<p><strong>ಜಮ್ಮು </strong>: ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಶೆಲ್ ದಾಳಿ ನಡೆಸುತ್ತಿರುವ ವಿಚಾರ ಜಮ್ಮು–ಕಾಶ್ಮೀರದ ವಿಧಾನಸಭೆಯಲ್ಲಿ ಗದ್ದಲಕ್ಕೆ ಕಾರಣವಾಯಿತು. ಗಡಿನಿಯಂತ್ರಣ ರೇಖೆಯಲ್ಲಿ ತೀರಾ ಕೆಟ್ಟ ಪರಿಸ್ಥಿತಿ ಇದೆ. ಈ ಬಗ್ಗೆ ವಿವರಣೆ ನೀಡಬೇಕು ಎಂದು ಬಿಜೆಪಿ ಮತ್ತು ಸಿಪಿಐಎಂ ಸದಸ್ಯರು ಉಪ ಮುಖ್ಯಮಂತ್ರಿ ನಿರ್ಮಲ್ ಸಿಂಗ್ ಅವರನ್ನು ಒತ್ತಾಯಿಸಿದರು.</p>.<p>‘ರಜೌರಿಯ ಗಡಿ ನಿಯಂತ್ರಣ ರೇಖೆಯಿಂದ ವಲಸೆ ಹೋಗಿರುವವರಿಗೆ ಬದಲಿ ಸುರಕ್ಷಿತ ಆಶ್ರಯ ಮತ್ತಿತರ ಸೌಲಭ್ಯಗಳನ್ನು ಪೂರೈಸುವಂತೆ ಸರ್ಕಾರ ನಿರ್ದೇಶನ ನೀಡಿದೆ’ ಎಂದು ನಿರ್ಮಲ್ ಸಿಂಗ್ ಉತ್ತರಿಸಿದರು.</p>.<p>ತಾವು ಪ್ರತಿನಿಧಿಸುತ್ತಿರುವ ನೌಷೇರ್ ವಿಧಾನಸಭಾ ಕ್ಷೇತ್ರದಲ್ಲಿ ಶೆಲ್ ಮತ್ತು ಗುಂಡಿನ ದಾಳಿ ಮಿತಿಮೀರಿದೆ. ಅಲ್ಲಿನ ಜನರು ತೊಂದರೆಗೊಳಗಾಗಿ<br /> ದ್ದಾರೆ. ವಲಸೆ ಹೋಗುತ್ತಿದ್ದಾರೆ ಎಂದು ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಶಾಸಕ ರವೀಂದರ್ ರೈನಾ ಹೇಳಿದರು.</p>.<p>ಶಾಲೆಗಳು ಮುಚ್ಚಿವೆ. ಗಡಿ ಭಾಗದ ಮನೆಗಳು ತೊಂದರೆಗೊಳಗಾಗಿವೆ. ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು. ನೌಷೇರ್ ಸೆಕ್ಟರ್ನ ಪರಿಸ್ಥಿತಿಯ ಅಧ್ಯಯನಕ್ಕೆ ಸಚಿವರ ತಂಡವನ್ನು ಕಳುಹಿಸಬೇಕು ಎಂದು ಒತ್ತಾಯಿಸಿದರು.</p>.<p>ಸಿಪಿಐಎಂ ಸದಸ್ಯ ಎಂ.ವೈ. ತಾರಿಗಮಿ ಮತ್ತು ಬಿಜೆಪಿಯ ಇತರ ಸದಸ್ಯರು ಇವರಿಗೆ ಬೆಂಬಲ ವ್ಯಕ್ತ<br /> ಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮ್ಮು </strong>: ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಶೆಲ್ ದಾಳಿ ನಡೆಸುತ್ತಿರುವ ವಿಚಾರ ಜಮ್ಮು–ಕಾಶ್ಮೀರದ ವಿಧಾನಸಭೆಯಲ್ಲಿ ಗದ್ದಲಕ್ಕೆ ಕಾರಣವಾಯಿತು. ಗಡಿನಿಯಂತ್ರಣ ರೇಖೆಯಲ್ಲಿ ತೀರಾ ಕೆಟ್ಟ ಪರಿಸ್ಥಿತಿ ಇದೆ. ಈ ಬಗ್ಗೆ ವಿವರಣೆ ನೀಡಬೇಕು ಎಂದು ಬಿಜೆಪಿ ಮತ್ತು ಸಿಪಿಐಎಂ ಸದಸ್ಯರು ಉಪ ಮುಖ್ಯಮಂತ್ರಿ ನಿರ್ಮಲ್ ಸಿಂಗ್ ಅವರನ್ನು ಒತ್ತಾಯಿಸಿದರು.</p>.<p>‘ರಜೌರಿಯ ಗಡಿ ನಿಯಂತ್ರಣ ರೇಖೆಯಿಂದ ವಲಸೆ ಹೋಗಿರುವವರಿಗೆ ಬದಲಿ ಸುರಕ್ಷಿತ ಆಶ್ರಯ ಮತ್ತಿತರ ಸೌಲಭ್ಯಗಳನ್ನು ಪೂರೈಸುವಂತೆ ಸರ್ಕಾರ ನಿರ್ದೇಶನ ನೀಡಿದೆ’ ಎಂದು ನಿರ್ಮಲ್ ಸಿಂಗ್ ಉತ್ತರಿಸಿದರು.</p>.<p>ತಾವು ಪ್ರತಿನಿಧಿಸುತ್ತಿರುವ ನೌಷೇರ್ ವಿಧಾನಸಭಾ ಕ್ಷೇತ್ರದಲ್ಲಿ ಶೆಲ್ ಮತ್ತು ಗುಂಡಿನ ದಾಳಿ ಮಿತಿಮೀರಿದೆ. ಅಲ್ಲಿನ ಜನರು ತೊಂದರೆಗೊಳಗಾಗಿ<br /> ದ್ದಾರೆ. ವಲಸೆ ಹೋಗುತ್ತಿದ್ದಾರೆ ಎಂದು ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಶಾಸಕ ರವೀಂದರ್ ರೈನಾ ಹೇಳಿದರು.</p>.<p>ಶಾಲೆಗಳು ಮುಚ್ಚಿವೆ. ಗಡಿ ಭಾಗದ ಮನೆಗಳು ತೊಂದರೆಗೊಳಗಾಗಿವೆ. ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು. ನೌಷೇರ್ ಸೆಕ್ಟರ್ನ ಪರಿಸ್ಥಿತಿಯ ಅಧ್ಯಯನಕ್ಕೆ ಸಚಿವರ ತಂಡವನ್ನು ಕಳುಹಿಸಬೇಕು ಎಂದು ಒತ್ತಾಯಿಸಿದರು.</p>.<p>ಸಿಪಿಐಎಂ ಸದಸ್ಯ ಎಂ.ವೈ. ತಾರಿಗಮಿ ಮತ್ತು ಬಿಜೆಪಿಯ ಇತರ ಸದಸ್ಯರು ಇವರಿಗೆ ಬೆಂಬಲ ವ್ಯಕ್ತ<br /> ಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>