<p><strong>ನವದೆಹಲಿ: </strong>ಪಂಜಾಬ್ ನ್ಯಾಷನಲ್ ಬ್ಯಾಂಕ್ಗೆ (ಪಿಎನ್ಬಿ) ವಂಚಿಸಿದ ವಜ್ರಾಭರಣ ಉದ್ಯಮಿ ನೀರವ್ ಮೋದಿ ಹಾಗೂ ಪಾಲುದಾರರಿಗೆ ಸೇರಿದ ಕಂಪನಿಗಳ ಮೇಲೆ ಹಲವಾರು ತನಿಖಾ ಸಂಸ್ಥೆಗಳು ಒಮ್ಮೆಲೆ ಮುಗಿಬಿದ್ದಿವೆ.</p>.<p>ಸಿಬಿಐ ಅಧಿಕಾರಿಗಳು ದೆಹಲಿಯ ಪಿಎನ್ಬಿ ಬ್ರಾಡಿ ಹೌಸ್ ಶಾಖೆಯಲ್ಲಿ ಭಾನುವಾರ ಆರಂಭಿಸಿದ್ದ ಶೋಧ ಕಾರ್ಯಾಚರಣೆ ಸೋಮವಾರ ಅಂತ್ಯಗೊಂಡಿದೆ.</p>.<p>ಸೋಮವಾರ ಬೆಳಿಗ್ಗೆ ಬ್ಯಾಂಕ್ಗೆ ಬೀಗ ಹಾಕಿದ್ದ ಅಧಿಕಾರಿಗಳು, ಪೊಲೀಸ್ ಭದ್ರತೆಯಲ್ಲಿ ದಾಖಲೆಗಳಿಗಾಗಿ ಜಾಲಾಡಿದರು. ಮಧ್ಯಾಹ್ನ ಬೀಗ ತೆರವುಗೊಳಿಸಿದ ನಂತರ ಬ್ಯಾಂಕ್ ವಹಿವಾಟು ಆರಂಭವಾಯಿತು.</p>.<p>ಈ ನಡುವೆ ನೀರವ್ ಮೋದಿ ಅವರ ಫೈರ್ ಸ್ಟಾರ್ ವಜ್ರಾಭರಣ ಸಂಸ್ಥೆಯ ಹಣಕಾಸು ವಿಭಾಗದ ಅಧ್ಯಕ್ಷ ವಿಪುಲ್ ಅಂಬಾನಿ, ಮುಖ್ಯ ಹಣಕಾಸು ಅಧಿಕಾರಿ ರವಿ ಗುಪ್ತಾ, ಅಧಿಕಾರಿಗಳಾದ ಸೌರಭ್ ಶರ್ಮಾ, ಸುಭಾಸ್ ಪರಬ್ ಅವರನ್ನು ಸಿಬಿಐ ಅಧಿಕಾರಿಗಳು ಪ್ರಶ್ನಿಸುತ್ತಿದ್ದಾರೆ.</p>.<p>ವಿಪುಲ್ ಅವರು ಉದ್ಯಮಿ ಧೀರೂಬಾಯಿ ಅಂಬಾನಿ ಅವರ ಸಂಬಂಧಿ ಎನ್ನಲಾಗಿದೆ.</p>.<p>ಹಗರಣದಲ್ಲಿ ಈ ಮೊದಲು ಬಂಧಿಸಲಾದ ಪಿಎನ್ಬಿಯ ಇಬ್ಬರು ಅಧಿಕಾರಿಗಳು ಮಹತ್ವದ ಸುಳಿವು ನೀಡಿದ್ದಾರೆ. ಇದರೊಂದಿಗೆ ಉಳಿದ 13 ಅಧಿಕಾರಿಗಳನ್ನೂ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.</p>.<p>ಕೇಂದ್ರೀಯ ಜಾಗೃತ ಆಯುಕ್ತ ಕೆ.ವಿ. ಚೌಧರಿ ಅವರು ಪಿಎನ್ಬಿ ಮತ್ತು ಹಣಕಾಸು ಸಚಿವಾಲಯದ ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿ ಮಾಹಿತಿ ಪಡೆದಿದ್ದಾರೆ.</p>.<p>ಜಾರಿ ನಿರ್ದೇಶನಾಲಯದ ಮುಖ್ಯಸ್ಥ ಕರ್ನಲ್ ಸಿಂಗ್ ಅವರು ಮುಂಬೈಗೆ ಧಾವಿಸಿದ್ದಾರೆ. ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ನೀರವ್ ಮೋದಿ ಹಾಗೂ ಇತರರಿಗೆ ಸೇರಿದ 12ಕ್ಕೂ ಹೆಚ್ಚು ಸ್ಥಿರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.</p>.<p><strong>‘ಆರ್ಬಿಐ, ಗವರ್ನರ್ ಕೂಡ ಹೊಣೆ’</strong></p>.<p>ಮುಂಬೈ: ಪಂಜಾಬ್ ನ್ಯಾಷನಲ್ ಬ್ಯಾಂಕ್–ನೀರವ್ ಮೋದಿ ಹಗರಣದಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಮತ್ತು ಅದರ ಗವರ್ನರ್ಗಳು ಕೂಡ ಹೊಣೆ ಹೊರಬೇಕಾಗುತ್ತದೆ ಎಂದು ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ (ಎಐಬಿಇಎ) ಹೇಳಿದೆ.</p>.<p>ಪಂಜಾಬ್ ನ್ಯಾಷನಲ್ ಬ್ಯಾಂಕ್ನಷ್ಟೇ ಆರ್ಬಿಐ ಕೂಡ ಉತ್ತರದಾಯಿತ್ವ ಹೊಂದಿದೆ. ಈ ಹಗರಣಕ್ಕೆ ಸಂಬಂಧಿಸಿದಂತೆ ಆರ್ಬಿಐ ಕೂಡ ಅನೇಕ ಪ್ರಶ್ನೆಗಳಿಗೆ ಉತ್ತರಿಸಬೇಕಾಗುತ್ತದೆ ಎಂದು ಮಹಾರಾಷ್ಟ್ರ ಸ್ಟೇಟ್ ಬ್ಯಾಂಕ್ ಉದ್ಯೋಗಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ವಿಶ್ವಾಸ್ ಉಟಗಿ ಹೇಳಿದ್ದಾರೆ.</p>.<p>ಹಗರಣ ನಡೆದಾಗ ಆರ್ಬಿಐ ಗವರ್ನರ್ಗಳಾದ ವೈ.ವಿ. ರೆಡ್ಡಿ, ಡಿ. ಸುಬ್ಬಾರಾವ್, ರಘುರಾಂ ರಾಜನ್ ಮತ್ತು ಉರ್ಜಿತ್ ಪಟೇಲ್ ಏನು ಮಾಡುತ್ತಿದ್ದರು ಎಂದು ಅವರು ಪ್ರಶ್ನಿಸಿದ್ದಾರೆ.</p>.<p>2011ರಲ್ಲಿ ಅಷ್ಟೊಂದು ದೊಡ್ಡ ಮೊತ್ತದ ಸಾಲ ಖಾತರಿ ಪತ್ರದ ಬಗ್ಗೆ ಏಕೆ ಆರ್ಬಿಐ ಮತ್ತು ಪಿಎನ್ಬಿ ಆಡಳಿತ ಏಕೆ ಆಕ್ಷೇಪ ಎತ್ತಲಿಲ್ಲ. ಹಲವು ಹಂತದ ಪರಿಶೀಲನೆ ವ್ಯವಸ್ಥೆ ಇದ್ದರೂ ಯಾವ ಹಂತದಲ್ಲೂ ಈ ಅಕ್ರಮಗಳ ಬಗ್ಗೆ ಯಾಕೆ ಪ್ರಸ್ತಾಪಿಸಲಿಲ್ಲ ಎಂದು ಉಟಗಿ ಪ್ರಶ್ನಿಸಿದ್ದಾರೆ.</p>.<p>ಬ್ಯಾಂಕ್ ಶಾಖೆಗಳ ಹಂತದ ಅಧಿಕಾರಿಗಳಿಗಿಂತ ಉನ್ನತ ಮಟ್ಟದ ಅಧಿಕಾರಿಗಳು ಈ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಪಂಜಾಬ್ ನ್ಯಾಷನಲ್ ಬ್ಯಾಂಕ್ಗೆ (ಪಿಎನ್ಬಿ) ವಂಚಿಸಿದ ವಜ್ರಾಭರಣ ಉದ್ಯಮಿ ನೀರವ್ ಮೋದಿ ಹಾಗೂ ಪಾಲುದಾರರಿಗೆ ಸೇರಿದ ಕಂಪನಿಗಳ ಮೇಲೆ ಹಲವಾರು ತನಿಖಾ ಸಂಸ್ಥೆಗಳು ಒಮ್ಮೆಲೆ ಮುಗಿಬಿದ್ದಿವೆ.</p>.<p>ಸಿಬಿಐ ಅಧಿಕಾರಿಗಳು ದೆಹಲಿಯ ಪಿಎನ್ಬಿ ಬ್ರಾಡಿ ಹೌಸ್ ಶಾಖೆಯಲ್ಲಿ ಭಾನುವಾರ ಆರಂಭಿಸಿದ್ದ ಶೋಧ ಕಾರ್ಯಾಚರಣೆ ಸೋಮವಾರ ಅಂತ್ಯಗೊಂಡಿದೆ.</p>.<p>ಸೋಮವಾರ ಬೆಳಿಗ್ಗೆ ಬ್ಯಾಂಕ್ಗೆ ಬೀಗ ಹಾಕಿದ್ದ ಅಧಿಕಾರಿಗಳು, ಪೊಲೀಸ್ ಭದ್ರತೆಯಲ್ಲಿ ದಾಖಲೆಗಳಿಗಾಗಿ ಜಾಲಾಡಿದರು. ಮಧ್ಯಾಹ್ನ ಬೀಗ ತೆರವುಗೊಳಿಸಿದ ನಂತರ ಬ್ಯಾಂಕ್ ವಹಿವಾಟು ಆರಂಭವಾಯಿತು.</p>.<p>ಈ ನಡುವೆ ನೀರವ್ ಮೋದಿ ಅವರ ಫೈರ್ ಸ್ಟಾರ್ ವಜ್ರಾಭರಣ ಸಂಸ್ಥೆಯ ಹಣಕಾಸು ವಿಭಾಗದ ಅಧ್ಯಕ್ಷ ವಿಪುಲ್ ಅಂಬಾನಿ, ಮುಖ್ಯ ಹಣಕಾಸು ಅಧಿಕಾರಿ ರವಿ ಗುಪ್ತಾ, ಅಧಿಕಾರಿಗಳಾದ ಸೌರಭ್ ಶರ್ಮಾ, ಸುಭಾಸ್ ಪರಬ್ ಅವರನ್ನು ಸಿಬಿಐ ಅಧಿಕಾರಿಗಳು ಪ್ರಶ್ನಿಸುತ್ತಿದ್ದಾರೆ.</p>.<p>ವಿಪುಲ್ ಅವರು ಉದ್ಯಮಿ ಧೀರೂಬಾಯಿ ಅಂಬಾನಿ ಅವರ ಸಂಬಂಧಿ ಎನ್ನಲಾಗಿದೆ.</p>.<p>ಹಗರಣದಲ್ಲಿ ಈ ಮೊದಲು ಬಂಧಿಸಲಾದ ಪಿಎನ್ಬಿಯ ಇಬ್ಬರು ಅಧಿಕಾರಿಗಳು ಮಹತ್ವದ ಸುಳಿವು ನೀಡಿದ್ದಾರೆ. ಇದರೊಂದಿಗೆ ಉಳಿದ 13 ಅಧಿಕಾರಿಗಳನ್ನೂ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.</p>.<p>ಕೇಂದ್ರೀಯ ಜಾಗೃತ ಆಯುಕ್ತ ಕೆ.ವಿ. ಚೌಧರಿ ಅವರು ಪಿಎನ್ಬಿ ಮತ್ತು ಹಣಕಾಸು ಸಚಿವಾಲಯದ ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿ ಮಾಹಿತಿ ಪಡೆದಿದ್ದಾರೆ.</p>.<p>ಜಾರಿ ನಿರ್ದೇಶನಾಲಯದ ಮುಖ್ಯಸ್ಥ ಕರ್ನಲ್ ಸಿಂಗ್ ಅವರು ಮುಂಬೈಗೆ ಧಾವಿಸಿದ್ದಾರೆ. ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ನೀರವ್ ಮೋದಿ ಹಾಗೂ ಇತರರಿಗೆ ಸೇರಿದ 12ಕ್ಕೂ ಹೆಚ್ಚು ಸ್ಥಿರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.</p>.<p><strong>‘ಆರ್ಬಿಐ, ಗವರ್ನರ್ ಕೂಡ ಹೊಣೆ’</strong></p>.<p>ಮುಂಬೈ: ಪಂಜಾಬ್ ನ್ಯಾಷನಲ್ ಬ್ಯಾಂಕ್–ನೀರವ್ ಮೋದಿ ಹಗರಣದಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಮತ್ತು ಅದರ ಗವರ್ನರ್ಗಳು ಕೂಡ ಹೊಣೆ ಹೊರಬೇಕಾಗುತ್ತದೆ ಎಂದು ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ (ಎಐಬಿಇಎ) ಹೇಳಿದೆ.</p>.<p>ಪಂಜಾಬ್ ನ್ಯಾಷನಲ್ ಬ್ಯಾಂಕ್ನಷ್ಟೇ ಆರ್ಬಿಐ ಕೂಡ ಉತ್ತರದಾಯಿತ್ವ ಹೊಂದಿದೆ. ಈ ಹಗರಣಕ್ಕೆ ಸಂಬಂಧಿಸಿದಂತೆ ಆರ್ಬಿಐ ಕೂಡ ಅನೇಕ ಪ್ರಶ್ನೆಗಳಿಗೆ ಉತ್ತರಿಸಬೇಕಾಗುತ್ತದೆ ಎಂದು ಮಹಾರಾಷ್ಟ್ರ ಸ್ಟೇಟ್ ಬ್ಯಾಂಕ್ ಉದ್ಯೋಗಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ವಿಶ್ವಾಸ್ ಉಟಗಿ ಹೇಳಿದ್ದಾರೆ.</p>.<p>ಹಗರಣ ನಡೆದಾಗ ಆರ್ಬಿಐ ಗವರ್ನರ್ಗಳಾದ ವೈ.ವಿ. ರೆಡ್ಡಿ, ಡಿ. ಸುಬ್ಬಾರಾವ್, ರಘುರಾಂ ರಾಜನ್ ಮತ್ತು ಉರ್ಜಿತ್ ಪಟೇಲ್ ಏನು ಮಾಡುತ್ತಿದ್ದರು ಎಂದು ಅವರು ಪ್ರಶ್ನಿಸಿದ್ದಾರೆ.</p>.<p>2011ರಲ್ಲಿ ಅಷ್ಟೊಂದು ದೊಡ್ಡ ಮೊತ್ತದ ಸಾಲ ಖಾತರಿ ಪತ್ರದ ಬಗ್ಗೆ ಏಕೆ ಆರ್ಬಿಐ ಮತ್ತು ಪಿಎನ್ಬಿ ಆಡಳಿತ ಏಕೆ ಆಕ್ಷೇಪ ಎತ್ತಲಿಲ್ಲ. ಹಲವು ಹಂತದ ಪರಿಶೀಲನೆ ವ್ಯವಸ್ಥೆ ಇದ್ದರೂ ಯಾವ ಹಂತದಲ್ಲೂ ಈ ಅಕ್ರಮಗಳ ಬಗ್ಗೆ ಯಾಕೆ ಪ್ರಸ್ತಾಪಿಸಲಿಲ್ಲ ಎಂದು ಉಟಗಿ ಪ್ರಶ್ನಿಸಿದ್ದಾರೆ.</p>.<p>ಬ್ಯಾಂಕ್ ಶಾಖೆಗಳ ಹಂತದ ಅಧಿಕಾರಿಗಳಿಗಿಂತ ಉನ್ನತ ಮಟ್ಟದ ಅಧಿಕಾರಿಗಳು ಈ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>