<p><strong>ಚೆನ್ನೈ </strong>: ಮಹಾತ್ಮ ಗಾಂಧಿ ಅವರ ಹತ್ಯೆಯಾದಾಗ ಅವರು ‘ಹೇ ರಾಮ್’ ಎಂದು ಹೇಳಿರಲಿಲ್ಲ ಎಂದು 2006ರಲ್ಲಿ ಹೇಳಿಕೆ ನೀಡಿದ್ದ ಗಾಂಧಿ ಅವರ ಆಪ್ತ ಸಹಾಯಕರಾಗಿದ್ದ ವೆಂಕಿಟ ಕಲ್ಯಾಣಂ ಈಗ ತಮ್ಮ ಹೇಳಿಕೆ ಬದಲಿಸಿದ್ದಾರೆ.</p>.<p>‘ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿತ್ತು’ ಎಂದು ಕಲ್ಯಾಣಂ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.</p>.<p>‘ಗಾಂಧೀಜಿ ‘ಹೇ ರಾಮ್’ ಎಂದು ಹೇಳಿರಲಿಲ್ಲ ಎಂದು ನಾನು ಹೇಳಿಯೇ ಇಲ್ಲ. ಗಾಂಧಿ ಅವರು ‘ಹೇ ರಾಮ್’ ಎಂದು ಹೇಳಿದ್ದು ಕೇಳಿಸಿರಲಿಲ್ಲ ಎಂದಷ್ಟೇ ನಾನು ಹೇಳಿದ್ದೆ. ಗಾಂಧಿ ಅವರಿಗೆ ಗುಂಡು ಬಿದ್ದಾಗ ಎಲ್ಲರೂ ಕೂಗಲಾರಂಭಿಸಿದರು. ಆ ಗದ್ದಲದಲ್ಲಿ ನನಗೆ ಏನೂ ಕೇಳಿಸಲಿಲ್ಲ. ಅವರು ‘ಹೇ ರಾಮ್’ ಎಂದು ಹೇಳಿರಬಹುದು. ನನಗದು ಗೊತ್ತಿಲ್ಲ’ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.</p>.<p>‘ಗೋಡ್ಸೆ ಗಾಂಧಿಯನ್ನು ಒಮ್ಮೆ ಮಾತ್ರ ಕೊಂದ. ಆದರೆ ರಾಜಕಾರಣಿಗಳು ಗಾಂಧಿಯನ್ನು ದಿನವೂ ಕೊಲ್ಲುತ್ತಿದ್ದಾರೆ’ ಎಂದೂ ಕಲ್ಯಾಣಂ ಬೇಸರ ವ್ಯಕ್ತಪಡಿಸಿದ್ದಾರೆ.</p>.<p>96 ವರ್ಷದ ವೆಂಕಿಟ ಅವರು 1943ರಿಂದ 1948ರಲ್ಲಿ ಗಾಂಧಿ ಹತ್ಯೆಯಾಗುವವರೆಗೂ ಅವರ ಆಪ್ತ ಸಹಾಯಕರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ </strong>: ಮಹಾತ್ಮ ಗಾಂಧಿ ಅವರ ಹತ್ಯೆಯಾದಾಗ ಅವರು ‘ಹೇ ರಾಮ್’ ಎಂದು ಹೇಳಿರಲಿಲ್ಲ ಎಂದು 2006ರಲ್ಲಿ ಹೇಳಿಕೆ ನೀಡಿದ್ದ ಗಾಂಧಿ ಅವರ ಆಪ್ತ ಸಹಾಯಕರಾಗಿದ್ದ ವೆಂಕಿಟ ಕಲ್ಯಾಣಂ ಈಗ ತಮ್ಮ ಹೇಳಿಕೆ ಬದಲಿಸಿದ್ದಾರೆ.</p>.<p>‘ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿತ್ತು’ ಎಂದು ಕಲ್ಯಾಣಂ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.</p>.<p>‘ಗಾಂಧೀಜಿ ‘ಹೇ ರಾಮ್’ ಎಂದು ಹೇಳಿರಲಿಲ್ಲ ಎಂದು ನಾನು ಹೇಳಿಯೇ ಇಲ್ಲ. ಗಾಂಧಿ ಅವರು ‘ಹೇ ರಾಮ್’ ಎಂದು ಹೇಳಿದ್ದು ಕೇಳಿಸಿರಲಿಲ್ಲ ಎಂದಷ್ಟೇ ನಾನು ಹೇಳಿದ್ದೆ. ಗಾಂಧಿ ಅವರಿಗೆ ಗುಂಡು ಬಿದ್ದಾಗ ಎಲ್ಲರೂ ಕೂಗಲಾರಂಭಿಸಿದರು. ಆ ಗದ್ದಲದಲ್ಲಿ ನನಗೆ ಏನೂ ಕೇಳಿಸಲಿಲ್ಲ. ಅವರು ‘ಹೇ ರಾಮ್’ ಎಂದು ಹೇಳಿರಬಹುದು. ನನಗದು ಗೊತ್ತಿಲ್ಲ’ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.</p>.<p>‘ಗೋಡ್ಸೆ ಗಾಂಧಿಯನ್ನು ಒಮ್ಮೆ ಮಾತ್ರ ಕೊಂದ. ಆದರೆ ರಾಜಕಾರಣಿಗಳು ಗಾಂಧಿಯನ್ನು ದಿನವೂ ಕೊಲ್ಲುತ್ತಿದ್ದಾರೆ’ ಎಂದೂ ಕಲ್ಯಾಣಂ ಬೇಸರ ವ್ಯಕ್ತಪಡಿಸಿದ್ದಾರೆ.</p>.<p>96 ವರ್ಷದ ವೆಂಕಿಟ ಅವರು 1943ರಿಂದ 1948ರಲ್ಲಿ ಗಾಂಧಿ ಹತ್ಯೆಯಾಗುವವರೆಗೂ ಅವರ ಆಪ್ತ ಸಹಾಯಕರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>