ಹೈದರಾಬಾದ್: ಕೇಂದ್ರ ಬಜೆಟ್ನಲ್ಲಿ ಆಂಧ್ರ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್ ನೀಡದ ಅಸಮಾಧಾನದಲ್ಲಿದ್ದ ತೆಲುಗು ದೇಶಂ ಪಕ್ಷ (ಟಿಡಿಪಿ) ಇದೀಗ, ಸದ್ಯದ ಮಟ್ಟಿಗೆ ಎನ್ಡಿಎ ಮೈತ್ರಿಕೂಟದಲ್ಲೇ ಮುಂದುವರಿಯಲು ನಿರ್ಧರಿಸಿರುವುದಾಗಿ ತಿಳಿಸಿದೆ. ಆದರೆ, ಆಂಧ್ರ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್ ನೀಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವುದಾಗಿ ತಿಳಿಸಿದೆ.