ್ ಅವರಲ್ಲಿ ನಂಬುಗೆ ಹೊರಟು ಹೋಗಿದೆ. ತೆರವು ಕಾರ್ಯಾಚರಣೆ ನಿಲ್ಲಿಸುವಂತೆ ಒತ್ತಾಯಿಸಿ ಲೆಫ್ಟಿನೆಂಟ್ ಗವರ್ನರ್ ಮತ್ತು ಕೇಂದ್ರ ನಗರಾಭಿವೃದ್ಧಿ ಸಚಿವರನ್ನು ಭೇಟಿಯಾಗಿ ಪರಿಹಾರ ಕೋರುತ್ತೇವೆ’ ಎಂದು ಬಿಜೆಪಿ ನಿಯೋಗ ಹೇಳಿದೆ.</p>.<p>ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆ ಕುರಿತು ರಾಮಲೀಲಾ ಮೈದಾನದಲ್ಲಿ ಬಹಿರಂಗ ಚರ್ಚೆಗೆ ಬರುವಂತೆ ಆಹ್ವಾನಿಸಿ ಕೇಜ್ರಿವಾಲ್ ಅವರಿಗೆ ಪತ್ರ ಬರೆಯುವುದಾಗಿ ಮನೋಜ್ ತಿವಾರಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>