ಶಾಲೆಯ ಮುಂದೆ ಪ್ರತಿಭಟನೆ: ಶಾಲಾ ಆಡಳಿತ ಮಂಡಳಿಯೂ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸುತ್ತಿದೆ ಎಂದು ಆರೋಪಿಸಿ ಕುಟುಂಬ ಸದಸ್ಯರು ದೂರಿದರು. ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಕುಟುಂಬ ಸದಸ್ಯರ ಜತೆಗೂಡಿ ಸ್ಥಳೀಯ ನಿವಾಸಿಗಳು ಕರವಾಲ್ ನಗರದ ಚೌಕದಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರನ್ನು ಭೇಟಿಯಾದ ಸ್ಥಳೀಯ ಶಾಸಕ ಕಪಿಲ್ ಮಿಶ್ರಾ, ಪರಿಸ್ಥಿತಿಯನ್ನು ಪರಾಮರ್ಶೆ ನಡೆಸುತ್ತಿದ್ದು, ಪೊಲೀಸರು, ಆಸ್ಪತ್ರೆ ಅಧಿಕಾರಿಗಳ ಜತೆ ಸಂಪರ್ಕದಲ್ಲಿರುವುದಾಗಿ ಅವರು ತಿಳಿಸಿದರು.
**
ಮೂವರು ಸಹಪಾಠಿಗಳ ಬಂಧನ
‘ಬಾಲಕನ ನಿಗೂಢ ಸಾವಿಗೆ ಸಂಬಂಧಿಸಿದಂತೆ ಮೂವರು ಸಹಪಾಠಿಗಳನ್ನು ಬಂಧಿಸಲಾಗಿದೆ’ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.