<p><strong>ನವದೆಹಲಿ </strong>: ಬೀಗಮುದ್ರೆ ಅಭಿಯಾನಕ್ಕೆ ತಾತ್ಕಾಲಿಕ ನಿಷೇಧ ಹೇರುವಂತೆ ಕೋರಿ ಸುಪ್ರೀಂಕೋರ್ಟ್ ಮೊರೆಹೋಗಲು ದೆಹಲಿಯ ಆಮ್ಆದ್ಮಿ ಪಕ್ಷದ ಸರ್ಕಾರ ನಿರ್ಧರಿಸಿದೆ. ಈ ಕುರಿತಂತೆ ಬಿಜೆಪಿಯ ಮುಖಂಡರು ಹಾಗೂ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜತೆಗೆ ನಡೆದ ಮಾತುಕತೆಯೂ ಯಾವುದೇ ನಿರ್ಧಾರಕ್ಕೆ ಬರಲು ವಿಫಲವಾಗಿದ್ದರಿಂದ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.</p>.<p>ಆಪ್ ಸರ್ಕಾರವು ಈ ವಿಚಾರವನ್ನು ಬೇರೆಡೆಗೆ ತಿರುಗಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿ ದೆಹಲಿ ಬಿಜೆಪಿ ಘಟಕದ ಅಧ್ಯಕ್ಷ ಮನೋಜ್ ತಿವಾರಿ ನೇತೃತ್ವದ ನಿಯೋಗದ ಸಭೆ ಬಹಿಷ್ಕರಿಸಿ ಹೊರನಡೆಯಿತು.</p>.<p>ಇದಾದ ಬಳಿಕ ಮಾತನಾಡಿದ ಕೇಜ್ರಿವಾಲ್, ‘ ಸಭೆಯಲ್ಲಿ ಬಿಜೆಪಿ ಭಾಗವಹಿಸದಿರುವುದು ಬೇಸರ ಮೂಡಿಸಿದೆ. ‘ತಾತ್ಕಾಲಿಕ ನಿಷೇಧ’ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಸರ್ಕಾರವು ಸುಪ್ರೀಂಕೋರ್ಟ್ನಲ್ಲಿ ಮನವಿ ಸಲ್ಲಿಸಲಿದೆ’ ಎಂದು ಅವರು ತಿಳಿಸಿದರು.‘</p>.<p>’ ಬೀಗಮುದ್ರೆ ಅಭಿಯಾನವನ್ನು ರ್ಯಾಲಿಯಾಗಿ ಪರಿವರ್ತಿಸಲು ಕೇಜ್ರಿವಾಲ್ ಮುಂದಾದರು. ಇದು ನಿಜಕ್ಕೂ ಅಪಾಯಕಾರಿಯಾದ ಬೆಳವಣಿಗೆ. ಸಮಸ್ಯೆಗೆ ಪರಿಹಾರ ಹುಡುಕುವುದು ಅವರಿಗೆ ಇಷ್ಟವಿಲ್ಲ’ ಎಂದು ಮನೋಜ್ ತಿವಾರಿ ದೂರಿದರು.</p>.<p>ಇದೇ ವೇಳೆ ಮಾತನಾಡಿದ ಬಿಜೆಪಿ ಶಾಸಕ ವಿಜೇಂದರ್ ಗುಪ್ತಾ, ’ಸಭೆ ನಡೆಯುತ್ತಿದ್ದ ವೇಳೆ ಆಮ್ಆದ್ಮಿ ಪಕ್ಷದ ಕಾರ್ಯಕರ್ತರು ಒಳಗೆ ಪ್ರವೇಶಿಸಿ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಲು ಮುಂದಾದರು. ಈ ಕುರಿತಂತೆ ಆಮ್ಆದ್ಮಿ ಶಾಸಕರ ವಿರುದ್ಧ ಸಲ್ಲಿಸಲಿದ್ದೇನೆ’ ಎಂದರು.<br /> ***<br /> <strong>ಬೀಗಮುದ್ರೆ ಅಭಿಯಾನ ಏನು ?</strong></p>.<p>ದೆಹಲಿ ನಗರದ ಒಳಗೆ ಹಾಗೂ ಜನವಸತಿ ಪ್ರದೇಶದಲ್ಲಿ ಅಕ್ರಮವಾಗಿ ನಡೆಯುತ್ತಿರುವ ವ್ಯಾಪಾರ ಮಳಿಗೆಗಳಿಗೆ ದೆಹಲಿ ಮಹಾನಗರಪಾಲಿಕೆ ಕಳೆದ ತಿಂಗಳು ಬೀಗಮುದ್ರೆ ಹಾಕುವುದಕ್ಕೆ ‘ಬೀಗಮುದ್ರೆ ಅಭಿಯಾನ’ ಎಂದು ಕರೆಯಲಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ </strong>: ಬೀಗಮುದ್ರೆ ಅಭಿಯಾನಕ್ಕೆ ತಾತ್ಕಾಲಿಕ ನಿಷೇಧ ಹೇರುವಂತೆ ಕೋರಿ ಸುಪ್ರೀಂಕೋರ್ಟ್ ಮೊರೆಹೋಗಲು ದೆಹಲಿಯ ಆಮ್ಆದ್ಮಿ ಪಕ್ಷದ ಸರ್ಕಾರ ನಿರ್ಧರಿಸಿದೆ. ಈ ಕುರಿತಂತೆ ಬಿಜೆಪಿಯ ಮುಖಂಡರು ಹಾಗೂ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜತೆಗೆ ನಡೆದ ಮಾತುಕತೆಯೂ ಯಾವುದೇ ನಿರ್ಧಾರಕ್ಕೆ ಬರಲು ವಿಫಲವಾಗಿದ್ದರಿಂದ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.</p>.<p>ಆಪ್ ಸರ್ಕಾರವು ಈ ವಿಚಾರವನ್ನು ಬೇರೆಡೆಗೆ ತಿರುಗಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿ ದೆಹಲಿ ಬಿಜೆಪಿ ಘಟಕದ ಅಧ್ಯಕ್ಷ ಮನೋಜ್ ತಿವಾರಿ ನೇತೃತ್ವದ ನಿಯೋಗದ ಸಭೆ ಬಹಿಷ್ಕರಿಸಿ ಹೊರನಡೆಯಿತು.</p>.<p>ಇದಾದ ಬಳಿಕ ಮಾತನಾಡಿದ ಕೇಜ್ರಿವಾಲ್, ‘ ಸಭೆಯಲ್ಲಿ ಬಿಜೆಪಿ ಭಾಗವಹಿಸದಿರುವುದು ಬೇಸರ ಮೂಡಿಸಿದೆ. ‘ತಾತ್ಕಾಲಿಕ ನಿಷೇಧ’ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಸರ್ಕಾರವು ಸುಪ್ರೀಂಕೋರ್ಟ್ನಲ್ಲಿ ಮನವಿ ಸಲ್ಲಿಸಲಿದೆ’ ಎಂದು ಅವರು ತಿಳಿಸಿದರು.‘</p>.<p>’ ಬೀಗಮುದ್ರೆ ಅಭಿಯಾನವನ್ನು ರ್ಯಾಲಿಯಾಗಿ ಪರಿವರ್ತಿಸಲು ಕೇಜ್ರಿವಾಲ್ ಮುಂದಾದರು. ಇದು ನಿಜಕ್ಕೂ ಅಪಾಯಕಾರಿಯಾದ ಬೆಳವಣಿಗೆ. ಸಮಸ್ಯೆಗೆ ಪರಿಹಾರ ಹುಡುಕುವುದು ಅವರಿಗೆ ಇಷ್ಟವಿಲ್ಲ’ ಎಂದು ಮನೋಜ್ ತಿವಾರಿ ದೂರಿದರು.</p>.<p>ಇದೇ ವೇಳೆ ಮಾತನಾಡಿದ ಬಿಜೆಪಿ ಶಾಸಕ ವಿಜೇಂದರ್ ಗುಪ್ತಾ, ’ಸಭೆ ನಡೆಯುತ್ತಿದ್ದ ವೇಳೆ ಆಮ್ಆದ್ಮಿ ಪಕ್ಷದ ಕಾರ್ಯಕರ್ತರು ಒಳಗೆ ಪ್ರವೇಶಿಸಿ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಲು ಮುಂದಾದರು. ಈ ಕುರಿತಂತೆ ಆಮ್ಆದ್ಮಿ ಶಾಸಕರ ವಿರುದ್ಧ ಸಲ್ಲಿಸಲಿದ್ದೇನೆ’ ಎಂದರು.<br /> ***<br /> <strong>ಬೀಗಮುದ್ರೆ ಅಭಿಯಾನ ಏನು ?</strong></p>.<p>ದೆಹಲಿ ನಗರದ ಒಳಗೆ ಹಾಗೂ ಜನವಸತಿ ಪ್ರದೇಶದಲ್ಲಿ ಅಕ್ರಮವಾಗಿ ನಡೆಯುತ್ತಿರುವ ವ್ಯಾಪಾರ ಮಳಿಗೆಗಳಿಗೆ ದೆಹಲಿ ಮಹಾನಗರಪಾಲಿಕೆ ಕಳೆದ ತಿಂಗಳು ಬೀಗಮುದ್ರೆ ಹಾಕುವುದಕ್ಕೆ ‘ಬೀಗಮುದ್ರೆ ಅಭಿಯಾನ’ ಎಂದು ಕರೆಯಲಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>