<p><strong>ಚೆನ್ನೈ </strong>: ಆರ್.ಕೆ.ನಗರ ಉಪಚುನಾವಣೆ ಸೋಲಿನ ಬಳಿಕ ಪಕ್ಷವಿರೋಧಿ ಚಟುವಟಿಕೆ ನಡೆಸಿದ ಕೊಯಮತ್ತೂರಿನ ಲೋಕಸಭಾ ಸಂಸದ ಪಿ.ನಾಗರಾಜನ್ ಅವರನ್ನು ಪಕ್ಷದ ಹುದ್ದೆಯಿಂದ ತೆರವುಗೊಳಿಸಲಾಗಿದೆ. ಅದೇ ರೀತಿ ಕಾಂಚೀಪುರ ಜಿಲ್ಲೆಯ ಪಕ್ಷದ ಪದಾಧಿಕಾರಿಗಳನ್ನೂ ವಜಾಗೊಳಿಸಲಾಗಿದೆ.</p>.<p>ಎಐಎಡಿಎಂಕೆ ಸಂಚಾಲಕ ಓ.ಪನೀರ್ಸೆಲ್ವಂ ಮತ್ತು ಸಹಸಂಚಾಲಕ ಕೆ.ಪಳನಿಸ್ವಾಮಿ ನೀಡಿರುವ ಜಂಟಿ ಹೇಳಿಕೆಯಲ್ಲಿ ಈ ವಿಷಯ ತಿಳಿಸಿದ್ದಾರೆ. ‘ಪಕ್ಷದ ಸಿದ್ಧಾಂತಗಳಿಗೆ ವಿರುದ್ಧವಾಗಿ ನಡೆದುಕೊಂಡ, ಪಕ್ಷಕ್ಕೆ ಅಗೌರವ ತೋರಿದ ಕಾರಣಕ್ಕೆ 155 ಪದಾಧಿಕಾರಿಗಳನ್ನು ವಜಾಗೊಳಿಸಲಾಗಿದೆ. 137 ಮಂದಿ ಕಾಂಚೀಪುರ ಜಿಲ್ಲೆಗೆ ಸೇರಿದವರಾಗಿದ್ದು, 18 ಮಂದಿ ಕೊಯಂಬತ್ತೂರ ನಗರ ಘಟಕಕ್ಕೆ ಸೇರಿದವರು’ ಎಂದು ತಿಳಿಸಲಾಗಿದೆ.</p>.<p>ಸೋಮವಾರ ಶಿವಗಂಗಾ ಜಿಲ್ಲೆಯ ಇಬ್ಬರು ನಾಯಕರು ಹಾಗೂ 117 ಪದಾಧಿಕಾರಿಗಳನ್ನು ಪಕ್ಷದಿಂದ ವಜಾಗೊಳಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ </strong>: ಆರ್.ಕೆ.ನಗರ ಉಪಚುನಾವಣೆ ಸೋಲಿನ ಬಳಿಕ ಪಕ್ಷವಿರೋಧಿ ಚಟುವಟಿಕೆ ನಡೆಸಿದ ಕೊಯಮತ್ತೂರಿನ ಲೋಕಸಭಾ ಸಂಸದ ಪಿ.ನಾಗರಾಜನ್ ಅವರನ್ನು ಪಕ್ಷದ ಹುದ್ದೆಯಿಂದ ತೆರವುಗೊಳಿಸಲಾಗಿದೆ. ಅದೇ ರೀತಿ ಕಾಂಚೀಪುರ ಜಿಲ್ಲೆಯ ಪಕ್ಷದ ಪದಾಧಿಕಾರಿಗಳನ್ನೂ ವಜಾಗೊಳಿಸಲಾಗಿದೆ.</p>.<p>ಎಐಎಡಿಎಂಕೆ ಸಂಚಾಲಕ ಓ.ಪನೀರ್ಸೆಲ್ವಂ ಮತ್ತು ಸಹಸಂಚಾಲಕ ಕೆ.ಪಳನಿಸ್ವಾಮಿ ನೀಡಿರುವ ಜಂಟಿ ಹೇಳಿಕೆಯಲ್ಲಿ ಈ ವಿಷಯ ತಿಳಿಸಿದ್ದಾರೆ. ‘ಪಕ್ಷದ ಸಿದ್ಧಾಂತಗಳಿಗೆ ವಿರುದ್ಧವಾಗಿ ನಡೆದುಕೊಂಡ, ಪಕ್ಷಕ್ಕೆ ಅಗೌರವ ತೋರಿದ ಕಾರಣಕ್ಕೆ 155 ಪದಾಧಿಕಾರಿಗಳನ್ನು ವಜಾಗೊಳಿಸಲಾಗಿದೆ. 137 ಮಂದಿ ಕಾಂಚೀಪುರ ಜಿಲ್ಲೆಗೆ ಸೇರಿದವರಾಗಿದ್ದು, 18 ಮಂದಿ ಕೊಯಂಬತ್ತೂರ ನಗರ ಘಟಕಕ್ಕೆ ಸೇರಿದವರು’ ಎಂದು ತಿಳಿಸಲಾಗಿದೆ.</p>.<p>ಸೋಮವಾರ ಶಿವಗಂಗಾ ಜಿಲ್ಲೆಯ ಇಬ್ಬರು ನಾಯಕರು ಹಾಗೂ 117 ಪದಾಧಿಕಾರಿಗಳನ್ನು ಪಕ್ಷದಿಂದ ವಜಾಗೊಳಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>